July 2023

ಪ್ರಧಾನಿ ಮೋದಿ ಮನೆ ಮೇಲೆ ಡ್ರೋನ್ ಹಾರಾಟ|ತನಿಖೆ ಆರಂಭಿಸಿದ ದೆಹಲಿ ಪೊಲೀಸರು

ಸಮಗ್ರ ನ್ಯೂಸ್: ಪ್ರಧಾನಿ ನರೆಂದ್ರ ಮೋದಿ ಅವರ ಮನೆಯ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದರ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸ ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಹಾರಾಡಿದೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಲೇ ಅಧಿಕಾರಿಗಳು ಎಚ್ಚೆತ್ತು ಈ ಬಗ್ಗೆ ತೀವ್ರ ತನಿಖೆ ಪ್ರಾರಂಭಿಸಿದ್ದಾರೆ. […]

ಪ್ರಧಾನಿ ಮೋದಿ ಮನೆ ಮೇಲೆ ಡ್ರೋನ್ ಹಾರಾಟ|ತನಿಖೆ ಆರಂಭಿಸಿದ ದೆಹಲಿ ಪೊಲೀಸರು Read More »

ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಬಿಜೆಪಿಯಿಂದ ಇಂದು ನೂತನ ರಾಜ್ಯಾಧ್ಯಕ್ಷರ ನೇಮಕ ಸಾಧ್ಯತೆ| ಕರ್ನಾಟಕದ ಸಾರಥ್ಯ ವಹಿಸುವವರು ಯಾರು?

ಸಮಗ್ರ ನ್ಯೂಸ್: ಕರ್ನಾಟಕ ಸೇರಿದಂತೆ 5 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಅಂತ್ಯಗೊಂಡಿದೆ. ಹೀಗಾಗಿ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಹಲವು ಸುತ್ತಿನ ಕಸರತ್ತು ನಡೆದಿದ್ದು, ಇದೀಗ ಅಂತಿಮ ಪಟ್ಟಿ ರೆಡಿ ಮಾಡಲಾಗಿದೆ. ಇಂದು ಸಂಜೆಯೊಳಗೆ 5 ರಾಜ್ಯಗಳಿಗೆ ನೂತನ ಬಿಜೆಪಿ ಸಾರಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಕರ್ನಾಟಕ, ಗುಜರಾತ್, ಮದ್ಯಪ್ರದೇಶ, ತೆಲಂಗಾಣ, ಪಂಜಾಬ್ ರಾಜ್ಯಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗಬೇಕಿದೆ. ಇದರಲ್ಲಿ ನಾಲ್ಕು ರಾಜ್ಯಗಳ ರಾಜ್ಯಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಆದರೆ ಕರ್ನಾಟಕದ ಆಯ್ಕೆಯಲ್ಲಿ ಕೆಲ ಗೊಂದಲಗಳು ಎರ್ಪಟ್ಟಿದೆ. ವಿಪಕ್ಷ

ಕರ್ನಾಟಕ ಸೇರಿ ಐದು ರಾಜ್ಯಗಳಿಗೆ ಬಿಜೆಪಿಯಿಂದ ಇಂದು ನೂತನ ರಾಜ್ಯಾಧ್ಯಕ್ಷರ ನೇಮಕ ಸಾಧ್ಯತೆ| ಕರ್ನಾಟಕದ ಸಾರಥ್ಯ ವಹಿಸುವವರು ಯಾರು? Read More »

ಉಡುಪಿ: ಟಿಪ್ಪರ್ ಪಿಕಪ್ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಮತ್ತು ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಮಾಸ್ತಿಕಟ್ಟೆಯಲ್ಲಿ ಸಂಭವಿಸಿದೆ. ಪಿಕಪ್ ವಾಹನದಲ್ಲಿದ್ದ ರಾಜು ಗೌಡ (46) ಮೃತ ವ್ಯಕ್ತಿ, ಗಂಭೀರವಾಗಿ ಗಾಯಗೊಂಡ ಪಿಕಪ್ ಚಾಲಕ ಶಿವರಾಜ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿಕಟ್ಟೆಯಲ್ಲಿ ಟಿಪ್ಪರ್ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೊಲ್ಲೂರು

