August 2023

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ ಎಸ್ಎಸ್ಎಲ್ ಸಿ ಎಕ್ಸಾಂ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ಮಹತ್ವದ ಸೂಚನೆ ನೀಡಿದೆ. ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ ಎಸ್‌ಎಸ್ ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ […]

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ ಎಸ್ಎಸ್ಎಲ್ ಸಿ ಎಕ್ಸಾಂ Read More »

ಸೌಜನ್ಯಳ ನ್ಯಾಯಕ್ಕಾಗಿ ಫೀಲ್ಡ್ ಗಿಳಿದ ಅರುಣ್ ಪುತ್ತಿಲ| ಆ.14ರಂದು ಪುತ್ತೂರಿನಲ್ಲಿ ”ನಮ್ಮ ನಡೆ ನ್ಯಾಯದ ಕಡೆ” ಜಾಥಾ ಹಾಗೂ ರಸ್ತೆ ತಡೆ

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸಹೋದರಿ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ. ಆಗಸ್ಟ್ 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ದರ್ಬೆ ವೃತ್ತದಿಂದ ಕಾಲ್ನಡಿಗೆ ಜಾಥ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ

ಸೌಜನ್ಯಳ ನ್ಯಾಯಕ್ಕಾಗಿ ಫೀಲ್ಡ್ ಗಿಳಿದ ಅರುಣ್ ಪುತ್ತಿಲ| ಆ.14ರಂದು ಪುತ್ತೂರಿನಲ್ಲಿ ”ನಮ್ಮ ನಡೆ ನ್ಯಾಯದ ಕಡೆ” ಜಾಥಾ ಹಾಗೂ ರಸ್ತೆ ತಡೆ Read More »

ಸುಳ್ಯ: ಬೇರೇನೂ ಬೇಡ, ನನ್ನ ಮಗಳ ಸಾವಿಗೆ ನ್ಯಾಯ ಕೊಡಿ‌| ಸೆರಗೊಡ್ಡಿ ಅಂಗಲಾಚಿದ ಸೌಜನ್ಯ ತಾಯಿ!!

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ ಅತ್ಯಾಚಾರ ಮತ್ತು ಹತ್ಯೆಗೊಳಗಾದ ಸೌಜನ್ಯಳ ನ್ಯಾಯಕ್ಕಾಗಿ ಸುಳ್ಯದಲ್ಲಿ ಪ್ರತಿಭಟನಾ ಸಭೆಯಲ್ಲಿ ಮನಕಲಕುವ ಘಟನೆ ನಡೆದಿದೆ. ನೋವಿನ ನಡುವೆ ಮಗಳ ಸಾವಿನ ನ್ಯಾಯಕ್ಕಾಗಿ ದಿ. ಸೌಜನ್ಯಳ ತಾಯಿ ಕುಸುಮಾವತಿ ಸೆರಗೊಡ್ಡಿ ಬೇಡಿದ್ದು ಸೇರಿದ ಮಂದಿ ಕಣ್ಣೀರಾದರು. ತಮ್ಮ ಮಗಳ ಮೇಲೆ ನಡೆದಿರುವ ಅತ್ಯಾಚಾರ ಮತ್ತು ಕೊಲೆಯ ಕ್ಷಣವನ್ನು ನೆನೆದು ಗದ್ಗದಿತರಾಗಿ ಮಾತು ಆರಂಭಿಸಿದ ಕುಸುಮಾವತಿ, ನನ್ನ ಮಗಳ ಪ್ರಾಣ ಹೋಗುವ ಸಂದರ್ಭ ಆ ಮಗು ಅಮ್ಮ ಎಂದು ಎಷ್ಟು ಬಾರಿ

ಸುಳ್ಯ: ಬೇರೇನೂ ಬೇಡ, ನನ್ನ ಮಗಳ ಸಾವಿಗೆ ನ್ಯಾಯ ಕೊಡಿ‌| ಸೆರಗೊಡ್ಡಿ ಅಂಗಲಾಚಿದ ಸೌಜನ್ಯ ತಾಯಿ!! Read More »

ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಸೋಮವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾದ ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸಲು ಸರ್ಕಾರ ಉದ್ದೇಶಿಸಿದೆಯೇ ಎಂದು ಸಂಸ್ಕೃತಿ ಸಚಿವಾಲಯಕ್ಕೆ ಬಿಜೆಪಿ ಸಂಸತ್ ಸದಸ್ಯ ಭಗೀರಥ ಚೌಧರಿ ಕೇಳಿದ್ದ ಪ್ರಶ್ನೆಗಳಿಗೆ ಸಚಿವ ರೆಡ್ಡಿ ಉತ್ತರಿಸಿದರು. ರಾಷ್ಟ್ರೀಯ ಪ್ರಾಣಿಯಾಗಿ, ಸಂಸತ್ತಿನಲ್ಲಿ ಶಾಸನವನ್ನು ತರುವ ಮೂಲಕ ಭಾರತೀಯ ಮತ್ತು

ರಾಷ್ಟ್ರೀಯ ಪ್ರಾಣಿಯಾಗಿ ಹಸುವನ್ನು ಘೋಷಿಸಲು ಸಾಧ್ಯವಿಲ್ಲ – ಕೇಂದ್ರ ಸರ್ಕಾರ Read More »

ಸೌಜನ್ಯ ಪ್ರಕರಣ ಮರುತನಿಖೆ ನಡೆಸಿ, ಆರೋಪಿ ನಾನೇ‌ ಆದರೂ ಸರಿ‌ ಗಲ್ಲಿಗೇರಿಸಿ| ಸುಳ್ಯದಲ್ಲಿ ಘರ್ಜಿಸಿದ ಮಹೇಶ್ ಶೆಟ್ಟಿ ತಿಮರೋಡಿ

ಸಮಗ್ರ ನ್ಯೂಸ್: ‘ ಸೌಜನ್ಯಳ ನ್ಯಾಯಕ್ಕಾಗಿ ಹೋರಾಟ ಮಾಡುವವರನ್ನು ಅನುಮಾನಿಸುವ, ಹೀಯಾಳಿಸುವ ಬದಲು ಪ್ರಕರಣವನ್ನು ಮರುತನಿಖೆ ನಡೆಸಿ ಅತ್ಯಾಚಾರ ಮಾಡಿದವರನ್ನು ಶಿಕ್ಷೆಗೆ ಒಳಪಡಿಸಿ. ನಾನೇ ಆರೋಪಿಯಾಗಿದ್ದರೂ ಸರಿ ಗಲ್ಲಿಗೇರಿಸಿ’ ಎಂದು ರಾ.ಹಿಂ.ಜಾ.ವೇದಿಕೆಯ ಸಂಚಾಲಕ, ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ‌ ತಿಮರೋಡಿ ಆಗ್ರಹಿಸಿದ್ದಾರೆ. ಸುಳ್ಯದ ನಿಂತಿಕಲ್ಲಿನಿಂದ ಜಾಥಾದೊಂದಿಗೆ ಆಗಮಿಸಿ ಸುಳ್ಯ ಬಸ್ ನಿಲ್ದಾಣ ಬಳಿ ನಡೆದ ಪ್ರತಿಭಟನಾ ಸಭೆ ಉದ್ದೇಶಿಸಿ‌ಅವರು‌ ಮಾತನಾಡಿದರು. ‘ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೊಡ್ಡವರ ಹೆಸರೆತ್ತಿದರೆ ನಾಚಿಕೆಯಾಗುತ್ತದೆ. ಹಾಗಾದ್ರೆ ಕಳೆದ ಹನ್ನೊಂದು ವರ್ಷಗಳಿಂದ ಸೌಜನ್ಯ

ಸೌಜನ್ಯ ಪ್ರಕರಣ ಮರುತನಿಖೆ ನಡೆಸಿ, ಆರೋಪಿ ನಾನೇ‌ ಆದರೂ ಸರಿ‌ ಗಲ್ಲಿಗೇರಿಸಿ| ಸುಳ್ಯದಲ್ಲಿ ಘರ್ಜಿಸಿದ ಮಹೇಶ್ ಶೆಟ್ಟಿ ತಿಮರೋಡಿ Read More »

ಸುಳ್ಯ: ಸೌಜನ್ಯ ಕೇಸ್ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ| ಕಿಕ್ಕಿರಿದ ಜನಸಂದಣಿ

