July 2023

ಡಾಕ್ಟರ್‌ಗೆ 500 ರೂ. ನಕಲಿ ನೋಟು ಕೊಟ್ಟು ಯಾಮಾರಿಸಿದ ರೋಗಿ| ಫನ್ನಿ ಮೂಮೆಂಟ್‌ ಎಂದ ಡಾಕ್ಟರ್‌

ಸಮಗ್ರ ನ್ಯೂಸ್: ರೋಗಿಯೊಬ್ಬ ಡಾಕ್ಟರ್‌ಗೆ 500 ರೂ. ಮುಖಬೆಲೆಯ ನಕಲಿ ನೋಟು ಕೊಟ್ಟು ಯಾಮಾರಿಸಿದ ಘಟನೆ ನಡೆದಿದೆ. ನಕಲಿ ನೋಟಿನ ಚಿತ್ರವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವ ಡಾಕ್ಟರ್‌, ಇದೊಂದು ಫನ್ನಿ ಮೂಮೆಂಟ್‌ ಅಂತ ಬರೆದುಕೊಂಡಿದ್ದಾರೆ. ಆರ್ಥೋಪೆಡಿಕ್ ಶಸ್ತ್ರಚಿಕಿತ್ಸಕ ಡಾ.ಮಾನನ್‌ ವೊರ ಬಳಿ ರೋಗಿಯೊಬ್ಬರು ವೈದ್ಯಕೀಯ ತಪಾಸಣೆಗೆ ಬಂದಿದ್ದರು. ಚಿಕಿತ್ಸೆ ಬಳಿಕ ಶುಲ್ಕವಾಗಿ 500 ರೂ. ಮುಖಬೆಲೆ ನೋಟನ್ನು ಕೊಟ್ಟಿದ್ದರು. ಆದರೆ ಇದು ನಕಲಿ ನೋಟು ಎಂದು ನಂತರ ವೈದ್ಯರಿಗೆ ಗೊತ್ತಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನೋಟಿನೊಂದಿಗೆ […]

ಡಾಕ್ಟರ್‌ಗೆ 500 ರೂ. ನಕಲಿ ನೋಟು ಕೊಟ್ಟು ಯಾಮಾರಿಸಿದ ರೋಗಿ| ಫನ್ನಿ ಮೂಮೆಂಟ್‌ ಎಂದ ಡಾಕ್ಟರ್‌ Read More »

ಚೆಕ್ ಬೌನ್ಸ್ ಪ್ರಕರಣ | ನಟ ನೀನಾಸಂ ಅಶ್ವತ್ಥ್ ಅರೆಸ್ಟ್

ಸಮಗ್ರ ನ್ಯೂಸ್: ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಪೋಷಕ ನಟ ನೀನಾಸಂ ಅಶ್ವತ್ಥ್ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಹಾಸನದ ಬಡಾವಣೆ ಠಾಣಾ ಪೊಲೀಸರು ಅಶ್ವತ್ಥ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಧೀಶರ ಮುಂದೆ ತಪ್ಪೊಪ್ಪಿಕೊಂಡ ನಟ ಶೇ. 25% ರಷ್ಟು ಹಣ ಪಾವತಿ ಮಾಡಿದ ಹಿನ್ನೆಲೆಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. ಇನ್ನುಳಿದ ಹಣ ಪಾವತಿಸಲು ಸಮಯಾವಕಾಶವನ್ನು ಅಶ್ವತ್ಥ್ ಕೇಳಿಕೊಂಡಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ | ನಟ ನೀನಾಸಂ ಅಶ್ವತ್ಥ್ ಅರೆಸ್ಟ್ Read More »

ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ: ಸಿದ್ದರಾಮ ಸ್ವಾಮೀಜಿ

ಸಮಗ್ರ ನ್ಯೂಸ್: ನಾವು ಹಿಂದೂ ವಿರೋಧಿಗಳಲ್ಲ, ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂ ಜೀವನ ಪದ್ಧತಿಯಷ್ಟೇ. ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಎನಿಸಿಕೊಳ್ಳುತ್ತದೆ. ಧರ್ಮ ಎಂದರೆ ಅದರದ್ದೆಯಾದ ಸಂವಿಧಾನ ಇರಬೇಕು. ಒಂದೇ ದೇವರನ್ನು ಪೂಜಿಸುತ್ತಿರಬೇಕು. ಈ ಹಿನ್ನೆಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಿದೆ. ಬಸವಣ್ಣನವರು ಇದರ ಸ್ಥಾಪಕರು ಎಂದಿದ್ದಾರೆ. ಲಿಂಗಾಯತ (Lingayat) ಧರ್ಮಕ್ಕೆ ವಚನ ಸಾಹಿತ್ಯವೇ ಸಂವಿಧಾನವಾಗಿದೆ. ನಾವೆಲ್ಲ

ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ: ಸಿದ್ದರಾಮ ಸ್ವಾಮೀಜಿ Read More »

ಬೆಳ್ತಂಗಡಿ:‌ ಸ್ಕೂಟಿ-ಪಿಕಪ್ ಡಿಕ್ಕಿ|ಓರ್ವ ಮೃತ್ಯು, ಓರ್ವ ಗಂಭೀರ

ಸಮಗ್ರ ನ್ಯೂಸ್: ಸ್ಕೂಟಿ-ಪಿಕಪ್ ಡಿಕ್ಕಿಯಾಗಿ ಓರ್ವ ಮೃತ್ಯು, ಓರ್ವ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಊರುವಲು ಗ್ರಾಮದ ಕುಪ್ಪೆಟ್ಟಿ ರಸ್ತೆ ಮಜ್ಜೆ ಎಂಬಲ್ಲಿ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ:‌ ಸ್ಕೂಟಿ-ಪಿಕಪ್ ಡಿಕ್ಕಿ|ಓರ್ವ ಮೃತ್ಯು, ಓರ್ವ ಗಂಭೀರ Read More »

ಹೊರಗುತ್ತಿಗೆ ನೇಮಕಾತಿಗಳಲ್ಲೂ ಮೀಸಲು ಜಾರಿಗೆ ಸರ್ಕಾರ ಚಿಂತನೆ: ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಹೊರಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಆಯೋಜಿಸಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದರು. ಮಕ್ಕಳು ವಿಶ್ವಪ್ರಜ್ಞೆ

ಹೊರಗುತ್ತಿಗೆ ನೇಮಕಾತಿಗಳಲ್ಲೂ ಮೀಸಲು ಜಾರಿಗೆ ಸರ್ಕಾರ ಚಿಂತನೆ: ಸಿಎಂ ಸಿದ್ದರಾಮಯ್ಯ Read More »

ವಿಧವಾ, ವಿವಾಹವಾಗದ 15 ಮಹಿಳೆಯರಿಗೆ ಪಂಗನಾಮ ಹಾಕಿದ್ದ ಆರೋಪಿ ಅಂದರ್

ಸಮಗ್ರ ನ್ಯೂಸ್: ಮದುವೆಯಾಗುವ ನೆಪದಲ್ಲಿ ವಿಧವಾ ಹಾಗೂ ಅವಿವಾಹಿತ ಮಹಿಳೆಯರನ್ನು ವಂಚಿಸಿ ಹಣ ಹಾಗೂ ಚಿನ್ನಾಭರಣಗಳನ್ನು ದೋಚುತ್ತಿದ್ದ ಆರೋಪಿಯೊಬ್ಬ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಬೆಂಗಳೂರಿನ ಬನಶಂಕರಿ 3ನೇ ಹಂತ ಹೊಸಕೆರೆಹಳ್ಳಿ ಕಾಳಿದಾಸನಗರ ನಿವಾಸಿ ಬಸವೇಗೌಡ ಎಂಬವರ ಪುತ್ರ ಕೆ.ಬಿ.ಮಹೇಶ್‌ (35) ಬಂಧಿತ ಆರೋಪಿ. ಈತ ಈವರೆಗೂ 15 ಮಹಿಳೆಯರಿಗೆ ಈ ರೀತಿ ವಂಚಿಸಿದ್ದಾನೆ.ಮೈಸೂರಿನ ಹೇಮಲತಾ ಎಂಬುವವರನ್ನು ತಾನು ಡಾಕ್ಟರ್‌ ಎಂದು ಹೇಳಿಕೊಂಡು ಶಾದಿ ಡಾ.ಕಾಂನಲ್ಲಿ ಪರಿಚಯಿಸಿಕೊಂಡು ನಂಬಿಸಿದ್ದ. ನಂತರ ಮದುವೆಯಾಗಿ ಅವರ ಬಳಿ ಇದ್ದ 15 ಲಕ್ಷ