ಉಡುಪಿ: ಟಿಪ್ಪರ್ ಪಿಕಪ್ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು Read More »

ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ| ಮುರಿದು ಬಿದ್ದ ಕಂಬ

ಸಮಗ್ರ ನ್ಯೂಸ್: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್‌ ಪಾರಾಗಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರ್ತಿಪ್ಪಾಡಿ ಬಳಿ ನಡೆದಿದೆ. ವಿದ್ಯುತ್‌ ಕಂಬಕ್ಕೆ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬವೇ ಕಿತ್ತು ಬಂದಿದೆ.ಕಾರಿನ ಮೇಲೆಯೇ ವಿದ್ಯುತ್‌ ಕಂಬ ಮುರಿದು ಬಿದ್ದಿದ್ದು ಅದೃಷ್ಟವಶಾತ್‌ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ| ಮುರಿದು ಬಿದ್ದ ಕಂಬ Read More »

ಐದು ಭಾಷೆಗಳಲ್ಲಿ ರೆಡಿ ಆಗ್ತಿದೆ ‘ನಾನು ಮತ್ತು ಗುಂಡ- 2’ ಸಿನಿಮಾ

ಸಿನೆಮಾ ಸಮಾಚಾರ: ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ (Naanu Mattu Gunda 2) ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ‌ ಹಾಗೂ ನಾಯಿಯೊಂದರ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ಆ ಚಿತ್ರದಲ್ಲಿ ನಟ ಶಿವರಾಜ್ ಕೆ.ಆರ್. ಪೇಟೆ ಮತ್ತು ನಾಯಿಯ ಅದ್ಭುತ ಅಭಿನಯವಿತ್ತು. ಆ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಘು ಹಾಸನ್ (Raghu Haasan) ಈಗ ಅದರ ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ

ಐದು ಭಾಷೆಗಳಲ್ಲಿ ರೆಡಿ ಆಗ್ತಿದೆ ‘ನಾನು ಮತ್ತು ಗುಂಡ- 2’ ಸಿನಿಮಾ Read More »

ಪೆರುವಾಜೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಉಪನ್ಯಾಸಕಿ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ವಿದ್ಯಾರ್ಥಿ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿದ್ದಾರೆಂಬ ಕಾರಣಕ್ಕೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಘಟನೆ ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದಿದೆ. ಸಂಸ್ಥೆಯ ಎಚ್‌ಒಡಿ ದೀಕ್ಷಿತ್ ಎಂಬ ವಿದ್ಯಾರ್ಥಿಯ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತದೆ. ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೆರುವಾಜೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಉಪನ್ಯಾಸಕಿ ವಿರುದ್ಧ ಪ್ರತಿಭಟನೆ Read More »

ಮೈಸೂರು ಕರಾಮುವಿ ಘಟಿಕೋತ್ಸವ| ಸುಳ್ಯ ಠಾಣೆ ಪೊಲೀಸ್ ಸಿಬ್ಬಂದಿ ಮಧುಗೆ ಪ್ರಥಮ ರ‍್ಯಾಂಕ್

ಸಮಗ್ರ ನ್ಯೂಸ್: ಸುಳ್ಯ ಪೊಲೀಸ್ ಠಾಣೆಯಲ್ಲಿ ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಮಧು ಜಿ.ಡಿ. ಅವರು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2021-22 ನೇ ಸಾಲಿನ ಜುಲೈ ಆವೃತ್ತಿಯ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ 774 ಅಂಕ ಪಡೆದು ಪ್ರಥಮ ರ‍್ಯಾಂಕ್ ಪಡೆದು, ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಮೈಸೂರಿನ ಕರಾಮುವಿಯ ಘಟಿಕೋತ್ಸವ ಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಮಧು ಅವರಿಗೆ ಪದಕ ಮತ್ತು

ಮೈಸೂರು ಕರಾಮುವಿ ಘಟಿಕೋತ್ಸವ| ಸುಳ್ಯ ಠಾಣೆ ಪೊಲೀಸ್ ಸಿಬ್ಬಂದಿ ಮಧುಗೆ ಪ್ರಥಮ ರ‍್ಯಾಂಕ್ Read More »

ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ|ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಗ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫುರುಷರಕಟ್ಟೆಯ ಇಂದಿರಾನಗರದಲ್ಲಿ ಬೆಳಕಿಗೆ ಬಂದಿದೆ. ಇಂದಿರಾನಗರದ ದಿ.ಪ್ರವೀಣ್‌ ಅವರ ಪತ್ನಿ ಕಾವ್ಯಾ(38) ಆತ್ಮಹತ್ಯೆ ಮಾಡಿಕೊಂಡವರು. 7ವರ್ಷದ ಹಿಂದೆ ಕಾವ್ಯಾ ಅವರ ಪತಿ ಪ್ರವೀಣ್‌ ಕೂಡ ಯಾವುದೋ ಕಾರಣಕ್ಕೆ ಅತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕಾವ್ಯಾ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದ್ದು, ಅವರ ಪುತ್ರ ಪ್ರತೀಕ್‌ ಜೂ 30 ರಂದು ಬೆದ್ರಾಳ ಸಮೀಷ ಸಂಭವಿಸಿದ

ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ|ತಾಯಿ ಆತ್ಮಹತ್ಯೆ Read More »

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್

ಸಮಗ್ರ ನ್ಯೂಸ್: ಸೂಪರ್ ಹಿಟ್ ಟೀಸರ್, ಸಾಂಗ್ ಮೂಲಕವೇ ಪ್ರೇಕ್ಷಕರ ಕುತೂಹಲ ಹೆಚ್ಚಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ತೆರೆಯಪ್ಪಲಿಸಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಈ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಗಳು ಸಾಥ್ ನೀಡಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್ Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 3.5 ಲಕ್ಷ ಬೆಲೆಯ ಚಿನ್ನ ದರೋಡೆ

ಸಮಗ್ರ ನ್ಯೂಸ್: ಎಡಿಜಿಪಿ ಅಲೋಕ್ ಕುಮಾರ್,ಮಂಡ್ಯ ಬಳಿಯ ಹೆದ್ದಾರಿಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ಹೆದ್ದಾರಿ ಗಸ್ತು ಹೆಚ್ಚಿಸಿ ಕಳ್ಳತನ , ಅಪರಾಧ ಘಟನೆಗಳಿಗೆ ಕಡಿವಾಣ ಹಾಕಲು ಆದೇಶಿಸಿದ್ದರು ಇದರ ಬೆನ್ನಲ್ಲೇ ದುಷ್ಕರ್ಮಿಗಳು ಕೊಡಗು ಮೂಲದ ವ್ಯಕ್ತಿಯ ಚಿನ್ನದ ಸರವನ್ನು ದರೋಡೆ ಮಾಡಿರುವ ಘಟನೆ ನಡೆದಿದೆ. ಮಡಿಕೇರಿ ಸಮೀಪದ ಅರಪಟ್ಟು ಗ್ರಾಮದ ಇಂಟೀರಿಯರ್‌ ಡಿಸೈನರ್‌ ಮುತ್ತಪ್ಪ ಎಂಬ ಯುವಕ ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದಾಗ ಮದ್ದೂರಿನ ಸರ್ವೀಸ್ ರಸ್ತೆಯಲ್ಲಿ ವಿರಾಮ ತೆಗೆದುಕೊಳ್ಳಲು ಕಾರನ್ನು ನಿಲ್ಲಿಸಿದ್ದಾಗ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 3.5 ಲಕ್ಷ ಬೆಲೆಯ ಚಿನ್ನ ದರೋಡೆ Read More »