July 2023

ರೋಗಿ ಜೊತೆಗೆ ನರ್ಸ್‌ನ ಪಲ್ಲಂಗದಾಟ| ಹೃದಯಾಘಾತದಿಂದ ರೋಗಿ‌ ಸಾವು

ಸಮಗ್ರ ನ್ಯೂಸ್: ಆಸ್ಪತ್ರೆಯಲ್ಲಿ ರೋಗಿಯ ಜೊತೆ ನರ್ಸ್ ಸೆಕ್ಸ್ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿ ರೋಗಿ ಮೃತಪಟ್ಟ ಘಟನೆ ಬ್ರಿಟನ್ ನ ವೇಲ್ಸ್ ನಲ್ಲಿ ನಡೆದಿದ್ದು, ನರ್ಸ್ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ. ನರ್ಸ್ ಒಂದು ವರ್ಷದಿಂದ ಆಸ್ಪತ್ರೆಯಲ್ಲಿದ್ದ ರೋಗಿಯನ್ನು ಪ್ರೇಮಿಸಿದ್ದು ಇಬ್ಬರು ಕಾರು ಪಾರ್ಕಿಂಗ್ ನಲ್ಲಿ ಲೈಂಗಿಕ ಸಂಪರ್ಕ ನಡೆಸಿದ್ದರು. ಕಾರಿನ ಹಿಂಬದಿ ಸೀಟಿನಲ್ಲಿ ರೋಗಿಯ ದೇಹ ಪತ್ತೆಯಾಗಿದ್ದು ಪ್ಯಾಂಟ್ ಕೆಳಗೆ ಜಾರಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನರ್ಸ್ 42 ವರ್ಷದ ಫಿಲಿಪ್ಪೊನಿ ವಿಲಿಯಮ್ಸ್ ಎಂದು ಗುರುತಿಸಲಾಗಿದ್ದು, […]

ರೋಗಿ ಜೊತೆಗೆ ನರ್ಸ್‌ನ ಪಲ್ಲಂಗದಾಟ| ಹೃದಯಾಘಾತದಿಂದ ರೋಗಿ‌ ಸಾವು Read More »

ಉಡುಪಿ: ಓವರ್ ಪಾಸ್ ಕಾಮಗಾರಿ ಪಕ್ಕ ಸರ್ವೀಸ್ ರಸ್ತೆ ಕುಸಿತ

ಸಮಗ್ರ ನ್ಯೂಸ್: ಉಡುಪಿಯ ಸಂತೆಕಟ್ಟೆ ಬಳಿ ಕಾಮಗಾರಿ ಹಂತದಲ್ಲಿರುವ ಓವರ್ ಪಾಸ್ ಕಾಮಗಾರಿಯ ಬೃಹತ್ ಹೊಂಡದ ಒಂದು ಭಾಗ ಕುಸಿದಿದ್ದು, ಸ್ಥಳೀಯರಲ್ಲಿ ಆತಂಕ‌ ಸೃಷ್ಟಿಯಾಗಿದೆ. ರಸ್ತೆ ನಿರ್ಮಾಣಕ್ಕಾಗಿ ಹೊಂಡ ತೋಡಲಾಗಿದ್ದು, ಹೊಂಡದಲ್ಲಿ ಭಾರೀ ಪ್ರಮಾಣದ ಬಂಡೆ ಕಲ್ಲು ಕಂಡುಬಂದ ಕಾರಣ ಕಾಮಗಾರಿ ಬಹುತೇಕ ನಿಧಾನಗೊಂಡಿತ್ತು. ಬಳಿಕ ಭಾರೀ ಮಳೆಗೆ ಟಾರ್ಪಲ್ ಅಳವಡಿಕೆ ಮಾಡಲಾಗಿತ್ತು. ಆದರೆ ಇಂದು ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.

