ಸುಳ್ಯ: ಅ.8 ರಂದು ಸೌಜನ್ಯಳ ನ್ಯಾಯಕ್ಕಾಗಿ ಐವರ್ನಾಡಿನಲ್ಲಿ ಬೃಹತ್ ಪ್ರತಿಭಟನೆ

ಸಮಗ್ರನ್ಯೂಸ್: ಸೌಜನ್ಯಳ ನ್ಯಾಯಕ್ಕಾಗಿ ಐವರ್ನಾಡಿನಲ್ಲಿ ಸೌಜನ್ಯ ಪರ ಹೋರಾಟ ಸಮಿತಿ ಐವರ್ನಾಡು ಇದರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಅ.8 ರಂದು ಸಂಜೆ 3ಗಂಟೆಗೆ ಐವರ್ನಾಡು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆಯಲಿದೆ.

Ad Widget ... ..

11 ವರ್ಷಗಳ ಹಿಂದೆ ಅತ್ಯಾಚಾರಗೊಂಡು ಹತ್ಯೆಯಾದ ಕು.ಸೌಜನ್ಯಳಿಗೆ ನ್ಯಾಯ ದೊರಕದೆ ಇದ್ದ ಕಾರಣ ರಾಜ್ಯದ ಮೂಲೆ ಮೂಲೆಗಳಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆಗಳು ನಡೆಯುತ್ತಿದೆ.

Ad Widget

ಅದೇ ರೀತಿ ಐವರ್ನಾಡು ಸೌಜನ್ಯ ಪರ ಹೋರಾಟ ಸಮಿತಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಸಭೆ ನಡೆಯಲಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತುಳು ಜಾನಪದ ವಾಗ್ಮಿ ತಮ್ಮಣ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ, ಸೌಜನ್ಯಳ ತಾಯಿ ಕುಸುಮಾವತಿ ಆಗಮಿಸಲಿದ್ದಾರೆ.

Leave a Comment

Your email address will not be published. Required fields are marked *