July 2023

ಹವಾಮಾನ ವರದಿ| ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಜು.8ರವರೆಗೆ ಭಾರೀ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಜುಲೈ 8 ರವರೆಗೆ ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ತೀವ್ರವಾದ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಗೋವಾ, ಗುಜರಾತ್, ಕರ್ನಾಟಕ, ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಮುನ್ಸೂಚನೆ ಸಂಸ್ಥೆ ಮುನ್ಸೂಚನೆ ನೀಡಿದೆ. ಜುಲೈ 6 ರಂದು ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಾದ ಸತಾರಾ, ಪುಣೆ, ರತ್ನಾಗಿರಿ ಮತ್ತು ರಾಯಗಡ್ನಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. […]

ಹವಾಮಾನ ವರದಿ| ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಜು.8ರವರೆಗೆ ಭಾರೀ ಮಳೆ‌ ಮುನ್ಸೂಚನೆ Read More »

ಮುಂಗಾರು ಅಬ್ಬರಕ್ಕೆ ರಾಜ್ಯದಲ್ಲಿ ನಾಲ್ಕು ಬಲಿ| ಇಂದೂ ಸುರಿಯಲಿದೆ ಭಾರೀ ಮಳೆ| ಕರಾವಳಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ ಭಾಗದಲ್ಲಿ ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮಳೆಯ ಅಬ್ಬರದಿಂದಾಗಿ ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ತಾಲೂಕಿನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಕರಾವಳಿ, ಮಲೆನಾಡು ಭಾಗದ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದ್ದು, ಉಡುಪಿ ಸಮೀಪದ ಬಜೆ ಹಾಗೂ ಶಿವಮೊಗ್ಗದ ಗಾಜನೂರು ಜಲಾಶಯಗಳು ಭರ್ತಿಯಾಗಿವೆ. ರಾಜ್ಯಾದ್ಯಂತ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್

ಮುಂಗಾರು ಅಬ್ಬರಕ್ಕೆ ರಾಜ್ಯದಲ್ಲಿ ನಾಲ್ಕು ಬಲಿ| ಇಂದೂ ಸುರಿಯಲಿದೆ ಭಾರೀ ಮಳೆ| ಕರಾವಳಿ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ Read More »

ಕರ್ನಾಟಕ ವಕ್ಫ್ ಬೋರ್ಡ್ ಸ್ಥಾನಕ್ಕೆ ಶಾಫಿ ಸ ಅದಿ ರಾಜೀನಾಮೆ

ಸಮಗ್ರ ನ್ಯೂಸ್: ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಇಂದು (ಜು.5) ರಾಜೀನಾಮೆ ಸಲ್ಲಿಸಿದ್ದಾರೆ. ಶಾಫಿ ಸಅದಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಸರಕಾರವು ಅಂಗೀಕರಿಸಿದ್ದು, ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಶಾಫಿ ಸಅದಿ ಅವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ವಕ್ಫ್ ಬೋರ್ಡ್ ಸ್ಥಾನಕ್ಕೆ ಶಾಫಿ ಸ ಅದಿ ರಾಜೀನಾಮೆ Read More »

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಪ್ರಸ್ತಾವನೆ ಇಲ್ಲ – ಸಚಿವ ಕೆ. ವೆಂಕಟೇಶ್

ಸಮಗ್ರ ನ್ಯೂಸ್: 2020 ರ ಗೋಹತ್ಯೆ ವಿರೋಧಿ ಕಾಯ್ದೆಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿದ್ದರೂ, ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದಿಂದ ಸ್ಪಷ್ಟವಾದ ಹೇಳಿಕೆಯನ್ನು ಪದೇ ಪದೇ ಬಯಸುತ್ತಿದೆ. ಜೊತೆಗೆ ಕಲಾಪದಲ್ಲಿ ಈ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಕರ್ನಾಟಕದಲ್ಲಿ ಅಕ್ರಮ ಗೋಹತ್ಯೆಗೆ ಸರ್ಕಾರ ಅನುಮತಿ ನೀಡುತ್ತಿದೆ ಎಂದು ಆರೋಪಿಸಿ ಜುಲೈ 5 ರಂದು ವಿಧಾನ ಮಂಡಲದ ಕಲಾಪವನ್ನು ಸ್ಥಗಿತಗೊಳಿಸಿದ್ದಾರೆ. ಮೈಸೂರಿನಲ್ಲಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಪ್ರಸ್ತಾವನೆ ಇಲ್ಲ – ಸಚಿವ ಕೆ. ವೆಂಕಟೇಶ್ Read More »

ಮುಂದುವರಿದ ರಣ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜು.6) ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆ (ಜು. 6) ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

ಮುಂದುವರಿದ ರಣ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜು.6) ರಜೆ ಘೋಷಣೆ Read More »

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ Read More »