ಉಡುಪಿ: ಓವರ್ ಪಾಸ್ ಕಾಮಗಾರಿ ಪಕ್ಕ ಸರ್ವೀಸ್ ರಸ್ತೆ ಕುಸಿತ Read More »

ಸುಳ್ಯ: ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದ ಆರೋಪದಡಿ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾದ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಜು. 7ರಂದು ಉಬರಡ್ಕದ ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್ ದೈಹಿಕ ಸಂಪರ್ಕ ಎಸಗಿರುವುದನ್ನು

ಸುಳ್ಯ: ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಯುವಕ ಅರೆಸ್ಟ್ Read More »

ಬೆಳಗಾವಿ:ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಗಳ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದಲ್ಲಿ ನಡೆದಿದೆ. ಮಾವನೂರ ಗ್ರಾಮದಲ್ಲಿ ದಂಪತಿ ಭೀಕರ ಹತ್ಯೆಯಾಗಿದ್ದುಗಜೇಂದ್ರ ವಣ್ಣೂರೆ(60), ದ್ರಾಕ್ಷಾಯಿಣಿ ವಣ್ಣೂರೆ(48) ಕೊಲೆಯಾದ ದಂಪತಿ. ಸ್ವಂತ ಮನೆಯಲ್ಲೆ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಜುಲೈ 7ರ ಮಧ್ಯರಾತ್ರಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಗಿಲು ತಗೆದು ನೋಡಿದಾಗ ಜೋಡಿ ಕೊಲೆ ಬೆಳಕಿಗೆ ಬಂದಿದೆ.

ಬೆಳಗಾವಿ:ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲ್ಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಮತ್ತು ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಬೆಳ್ಳಾರೆ ವಲಯದ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬಾಳಿಲ ಒಕ್ಕೂಟದಲ್ಲಿ ಮಾಡಲಾಯಿತು. ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ತ್ರಿವೇಣಿ ರವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳಾರೆ ವಲಯದ ವಲಯ ಅಧ್ಯಕ್ಷರು ಶ್ರೀಮತಿ ವೇದ ಶೆಟ್ಟಿ.ಹೆಚ್ ರವರು ದೀಪ ಬೆಳಗುವುದರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ Read More »

ವಿಪಕ್ಷ ನಾಯಕನಿಲ್ಲದೆ ಎರಡನೇ ವಾರಕ್ಕೆ ಕಾಲಿಟ್ಟ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ವಿಪಕ್ಷಗಳ ಸರ್ಕಸ್

ಸಮಗ್ರ ನ್ಯೂಸ್: ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದು ಎರಡನೇ ವಾರಕ್ಕೆ ಕಾಲಿಟ್ಟಿದೆ. ಹೀಗಿದ್ದರೂ, ವಿರೋಧ ಪಕ್ಷಗಳಿಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು ತಿಂಗಳಾಗುತ್ತಿದ್ದರೂ, ವಿಧಾನ ಮಂಡಲ ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ ಪ್ರತಿಪಕ್ಷಕ್ಕೆ ಅಧಿಕೃತ ನಾಯಕರು ಇಲ್ಲದಂತಾಗಿದೆ. ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸಿ ಹಿರಿಯ ಮುಖಂಡರು ಹಾಗೂ ಶಾಸಕರಿಂದ ಅಭಿಪ್ರಾಯ ಪಡೆದುಕೊಂಡಿದ್ದು, ವರಿಷ್ಠರಿಗೆ ವರದಿಯನ್ನು ನೀಡಲಾಗಿದೆ. ಆದರೆ, ಇದುವರೆಗೂ

ವಿಪಕ್ಷ ನಾಯಕನಿಲ್ಲದೆ ಎರಡನೇ ವಾರಕ್ಕೆ ಕಾಲಿಟ್ಟ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ವಿಪಕ್ಷಗಳ ಸರ್ಕಸ್ Read More »

