ಚೈತ್ರಾ ಕುಂದಾಪುರ ಹಾಗೂ ಭಜರಂಗದಳಕ್ಕೆ ಸಂಬಂಧವಿಲ್ಲ – ಶರಣ್ ಪಂಪ್ವೆಲ್

ಸಮಗ್ರ ನ್ಯೂಸ್: ‘ಬಿಜೆಪಿ ಟಿಕೆಟ್‌ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧವಿಲ್ಲ. ಆಕೆ ನಮ್ಮ ಸಂಘಟನೆಯ ಸದಸ್ಯೆ ಅಲ್ಲ’ ಎಂದು ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಹೇಳಿದರು.

Ad Widget ... ..

ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಆಕೆ ಉತ್ತಮ ಭಾಷಣ ಮಾಡುತ್ತಿದ್ದರು. ಆ ಕಾರಣಕ್ಕೆ ಬಜರಂಗ ದಳದ ಕಾರ್ಯಕ್ರಮಗಳಿಗೆ ಆಹ್ವಾನಿಸಿದ್ದು ನಿಜ. ಅವರು ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ಆಗಲಿ. ನಮ್ಮ ಸಂಘಟನೆ ಇಂತಹ ಅಕ್ರಮಗಳಿಗೆ ಆಸ್ಪದ ನೀಡುವುದಿಲ್ಲ. ಇಂತಹ ಪ್ರಕರಣಗಳು ಮರುಕಳಿಸಬಾರದು. ಈ ಪ‍್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರನ್ನು ಶಿಕ್ಷೆಗೆ ಒಳಪಡಿಸಬೇಕು’ ಎಂದರು.

Ad Widget

‘ಈ ವಂಚನೆ ಪ್ರಕರಣದ ಬಗ್ಗೆ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿ ಎರಡು ತಿಂಗಳ ಹಿಂದೆ ನನ್ನ ಗಮನಕ್ಕೆ ತಂದಿದ್ದು ನಿಜ. ನೀವು ತಪ್ಪು ಮಾಡಿಲ್ಲವಾದರೆ ತಲೆಕೆಡಿಸಿಕೊಳ್ಳಬೇಡಿ ಎಂದು ಧೈರ್ಯ ಹೇಳಿದ್ದೆ’ ಎಂದರು.

Leave a Comment

Your email address will not be published. Required fields are marked *