ರಸ್ತೆ‌ ಬದಿ‌ ಕುಳಿತಿದ್ದ ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ಮುಖಂಡ| ಬಂಧಿತ ಆರೋಪಿಯ ಒಡೆತನದ ಕಟ್ಟಡ ನೆಲಸಮಕ್ಕೆ ಮಧ್ಯಪ್ರದೇಶ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಸ್ತೆಬದಿ ಕುಳಿತಿದ್ದ ಬುಡಕಟ್ಟು ಯುವಕನ ಮೇಲೆ ಬಿಜೆಪಿ ನಾಯಕ ಪ್ರವೇಶ್‌ ಶುಕ್ಲಾ ಮೂತ್ರ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಮಧ್ಯರಾತ್ರಿ ಬುಡಕಟ್ಟು ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ. ಇದರ ಜೊತೆಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಧ್ಯ ಪ್ರದೇಶ ಸರ್ಕಾರ ಈಗಾಗಲೇ ಜೈಲು ಪಾಲಾಗಿರುವ ಆರೋಪಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲು ಆದೇಶ ಹೊರಡಿಸಿದೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಕಳೆದ

ರಸ್ತೆ‌ ಬದಿ‌ ಕುಳಿತಿದ್ದ ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ಮುಖಂಡ| ಬಂಧಿತ ಆರೋಪಿಯ ಒಡೆತನದ ಕಟ್ಟಡ ನೆಲಸಮಕ್ಕೆ ಮಧ್ಯಪ್ರದೇಶ ಸರ್ಕಾರ ಆದೇಶ Read More »

ಸುಳ್ಯ: ಪರ್ಮಿಟ್ ಇಲ್ಲದ ಖಾಸಗಿ ಬಸ್ ಗಳಿಗೆ ಮುಟ್ಟುಗೋಲು ಹಾಕಿದ ಸಾರಿಗೆ ಅಧಿಕಾರಿಗಳು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅತೀ ಹಳೆಯದಾದ ಪರ್ಮಿಟ್ ಹೊಂದಿದ್ದ ಸುಳ್ಯ – ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಸೋಮವಾರ ಮುಂಜಾನೆ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು – ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ಸ್ ಅನಿಲ್ ಛಾತ್ರ ಎಂಬುವವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್

ಸುಳ್ಯ: ಪರ್ಮಿಟ್ ಇಲ್ಲದ ಖಾಸಗಿ ಬಸ್ ಗಳಿಗೆ ಮುಟ್ಟುಗೋಲು ಹಾಕಿದ ಸಾರಿಗೆ ಅಧಿಕಾರಿಗಳು Read More »

ಸುಳ್ಯ: ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್| ಶೇ.30%ರಷ್ಟು ದರ ಕಡಿತ ಮಾರಾಟ

ಸಮಗ್ರ ನ್ಯೂಸ್: ಸುಳ್ಯದ ಶ್ರೀರಾಮ್ ಪೇಟೆಯ ಶುಭಲಕ್ಷ್ಮೀ ಬಿಲ್ಡ್ಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್ ಆರಂಭಗೊಂಡಿದೆ. ಸುಳ್ಯದ ಕುಮ್ ಕುಮ್… ಫ್ಯಾಶನ್ ನಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿವಿಧ ಕಂಪೆನಿಗಳ ರೈಟ್ ಕೋಟ್ ಇದೆ.‌ ಝೀಲ್, ಬಾಸ್, ರಿಯಲ್ ಸಹಿತ ವಿವಿಧ ಕಂಪೆನಿಗಳ ರೈನ್ ಕೋಟ್ ಗಳು ಶೇ.30 ರ ವರೆಗೆ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ. ಕೆಲಸಕ್ಕೆ ಬಳಸಲು ರೈನ್ ಕೋಟ್ ಅತೀ ಕಡಿಮೆ

ಸುಳ್ಯ: ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್| ಶೇ.30%ರಷ್ಟು ದರ ಕಡಿತ ಮಾರಾಟ Read More »

ಭಾರೀ ಮಳೆಗೆ ಮಂಗಳೂರಿನಲ್ಲಿ ಗುಡ್ಡ ಕುಸಿತ| ಆತಂಕದಲ್ಲಿ ಜನತೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ ಮಳೆಯಿಂದಾಗಿ ಕುಸಿದಿದ್ದು, ಮತ್ತಷ್ಟು ಕುಸಿಯುವ ಭೀತಿ ಎದುರಾಗಿದ್ದು, ಸ್ಥಳೀಯ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ ಗುಡ್ಡ ಕುಸಿದ ಸ್ಥಳದಲ್ಲಿ ಜಿಲ್ಲಾಡಳಿತ ಟಾರ್ಪಲ್ ಹೊದಿಸಲಾಗಿದೆ. ಸದ್ಯ ಪಿವಿಎಸ್-ಕೆ.ಎಸ್. ರಾವ್ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇನ್ನು ಮಂಗಳೂರು ನಗರದ ಹೊರವಲಯ‌ ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದ ಜೊಹರಾ ಎಂಬವರ ಮನೆಗೆ

ಭಾರೀ ಮಳೆಗೆ ಮಂಗಳೂರಿನಲ್ಲಿ ಗುಡ್ಡ ಕುಸಿತ| ಆತಂಕದಲ್ಲಿ ಜನತೆ Read More »