ಮೈಸೂರು: ಹನುಮ ಜಯಂತಿ ವೇಳೆ ಗುಂಪುಘರ್ಷಣೆ| ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಟಿ. ನರಸೀಪುರ ಪಟ್ಟಣದಲ್ಲಿ ಹನುಮಜಯಂತಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಬಳಿಕ ಪಟ್ಟಣದ ಹೊರವಲಯದಲ್ಲಿ ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ

ಮೈಸೂರು: ಹನುಮ ಜಯಂತಿ ವೇಳೆ ಗುಂಪುಘರ್ಷಣೆ| ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ Read More »

ಬೆಂಗಳೂರು – ಹುಬ್ಬಳ್ಳಿ ಡೈಲಿ ಎಕ್ಸ್​ಪ್ರೆಸ್​ ರೈಲು ಶಾಶ್ವತವಾಗಿ ರದ್ದು

ಸಮಗ್ರ ನ್ಯೂಸ್: ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ಆಗಮಿಸುತ್ತಿತ್ತು. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತಿತ್ತು. ಬೆಂಗಳೂರು-ಹುಬ್ಬಳ್ಳಿ ಡೈಲಿ ಎಕ್ಸ್​ಪ್ರೆಸ್​ ವಿಶೇಷ ರೈಲು ಸಂಖ್ಯೆ 07353/07354 ಜುಲೈ 16 ರಿಂದ ಶಾಶ್ವತವಾಗಿ ರದ್ದುಗೊಂಡಿದೆ ಎಂದು ಸೌತ್ ವೆಸ್ಟರ್ನ್ ರೈಲ್ವೆ ಮಾಹಿತಿ ನೀಡಿದೆ. ಈ ವರ್ಷ ಮಾರ್ಚ್ 23 ರಂದು ಈ ದೈನಂದಿನ ಎಕ್ಸ್​ಪ್ರೆಸ್ ವಿಶೇಷ ರೈಲನ್ನು ಪ್ರಾರಂಭಿಸಲಾಗಿತ್ತು. ಸೀಮಿತ ನಿಲುಗಡೆಗಳನ್ನಷ್ಟೇ ಹೊಂದಿದ್ದ ಈ

ಬೆಂಗಳೂರು – ಹುಬ್ಬಳ್ಳಿ ಡೈಲಿ ಎಕ್ಸ್​ಪ್ರೆಸ್​ ರೈಲು ಶಾಶ್ವತವಾಗಿ ರದ್ದು Read More »

ಕೊಟ್ಟಿಗೆಹಾರ: ಗ್ರಾಮೀಣ ಭಾಗದ ಅಂಚೆ ಕಚೇರಿಯಲ್ಲಿ ಇಂಟರ್ನೆಟ್ ಸಮಸ್ಯೆ | ಮಾಸಿಕ ವೇತನ ಪಡೆಯಲು ವೃದ್ಧರ, ಮಹಿಳೆಯರ ಪರದಾಟ

