ಮಂಗಳೂರು: ಅಪಘಾತಕ್ಕೆ ಬಾಲಕ ಬಲಿ

ಸಮಗ್ರ ನ್ಯೂಸ್: ವಾಹನ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ವ್ಯಾಪ್ತಿಯ ಅಡ್ಯಾರ್ ಎಂಬಲ್ಲಿ ಇದೀಗ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಅಡ್ಯಾರ್ ಪದವು ನಿವಾಸಿ ಶರಪುದ್ದಿನ್ (16) ಎಂದು ಗುರುತಿಸಲಾಗಿದೆ.

Ad Widget ... ..

ಸ್ನೇಹಿತನ ಜೊತೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದಾಗ ಅಡ್ಯಾರ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಹಿಂಬದಿಯಲ್ಲಿದ್ದ ಶರಪುದ್ದಿನ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.

Ad Widget

ಚಾಲಕನಿಗೂ ಕೂಡ ಅಪಘಾತದಲ್ಲಿ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Leave a Comment

Your email address will not be published. Required fields are marked *