ಭಾರೀ ಮಳೆಗೆ ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗುರುಳಿದ ಮರ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಿಂದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ. ಮೂರು ಯಂತ್ರಗಳಿಂದ ಪೊಲೀಸರ ಜೊತೆ ಸ್ಥಳೀಯರ ನಿರಂತರ ಕಾರ್ಯಾಚರಣೆಯಿಂದ ಮರ ತೆರವು ಮಾಡಿದ್ದಾರೆ.

Ad Widget ... ..

ಮಳೆ ಇಲ್ಲದೆ ಜನ ಕಂಗಾಲಾಗಿದ್ದರು, ಅದರೆ ಮಲೆನಾಡಿಗರ ಮೇಲೆ ವರುಣ ಕೃಪೆ ತೋರಿದ್ದಾನೆ. ಹನಿ ಹನಿ ನೀರಿಗೂ ಸಂಕಷ್ಟವಾಗುವ ಆತಂಕದಲ್ಲಿದ್ದ ಮಲೆನಾಡಿಗರಿಗೆ ನಿನ್ನೆಯಿಂದ ಸುರಿಯುತ್ತಿರುವ ವರುಣ ಆತಂಕ ದೂರ ಮಾಡಿದ್ದು, ಇನ್ನೊಂದೆಡೆ ಈ ಮಳೆಯಿಂದಾಗಿ ಮರಗಳು ಧರೆಗುರುಳಿವೆ.

Ad Widget

ಭಾರಿ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮ ಸಮೀಪ ಚಾರ್ಮಾಡಿ ಘಾಟ್‌ನ 8ನೇ ತಿರುವಿನಲ್ಲಿ 3 ಮರಗಳು ರಸ್ತೆಗುರುಳಿವೆ. ಮರಗಳು ರಸ್ತೆಗುರುಳಿದ ಪರಿಣಾಮ 3 ಗಂಟೆಗಳ ಕಾಲ ಕಿ.ಮೀ.ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.

Leave a Comment

Your email address will not be published. Required fields are marked *