ಸಮಗ್ರ ನ್ಯೂಸ್: ನಾಗರಿಕರಿಗೆ ಉತ್ತಮ ಸೇವೆ ಶೀಘ್ರವಾಗಿ ನೀಡಲು ನೆರವಾಗುವಂತೆ ಅಂಚೆ ಕಚೇರಿಗಳಲ್ಲಿ ಮಂತ್ರ ಎಂಬ ಉಪಕರಣ ನೀಡಲಾಗಿದೆ. ಆದರೆ ವ್ಯವಸ್ಥೆಗಳನ್ನು ಮೇಲ್ದರ್ಜೆ ಏರಿಸಲಾದರೂ ನೆಟ್ ವರ್ಕ್ ಸಮಸ್ಯೆ ಮಾತ್ರ ಕಗ್ಗಂಟಾಗಿ ಉಳಿದಿದೆ. ಅಂಚೆ ಕಚೇರಿಗಳ ಮುಂಭಾಗದಲ್ಲಿ ನೆಟ್ ವರ್ಕ್ ಸಿಗುವ ಬಸ್ ನಿಲ್ದಾಣಗಳಲ್ಲಿ ನಾಗರೀಕರು ಗಂಟೆ ಗಟ್ಟಲೆ ಕಾಯುಬೇಕಾದ ದುಸ್ಥಿತಿ ಎದುರಾಗಿದೆ. ಮಲೆನಾಡು ಭಾಗದ ಗ್ರಾಮೀಣ ಪ್ರದೇಶದಲ್ಲಿ ಈಗ ಮಳೆಗಾಲವಾದ್ದರಿಂದ ನೆಟ್ ವರ್ಕ್ ಸೇವೆ ಗಗನ ಕುಸುಮವಾಗುತ್ತಿದೆ. ಅಂಚೆ ಕಚೇರಿಗಳಲ್ಲಿ ಮಾಸಿಕ ವೇತನಕ್ಕಾಗಿ ಮಾತ್ರವಲ್ಲ ಕೆಲವು

ಕೊಟ್ಟಿಗೆಹಾರ: ಗ್ರಾಮೀಣ ಭಾಗದ ಅಂಚೆ ಕಚೇರಿಯಲ್ಲಿ ಇಂಟರ್ನೆಟ್ ಸಮಸ್ಯೆ | ಮಾಸಿಕ ವೇತನ ಪಡೆಯಲು ವೃದ್ಧರ, ಮಹಿಳೆಯರ ಪರದಾಟ Read More »

ಪುತ್ತೂರು:ರಸ್ತೆ ಬದಿ ಕಸ ಎಸೆದವರಿಗೆ ಶ್ರದ್ಧಾಂಜಲಿ ಅರ್ಪಣೆ!!

ಸಮಗ್ರ ನ್ಯೂಸ್: ರಸ್ತೆ ಬದಿ ಕಸ ಎಸೆದ ಕಿಡಿಗೇಡಿಗಳಿಗೆ ಪರಿಸರವಾಸಿಯಿಂದ ಶ್ರದ್ಧಾಂಜಲಿ ಅರ್ಪಿಸಿದ ಘಟನೆ ಪುತ್ತೂರು ತಾಲೂಕಿನ ಬೆದ್ರಾಲ ಎಂಬಲ್ಲಿ ಕಂಡು ಬಂದಿದೆ. ಬೆದ್ರಾಲ ಹೌಸ್ ರಸ್ತೆಯಲ್ಲಿ ಕಿಡಿಗೇಡಿಗಳು ಬಿಳಿ ಬಣ್ಣದ ಗೋಣಿ ಚೀಲದಲ್ಲಿ ಖಾಲಿ ಬೀಯರ್ ಬಾಟಲಿ ಮತ್ತು ಕಸಗಳನ್ನು ತುಂಬಿಸಿ ಎಸೆದು ಹೋಗಿದ್ದಾರೆ. ಇದನ್ನು ಕಂಡ ಪರಿಸರವಾಸಿಗಳು ಬಿಸಾಕಿ ಹೋಗಿದ್ದ ಕಸದ ಗೋಣಿ ಚೀಲದ ಬಳಿ ಈ ಕೃತ್ಯ ಎಸಗಿದವರಿಗೆ ಶ್ರದ್ದಾಂಜಲಿ ಅರ್ಪಿಸಿ ಅವರಿಗೆ ಸದ್ಗತಿ ಕೋರುವ ಮತ್ತು ಅವರ ಕುಟುಂಬಕ್ಕೆ ಸದ್ಬುದ್ಧಿಯನ್ನು ನೀಡುವಂತೆ

ಪುತ್ತೂರು:ರಸ್ತೆ ಬದಿ ಕಸ ಎಸೆದವರಿಗೆ ಶ್ರದ್ಧಾಂಜಲಿ ಅರ್ಪಣೆ!! Read More »