July 2023

ಶಿವಮೊಗ್ಗದಲ್ಲಿ ನಡೆದ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ|9 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ NIA

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ತುಂಗಾ ತೀರದಲ್ಲಿ ನಡೆದ ಟ್ರಯಲ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) 9 ಜನರ ವಿರುದ್ಧ ಶುಕ್ರವಾರ ಸಲ್ಲಿಸಿದ ಎರಡು ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿಯೊಂದು ಬಯಲಾಗಿದೆ. ರೋಬೋಟ್‌ಗಳ ಮೂಲಕ ವಿಧ್ವಂಸಕ ಕೃತ್ಯಕ್ಕೆ ಐಸಿಸ್(ISIS) ಸಂಚು ರೂಪಿಸಿತ್ತು ಎಂದು ತಿಳಿದುಬಂದಿದೆ. ಇದಕ್ಕಾಗಿ ಅವರು ಕೋರ್ಸ್‌ಗಳನ್ನು ಕಲಿಯಲು ಮುಂದಾಗಿದ್ದರು ಎಂದು ಎನ್‌ಐಎ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ. ಆರೋಪಿಗಳನ್ನು ಮೊಹಮ್ಮದ್ ಶಾರಿಖ್, ಮಾಜ್ ಮುನೀರ್ ಅಹಮದ್ , ಸೈಯದ್ ಯಾಸಿನ್ , ರೀಶಾನ್ […]

ಶಿವಮೊಗ್ಗದಲ್ಲಿ ನಡೆದ ಟ್ರಯಲ್‌ ಬ್ಲಾಸ್ಟ್‌ ಪ್ರಕರಣ|9 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ NIA Read More »

ಇಂದಿನಿಂದ ಹಂಪಿಯಲ್ಲಿ ಜಿ-20 ಶೃಂಗಸಭೆ|ನವವಧುವಿನಂತೆ ಶೃಂಗಾರಗೊಂಡಿದೆ ವಿಶ್ವಪಾರಂಪರಿಕ ತಾಣ

ಸಮಗ್ರ ನ್ಯೂಸ್: ವಿಶ್ವ ವಿಖ್ಯಾತ ಹಂಪಿಯಲ್ಲಿ ಇದೇ ಮೊದಲ ಬಾರಿಗೆ ಜಿ-20 ಶೃಂಗಸಭೆ ನಡೆಯುತ್ತಿದೆ. ಜುಲೈ 9ರಿಂದ 16 ರವರೆಗೆ ನಡೆಯಲಿರುವ ಜಿ-20 ಶೃಂಗಸಭೆಗೆ ಹಂಪಿ ನವವಧುವಿನಂತೆ ಶೃಂಗಾರಗೊಂಡಿದೆ. ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ಜಿ-20 ಸಲುವಾಗಿ ಹಂಪಿಯಲ್ಲಿ ಕೈಗೊಳ್ಳಲಾಗಿದೆ. ಜಿ-20 ಶೃಂಗಸಭೆಗೆ ಈ ಬಾರಿಯ ಅಧ್ಯಕ್ಷೀಯ ರಾಷ್ಟ್ರ ಭಾರತವಾಗಿದೆ. ಅದಕ್ಕಾಗಿಯೇ ಅತಿ ಮುಖ್ಯವಾದ ಜಿ-20 ಶೃಂಗಸಭೆಯ 3ನೇ ಪ್ರಮುಖ ಸಭೆ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 16 ರವರೆಗೆ ನಡೆಯಲಿದೆ. 3 ದಿನಗಳ ಕಾಲ ಸಾಂಸ್ಕೃತಿಕ

ಇಂದಿನಿಂದ ಹಂಪಿಯಲ್ಲಿ ಜಿ-20 ಶೃಂಗಸಭೆ|ನವವಧುವಿನಂತೆ ಶೃಂಗಾರಗೊಂಡಿದೆ ವಿಶ್ವಪಾರಂಪರಿಕ ತಾಣ Read More »

ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಹರಿಯಾಣದ ಸೋನಿಪತ್‌ ಜಿಲ್ಲೆಯ ಮದಿನಾ ಗ್ರಾಮಕ್ಕೆ ಶನಿವಾರ ದಿಢೀರ್‌ ಭೇಟಿ ನೀಡಿ ಅಲ್ಲಿಯ ಜನರೊಂದಿಗೆ ಸಂವಾದ ನಡೆಸಿದ್ದು, ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ರೈತರೊಂದಿಗೆ ಸಮಯ ಕಳೆದಿದ್ದಾರೆ. ರಾಹುಲ್‌ ಅವರು ಭತ್ತದ ಸಸಿಗಳನ್ನು ನಾಟಿ ಮಾಡುತ್ತಿರುವ ಚಿತ್ರಗಳನ್ನು ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ. ರೈತ ಮಹಿಳೆಯರೊಂದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತುಕತೆ ನಡೆಸಿದರು.

ಗದ್ದೆಯಲ್ಲಿ ನಾಟಿ ಮಾಡಿದ ರಾಹುಲ್ ಗಾಂಧಿ Read More »

ಜೈನಮುನಿ ಹತ್ಯೆ ಪ್ರಕರಣ| ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚನೆ

ಸಮಗ್ರ ನ್ಯೂಸ್: ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇನ್ನೂ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು

ಜೈನಮುನಿ ಹತ್ಯೆ ಪ್ರಕರಣ| ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಲು ಮುಖ್ಯಮಂತ್ರಿ ಸೂಚನೆ Read More »

ಸುಳ್ಯ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್:‌ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿರುವ ವೇಳೆ ಕಾಲು ಸಂಕದಿಂದ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದ ಮೂರು ದಿವಸದಿಂದ ಕಾರ್ಯಾಚರಣೆ ಮಾಡುತ್ತಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ನಾಲ್ಕನೇ ದಿವಸದ ಕಾರ್ಯಾಚರಣೆ ಬಳಿಕ ಪೆರಾಜೆಯ ನೆಡ್ಚಿಲ್ ಸಮೀಪದ ಕಣಿ ಎಂಬಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ, ಎಸ್‌ಡಿಆಎರ್‌ ಎಫ್‌ ತಂಡ, ಅಗ್ನಿಶಾಮಕ ದಳ ಸುಳ್ಯ, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿ, SKSSF ಅರಂತೋಡು ಕಲ್ಲುಗುಂಡಿ ವಿಖಾಯ ತಂಡ, ಕಂದಾಯ ಇಲಾಖೆ,

ಸುಳ್ಯ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಪಾಕ್‌ ಗಂಡನ ಬಿಟ್ಟು ಭಾರತದ ಪ್ರೀಯಕರನೊಂದಿಗೆ ಹೊಸ ಜೀವನ ಶುರು ಮಾಡ್ತಿದ್ದಾಳೆ ಪಾಕಿಸ್ತಾನಿ ಮಹಿಳೆ

ಸಮಗ್ರ ನ್ಯೂಸ್: ಭಾರತಕ್ಕೆ ಅಕ್ರಮವಾಗಿ ತನ್ನ 4 ಮಕ್ಕಳೊಂದಿಗೆ ಪ್ರವೇಶಿಸಿದ್ದ ಮಹಿಳೆ ಮತ್ತು ಆತನ ಪ್ರಿಯಕರ ಹಾಗೂ ಅವರಿಬ್ಬರಿಗೆ ಆಶ್ರಯ ನೀಡಿದ್ದ ಪ್ರಿಯಕರನ ತಂದೆಯನ್ನ ಗ್ರೇಟರ್ ನೋಯ್ಡಾ ಪೊಲೀಸರು ಜುಲೈ ಬಂಧಿಸಿದ್ದರು. ಶುಕ್ರವಾರ ಸ್ಥಳೀಯ ನ್ಯಾಯಾಲಯ (Local Court) ಈ ಮೂವರಿಗೂ ಜಾಮೀನು ನೀಡಿತು. ಕಾಗದ ಪತ್ರಗಳ ಪರಿಶೀಲನೆ ಕೆಲಸ ಮುಗಿದ ಬಳಿಕ ಶನಿವಾರ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು. ಜೈಲಿನಿಂದ ಬಿಡುಗಡೆಗೊಂಡ ನಂತರ

ಪಾಕ್‌ ಗಂಡನ ಬಿಟ್ಟು ಭಾರತದ ಪ್ರೀಯಕರನೊಂದಿಗೆ ಹೊಸ ಜೀವನ ಶುರು ಮಾಡ್ತಿದ್ದಾಳೆ ಪಾಕಿಸ್ತಾನಿ ಮಹಿಳೆ Read More »