ವಿಧವಾ, ವಿವಾಹವಾಗದ 15 ಮಹಿಳೆಯರಿಗೆ ಪಂಗನಾಮ ಹಾಕಿದ್ದ ಆರೋಪಿ ಅಂದರ್ Read More »

ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ ವಿದ್ಯಾರ್ಥಿನಿ

ಸಮಗ್ರ ನ್ಯೂಸ್‌: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ವಿದ್ಯಾರ್ಥಿನಿ ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾಳೆ. ತೂಯಲಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಲಕ್ಷ್ಮಿ (11) ಕಳೆದ ತಿಂಗಳು ಜೂ. 29 ರಂದು ಮನೆ ಕಟ್ಟಲು ನಿವೇಶನ ನೀಡುವಂತೆ ರಾಷ್ಟ್ರಪತಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾಳೆ. ಪತ್ರದ ಸಾರಾಂಶನಾನು (ಲಕ್ಷ್ಮೀ) ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರು ತಕರಾರು ಮಾಡುತ್ತಿದ್ದಾರೆ. ಇದೇ ಗುಡಿಸಿಲನಲ್ಲಿ

ನಿವೇಶನಕ್ಕಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ ವಿದ್ಯಾರ್ಥಿನಿ Read More »

Jain muni Murder : ಜೈನಮುನಿ ಕಾಮಕುಮಾರ ನಂದಿ ಮಹಾರಾಜ್‌ ಪಂಚಭೂತಗಳಲ್ಲಿ ಲೀನ

ಸಮಗ್ರ ನ್ಯೂಸ್: ಹತ್ಯೆಯಾಗಿರುವ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆಯು ಜೈನ ಸಂಪ್ರದಾಯದಂತೆ ನೆರೆವೇರಿದೆ. ಹುಬ್ಬಳ್ಳಿಯ ವರೂರು ಮಠದ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿಸಲಾಯಿತು. ಜೈನಮುನಿಯ ಅವರ ಪೂರ್ವಾಶ್ರಮದ ಅಣ್ಣನ ಮಗ, ಆಶ್ರಮದ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಭೀಮಗೊಂಡ ಉಗಾರೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ನಮೋಕಾರ ಮಂತ್ರ ಪಠಣ:ಮರಣೋತ್ತರ ಪರೀಕ್ಷೆ ಬಳಿಕ ಬೆಳಗಾವಿ ಜಿಲ್ಲಾಸ್ಪತ್ರೆಯಿಂದ ಕಾಮಕುಮಾರ ಮುನಿಶ್ರೀ ಅವರ ಪಾರ್ಥಿವ ಶರೀರವನ್ನು ನಂದಿ ಪರ್ವ

Jain muni Murder : ಜೈನಮುನಿ ಕಾಮಕುಮಾರ ನಂದಿ ಮಹಾರಾಜ್‌ ಪಂಚಭೂತಗಳಲ್ಲಿ ಲೀನ Read More »