ಸಮಗ್ರ ನ್ಯೂಸ್: ಸೌಜನ್ಯ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಇಂದು(ಆ.8) ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿದೆ. ಈ ಹಿಂದೆ ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ವಸಂತ್, ಸೌಜನ್ಯಳ ಹತ್ಯೆ ನಡೆದು 11 ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ

ಸುಳ್ಯ: ಸೌಜನ್ಯ ಕೇಸ್ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ| ಕಿಕ್ಕಿರಿದ ಜನಸಂದಣಿ Read More »

ಹವಾಮಾನ ವರದಿ| ಕರಾವಳಿಯಲ್ಲಿ ಮಳೆಗಿಂತ ಬಿಸಿಲ ಝಳವೇ ಜಾಸ್ತಿ| ಸುಳ್ಯದಲ್ಲಿ ಮಾತ್ರ ಸುರಿದ ವರ್ಷಧಾರೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕರ್ನಾಟಕ ಕರಾವಳಿ ಹಾಗೆಯೇ ಕೇರಳದ ಕನ್ನಡ ಕರಾವಳಿಯಾದ ಕಾಸರಗೋಡು ಜಿಲ್ಲೆ ಸೇರಿದಂತೆ ಕಡಲತೀರದಲ್ಲಿ ಬಿಸಿಲ ಝಳ ಸೋಮವಾರ ಜಾಸ್ತಿ ಕಂಡುಬಂದಿದ್ದು, ಮಳೆ ಪ್ರಮಾಣ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಆದಾಗ್ಯೂ ಒಟ್ಟಾರೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಗರಿಷ್ಠ ಮಳೆಯಾಗಿದೆ. ಇದನ್ನು ಹೊರತುಪಡಿಸಿದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇತ್ತು. ರಾಜ್ಯದ ಕರಾವಳಿ ಹಾಗೂ ಕರಾವಳಿ ಜಿಲ್ಲೆಗಳಿಗೆ

ಹವಾಮಾನ ವರದಿ| ಕರಾವಳಿಯಲ್ಲಿ ಮಳೆಗಿಂತ ಬಿಸಿಲ ಝಳವೇ ಜಾಸ್ತಿ| ಸುಳ್ಯದಲ್ಲಿ ಮಾತ್ರ ಸುರಿದ ವರ್ಷಧಾರೆ Read More »

ಕೊಟ್ಟಿಗೆಹಾರ: ಅಟ್ಟಿಸಿಕೊಂಡು ಬಂದ ಕಾಡಾನೆ| ಕೂದಲೆಳೆ ಅಂತರದಲ್ಲಿ ಪಾರಾದ ಅರಣ್ಯ ಅಧಿಕಾರಿಗಳು

ಸಮಗ್ರ ನ್ಯೂಸ್: ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಮೇಗೂರಿನ ಅತ್ತಿಗುಣಿ ಹರದಲ್ಲಿ ನಡೆದಿದೆ. ಮಲೆಮನೆ, ಮೇಗೂರು, ಆಲೇಕಾನ್ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಆನೆ ಕಾರ್ಯ ಪಡೆಯ ಉಪವಲಯ ಅರಣ್ಯಾಧಿಕಾರಿ ಸುಹಾಸ್, ಕಿರಣ್ ಕುಮಾರ್, ದೀಕ್ಷಿತ್, ಕಾರ್ತಿಕ್, ಅಶ್ವಿನ್, ಕರ್ಣ, ಗಸ್ತು ಅಧಿಕಾರಿ ಪರಮೇಶ್ ಗ್ರಾಮಸ್ಥರೊಂದಿಗೆ ಸೋಮವಾರ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುವ ವೇಳೆ ಮೇಗೂರಿನ ಅತ್ತಗುಣಿ

ಕೊಟ್ಟಿಗೆಹಾರ: ಅಟ್ಟಿಸಿಕೊಂಡು ಬಂದ ಕಾಡಾನೆ| ಕೂದಲೆಳೆ ಅಂತರದಲ್ಲಿ ಪಾರಾದ ಅರಣ್ಯ ಅಧಿಕಾರಿಗಳು Read More »

