ಸಮಗ್ರ ನ್ಯೂಸ್: ಮಡಿಕೇರಿಯ ಅರೆಕಾಡು ಗ್ರಾಮದಲ್ಲಿ ಹಾಡ-ಹಗಲೇ ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಬಲಿಯಾದ ಘಟನೆ ಆ. 13ರಂದು ನಡೆದಿದೆ.
ಕಟ್ಟೆಮಾಡು ಸಮೀಪದ ಪರಂಬು ನಿವಾಸಿ ದೇವಪ್ಪ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಅರೆಕಾಡು ನೇತಾಜಿ ನಗರದ ಜನ ವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಕಾಡಾನೆ ಸಾರ್ವಜನಿಕರನ್ನು ಅಟ್ಟಾಡಿಸಿಕೊಂಡು ಬರುತ್ತಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.