ಇಂದಿರಾ ಕ್ಯಾಂಟೀನ್ ಅವ್ಯವಹಾರಗಳನ್ನೂ ರಿಪೇರಿ ಮಾಡ್ತೀನಿ: ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಪ್ರದಕ್ಷಿಣೆ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದಿರಾ ಕ್ಯಾಂಟೀನ್ ಅವ್ಯವಹಾರಗಳನ್ನೂ ರಿಪೇರಿ ಮಾಡ್ತೀನಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರದಕ್ಷಿಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ನಾನು ಯಾವ ಅಧಿಕಾರಿಗಳಿಗೂ ತಿಳಿಸದೆ ನಗರ ಪ್ರದಕ್ಷಿಣೆ ಮಾಡಿದ್ದೀನಿ. ತ್ಯಾಜ್ಯ ಸಂಸ್ಕರಣಾ ಕೇಂದ್ರಕ್ಕೆ ಭೇಟಿ ಮಾಡಿದ್ದೀನಿ. ಇಲ್ಲಿ ಅಧಿಕಾರಿಗಳು ಸರಿಯಾಗಿ ಪರಿಶೀಲನೆ ಮಾಡ್ತಿಲ್ಲ. ಕೆಲವರು ಕಸವನ್ನು ಪುಟ್‌ಪಾತ್‌ನಲ್ಲೇ ಡಂಪ್ ಮಾಡ್ತಿದ್ದಾರೆ. ಅದನ್ನ ಕಮಿಷನರ್‌ಗೆ ತೋರಿಸಿದ್ದೇನೆ. ಇದರ ಜವಾಬ್ದಾರಿ ಯಾರದ್ದು ಅನ್ನೋದನ್ನ ಫಿಕ್ಸ್

ಇಂದಿರಾ ಕ್ಯಾಂಟೀನ್ ಅವ್ಯವಹಾರಗಳನ್ನೂ ರಿಪೇರಿ ಮಾಡ್ತೀನಿ: ಡಿ.ಕೆ ಶಿವಕುಮಾರ್ Read More »

ಬೆಳ್ತಂಗಡಿಯ ಸೋಮಂತಡ್ಕದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 22ನೇ ನೂತನ ಶಾಖೆ ಉದ್ಘಾಟನೆ| ಸಂಘವು ಸಹಕಾರಿ‌ ಕ್ಷೇತ್ರದ ಪ್ರಬಲ ಶಕ್ತಿ – ಶಾಸಕ ಹರೀಶ್ ಪೂಂಜಾ ಅಭಿಮತ

ಸಮಗ್ರ ನ್ಯೂಸ್: ಸಹಕಾರಿ ಸಂಘಗಳು ಆರ್ಥಿಕವಾಗಿ ಪ್ರಬಲವಾಗಲು ಬೆಳ್ತಂಗಡಿ ತಾಲೂಕು ಸಮರ್ಥವಾಗಿದೆ. ಇದೇ ಕಾರಣದಿಂದ ವೆಂಕಟರಮಣ ಸೊಸೈಟಿ ತಾಲೂಕಿನಲ್ಲಿ ಐದು ಶಾಖೆಗಳನ್ನು ಪ್ರಾರಂಭಿಸಿದೆ. ದ.ಕ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಬೆಳವಣಿಗೆ ಕಾಣುತ್ತಿದೆ. ಸಹಕಾರಿ ಕ್ಷೇತ್ರ ಜನರಿಗೆ ಸಹಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ವೆಂಕಟರಮಣ ಸೊಸೈಟಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಆರ್ಥಿಕವಾಗಿ ಪ್ರಬಲ ಶಕ್ತಿಯಾಗಿ ಬೆಳೆದಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅಭಿಪ್ರಾಯಪಟ್ಟರು. ಅವರು ಇಂದು(ಜು. 9) ಬೆಳ್ತಂಗಡಿಯ ಸೋಮಂತಡ್ಕದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯ ಇದರ

ಬೆಳ್ತಂಗಡಿಯ ಸೋಮಂತಡ್ಕದಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 22ನೇ ನೂತನ ಶಾಖೆ ಉದ್ಘಾಟನೆ| ಸಂಘವು ಸಹಕಾರಿ‌ ಕ್ಷೇತ್ರದ ಪ್ರಬಲ ಶಕ್ತಿ – ಶಾಸಕ ಹರೀಶ್ ಪೂಂಜಾ ಅಭಿಮತ Read More »