ಭಾರೀ ಗಾಳಿ, ಮಳೆ ಸಾಧ್ಯತೆ|ಕೊಡಗು, ಕರಾವಳಿಗೆ ಎಲ್ಲೋ ಅಲರ್ಟ್|

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆ ರಾಯ ಮತ್ತೆ ಆರ್ಭಟಿಸುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಮಾತ್ರವಲ್ಲದೇ ಕೊಡಗು ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದ್ದು, ನಾಳೆ ಭಾರೀ ಗಾಳಿ ಬೀಸಲಿದೆ. ಅಲ್ಲದೇ ಜುಲೈ 13ರಿಂದ ಮತ್ತೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ರೆಡ್‌ ಅಲರ್ಟ್‌

ಭಾರೀ ಗಾಳಿ, ಮಳೆ ಸಾಧ್ಯತೆ|ಕೊಡಗು, ಕರಾವಳಿಗೆ ಎಲ್ಲೋ ಅಲರ್ಟ್| Read More »

ಬಂಟ್ವಾಳ: ಕಾರು ನಡುವೆ ಅಪಘಾತ – ಹಲವರು ಗಂಭೀರ

ಸಮಗ್ರ ನ್ಯೂಸ್:ಕಾರು ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಜು.9ರ ಬಿ.ಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಒಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಮತ್ತು ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ.ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು ತಿರುಗಿಸುವ ವೇಳೆ

ಬಂಟ್ವಾಳ: ಕಾರು ನಡುವೆ ಅಪಘಾತ – ಹಲವರು ಗಂಭೀರ Read More »

ಉಳ್ಳಾಲ: ದನಗಳ ಮೇಲೆ ಹರಿದ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ಕಾರೊಂದು ಹರಿದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬೆಳಗ್ಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಘಟನೆಯಿಂದ ಮೂರು ದನಗಳು ಸಾವಿಗೀಡಾಗಿವೆ ಎಂದು

ಉಳ್ಳಾಲ: ದನಗಳ ಮೇಲೆ ಹರಿದ ಕಾರು ಪಲ್ಟಿ- ನಾಲ್ವರಿಗೆ ಗಂಭೀರ ಗಾಯ Read More »

ಮಂಗಳೂರು: ಕೆಲಸಕ್ಕಿದ್ದ ಕಾರ್ಮಿಕನ ಕೊಲೆ|ಮಾಲೀಕ ಬಂಧನ

ಮಂಗಳೂರು : ತನ್ನ ಬಳಿ ಕೆಲಸಕ್ಕಿದ್ದ ಕಾರ್ಮಿಕನನ್ನು ಮಾಲೀಕನೇ ಬೆಂಕಿಹಚ್ಚಿ ಸುಟ್ಟು ಕೊಲೆ ಮಾಡಿರುವ ಘಟನೆ ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್ ನಲ್ಲಿ ಶನಿವಾರ ನಡೆದಿದೆ. ಕೊಲೆಯಾದವನನ್ನು ಗಜ್ಞಾನ್ ಜಗು ಎಂದು ಗುರುತಿಸಲಾಗಿದ್ದು, ಅಂಗಡಿ ಮಾಲೀಕ ಪಾಂಡೇಶ್ವರ ನಿವಾಸಿ ತೌಸಿಫ್ ಹಸನ್ ( 32 ) ಕೊಲೆ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಮುಳಿಹಿತ್ಲು ಮಾಷುಪಾ ಜನರಲ್ ಸ್ಕೋರ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದ ಗಜ್ಞಾನ್ ಜಗು ಎಂಬ ಕಾರ್ಮಿಕನಿಗೆ ಮಾಲೀಕ ಕ್ಷುಲ್ಲಕ ಕಾರಣಕ್ಕೆ ಬೆಂಕಿ ಹಚ್ಚಿದ್ದಾನೆ. ನಂತರ

ಮಂಗಳೂರು: ಕೆಲಸಕ್ಕಿದ್ದ ಕಾರ್ಮಿಕನ ಕೊಲೆ|ಮಾಲೀಕ ಬಂಧನ Read More »