ಸಿಬಿಐ ತನಿಖೆ ಆರಂಭದಲ್ಲೇ‌ ನಡೆದಿತ್ತು ಮಹಾಮೋಸ| ಸತ್ಯ ಹೇಳಿದ್ರೆ‌ ನನ್ನ ಕೊಲ್ಲಲು ಪ್ರಯತ್ನಿಸಬಹುದು| ಮಾಜಿ ಶಾಸಕ ವಸಂತ ಬಂಗೇರರಿಂದ ಸೌಜನ್ಯ ಪ್ರಕರಣ ಕುರಿತು ಶಾಕಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದಲ್ಲಿ ನ್ಯಾಯ ಸಿಗಬಹುದು ಎಂಬ ನಂಬಿಕೆಯಿತ್ತು. ಆದರೆ ಸತ್ಯ ಹೊರಬಂದಿಲ್ಲ, ಸಿಬಿಐ ತನಿಖೆ ಹಳಿ ತಪ್ಪಿದ ವಿಚಾರ ಆಗಲೇ ಗೊತ್ತಾಗಿತ್ತು. ತನಿಖೆಯಲ್ಲಿ ಏನಾಯಿತು ಎಂಬುದು ಗೊತ್ತಿದೆ. ಅದನ್ನು ಈಗ ಹೇಳುವುದಿಲ್ಲ. ಆದರೆ ಒಂದಲ್ಲ ಒಂದು ದಿನ ಅದಕ್ಕೆ ಕಾಲ ಬರುತ್ತೆ. ಯಾರು ಇದನ್ನು ತಪ್ಪಿಸಿದ್ದಾರೆ, ಯಾರು ಅನ್ಯಾಯ ಮಾಡಿದ್ದಾರೆ, ಯಾರು ತೊಂದರೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸುತ್ತೇನೆ. ಎಲ್ಲಿಯಾದರೂ ನನ್ನನ್ನು ಕೊಂದರೆ ಮುಗಿಯಿತು. ಇಲ್ಲವೆಂದರೆ ಎಲ್ಲವನ್ನೂ ಹೇಳುತ್ತೇನೆ, ನನ್ನ ಜೀವನದ ಅಂತ್ಯದೊಳಗೆ

ಸಿಬಿಐ ತನಿಖೆ ಆರಂಭದಲ್ಲೇ‌ ನಡೆದಿತ್ತು ಮಹಾಮೋಸ| ಸತ್ಯ ಹೇಳಿದ್ರೆ‌ ನನ್ನ ಕೊಲ್ಲಲು ಪ್ರಯತ್ನಿಸಬಹುದು| ಮಾಜಿ ಶಾಸಕ ವಸಂತ ಬಂಗೇರರಿಂದ ಸೌಜನ್ಯ ಪ್ರಕರಣ ಕುರಿತು ಶಾಕಿಂಗ್ ಹೇಳಿಕೆ Read More »

ಸುಳ್ಯ: ಓಮ್ನಿ ಡಿಕ್ಕಿ ಹೊಡೆದು ಪಾದಾಚಾರಿ ಸಾವು

ಸಮಗ್ರ ನ್ಯೂಸ್: ಪಾದಾಚಾರಿಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಅರಂತೋಡು ಗ್ರಾಮದ ಉಳುವಾರು ತೀರ್ಥರಾಮ ಎಂದು ಗುರುತಿಸಲಾಗಿದೆ. ಮೀನು ವ್ಯಾಪಾರಕ್ಕೆಂದು ಹೋಗುತ್ತಿದ್ದ ಓಮಿನಿ ಕಾರು, ಪಾದಾಚಾರಿ ಉಳುವಾರು ನಿವಾಸಿ ತೀರ್ಥರಾಮ ಎಂಬುವರಿಗೆ ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗಳಾಗಿದ್ದು , ಗಾಯಾಳುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ಹೇಳಲಾಗಿದೆ. ಅವರು ಕೃಷಿಕರಾಗಿದ್ದು ಪತ್ನಿ ಪುತ್ರ ಹಾಗು ಓರ್ವ

ಸುಳ್ಯ: ಓಮ್ನಿ ಡಿಕ್ಕಿ ಹೊಡೆದು ಪಾದಾಚಾರಿ ಸಾವು Read More »