ನಟ ದರ್ಶನ್ ರಿಂದ ಕ್ಷಮಾಪಣೆ| ದೃಶ್ಯ ಮಾಧ್ಯಮಗಳಿಂದ ಬಹಿಷ್ಕಾರ ತೆರವು

ಸಮಗ್ರ ನ್ಯೂಸ್: ಸ್ಯಾಂಡಲ್​ವುಡ್ ಸ್ಟಾರ್ ಡಿ ಬಾಸ್ ದರ್ಶನ್ ಹಾಗೂ ಮೀಡಿಯಾ ಮಧ್ಯೆ ಇರುವ ಮುನಿಸು ಸ್ವಲ್ಪ ದೀರ್ಘವೇ ಆಗಿತ್ತು. ಮೀಡಿಯಾ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವೆ ಇದ್ದಂತಹ ಕಹಿ ಮುನಿಸು ಕೊನೆಗೂ ಎಂಡ್ ಆಗಿದೆ. ಅಂತೂ ಚಾಲೆಂಜಿಂಗ್ ಸ್ಟಾರ್ ಈ ಬಗ್ಗೆ ಕ್ಷಮೆ ಕೇಳಿದ್ದು ಮಾಧ್ಯಮ ಮಂದಿಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

. Ad Widget . Ad Widget

ದರ್ಶನ್ ಇನ್​ಸ್ಟಾಗ್ರಾಮ್​ನಲ್ಲಿ ಸ್ಪೆಷಲ್ ಪೋಸ್ಟ್ ಶೇರ್ ಮಾಡಿದ್ದು ಅದಕ್ಕೆ ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಕ್ಯಾಪ್ಶನ್ ಬರೆದಿದ್ದಾರೆ. ಇದರೊಂದಿಗೆ ಒಂದು ಪತ್ರದ ಫೋಟೋ ಕೂಡಾ ಶೇರ್ ಮಾಡಿದ್ದಾರೆ.

. Ad Widget . . Ad Widget . Ad Widget

ನನ್ನ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮದ ಅಗತ್ಯವಿದೆ.

ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮದ ಪ್ರೀತಿಯಿಂದ ನೀಡಿದ ಪ್ರಚಾರ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ ಎಂದು ಬರೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *