September 2023

ಮೂಡುಬಿದಿರೆ: ಅ.6 ಮತ್ತು 7 ರಂದು ‘ಆಳ್ವಾಸ್ ಪ್ರಗತಿ -2023’ ಉದ್ಯೋಗ ಮೇಳ| ಪ್ರತಿಭಾನ್ವಿತರಿಗೆ ಸಿಗಲಿದೆ ಹಲವು ಉದ್ಯೋಗ

ಸಮಗ್ರ ನ್ಯೂಸ್: ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅಕ್ಟೋಬರ್‌ 6 ಮತ್ತು 7ರಂದು ‘ಆಳ್ವಾಸ್‌ ಪ್ರಗತಿ 2023’ ಉದ್ಯೋಗ ಮೇಳ ಮೂಡಬಿದಿರೆಯ ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿದೆ. ‌ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಈ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಕುರಿಯನ್‌, ‘ಗ್ರಾಮೀಣ ಭಾಗದ ಪ್ರತಿಭಾನ್ವಿತ ಯುವಕರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವ ಉದ್ದೇಶದಿಂದ ಪ್ರತಿಷ್ಠಾನವು ಉದ್ಯೋಗ ಮೇಳ ಆಯೋಜಿಸುತ್ತಾ ಬಂದಿದೆ.ಈ ವರ್ಷ 13ನೇ ಆವೃತ್ತಿಯ ಮೇಳ ನಡೆಯಲಿದೆ’ ಎಂದು ತಿಳಿಸಿದರು. ‘ಐಟಿ, ತಯಾರಿಕೆ, ಮಾರಾಟ, ಚಿಲ್ಲರೆ ವ್ಯಾಪಾರ, […]

ಮೂಡುಬಿದಿರೆ: ಅ.6 ಮತ್ತು 7 ರಂದು ‘ಆಳ್ವಾಸ್ ಪ್ರಗತಿ -2023’ ಉದ್ಯೋಗ ಮೇಳ| ಪ್ರತಿಭಾನ್ವಿತರಿಗೆ ಸಿಗಲಿದೆ ಹಲವು ಉದ್ಯೋಗ Read More »

ದ.ಕ ಜಿಲ್ಲೆಯಾದ್ಯಂತ ಸೆ.19ಕ್ಕೆ ಗಣೇಶ ಚತುರ್ಥಿ ರಜೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಸೆ.18ರ ಬದಲು ಸೆ.19ರಂದು ರಜೆ ಘೋಷಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಎಂಎಲ್ಸಿ ಕೆ.ಪ್ರತಾಪಸಿಂಹ ನಾಯಕ್ ಅವರ ಪತ್ರದೊಂದಿಗೆ ಮುಖ್ಯ ಕಾರ್ಯದರ್ಶಿಗೆ ಕಳುಹಿಸಿದ ಟಿಪ್ಪಣಿಯಲ್ಲಿ, ಮಂಗಳವಾರ ರಜೆ ಘೋಷಿಸುವುದರಿಂದ ಈ ಪ್ರದೇಶವು ಹಬ್ಬವನ್ನು ಆಚರಿಸಲು ಸಹಾಯ ಮಾಡುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ

ದ.ಕ ಜಿಲ್ಲೆಯಾದ್ಯಂತ ಸೆ.19ಕ್ಕೆ ಗಣೇಶ ಚತುರ್ಥಿ ರಜೆ Read More »

ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬೆಂಗಳೂರಿನ MG ರಸ್ತೆಯ ಬಾರ್ಟನ್ ಸೆಂಟರ್ ಕಚೇರಿಗೆ ಸೆ.14 ರಂದು ಭೇಟಿ ನೀಡಿದರು. ತಮ್ಮ ಕಚೇರಿಗೆ ಆಗಮಿಸಿದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಆತ್ಮೀಯವಾಗಿ ಸ್ವಾಗತಿಸಿ, ಶಾಲು ಹೊದಿಸಿ ಹಾರಾರ್ಪಣೆ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ತುಳುಕೂಟ ಬೆಂಗಳೂರು ಅಧ್ಯಕ್ಷರಾದ ಸುಂದರ್ ರಾಜ್, ಅಕ್ಷಯ್ ರೈ ದಂಬೆಕಾನ, ಮುರಳೀಧರ ರೈ ಮಠಂತಬೆಟ್ಟು, ನವೀನ್ ಕಲ್ಲಡ್ಕ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮತ್ತು

ಬೆಂಗಳೂರಿನ ಬಾರ್ಟನ್ ಸೆಂಟರ್ ಕಚೇರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭೇಟಿ Read More »

ಏಷ್ಯಾಕಪ್ ಕ್ರಿಕೆಟ್| ಲಂಕಾದಿಂದ ಪಾಕ್ ದಹನ

ಸಮಗ್ರ ನ್ಯೂಸ್: ಕೊಲಂಬೊದಲ್ಲಿ ಗುರುವಾರ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದ ಪಂದ್ಯದ ಕೊನೆಯ ಎಸೆತದಲ್ಲಿ ವಿಶ್ವದ ಅಗ್ರ ಕ್ರಮಾಂಕದ ತಂಡವಾದ ಪಾಕಿಸ್ತಾನವನ್ನು 2 ವಿಕೆಟ್ ಅಂತರದಿಂದ ಸೋಲಿಸಿದ ಶ್ರೀಲಂಕಾ ತಂಡ ಫೈನಲ್ ತಲುಪಿದೆ. ಮಳೆಯಿಂದ ಬಾಧಿತವಾದ ಪಂದ್ಯದಲ್ಲಿ 87 ಎಸೆತಗಳಲ್ಲಿ 91 ರನ್ ಸಾಧಿಸಿದ ಕುಶಾಲ್ ಮೆಂಡಿಸ್ ವಿಜಯದ ರೂವಾರಿ ಎನಿಸಿದರು. ಇವರ ಜತೆಗೆ ಸದೀರ ಸಮರ ವಿಕ್ರಮ ಮತ್ತು ಚರಿತ್ ಅಸಲಂಕಾ ತಮ್ಮ ತಂಡವನ್ನು ಗೆಲುವಿನ ದಡ ಸೇರಿಸಲು ಗಣನೀಯ

ಏಷ್ಯಾಕಪ್ ಕ್ರಿಕೆಟ್| ಲಂಕಾದಿಂದ ಪಾಕ್ ದಹನ Read More »

ಸೆ.15 ಇಂದು ಇಂಜಿನಿಯರ್ಸ್ ಡೇ | ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರಿಗೊಂದು ಸೆಲ್ಯೂಟ್

ಸಮಗ್ರ ನ್ಯೂಸ್: ಸರ್ ಎಂ ವಿಶ್ವೇಶ್ವರಯ್ಯ ಅವರು ದೇಶಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಅವರ ಜನ್ಮದಿನವಾದ ಸೆಪ್ಟೆಂಬರ್ 15ರಂದು ಪ್ರತಿ ವರ್ಷ ‘ಎಂಜಿನಿಯರ್ಸ್ ಡೇ’ ಆಗಿ ಆಚರಿಸಲಾಗುತ್ತದೆ. ಸರ್ ಎಂ. ವಿಶ್ವೇಶ್ವರಯ್ಯ ಅವರು ಪ್ರಖ್ಯಾತ ಇಂಜಿನಿಯರ್ ಮತ್ತು ರಾಜನೀತಿಜ್ಞರಾಗಿದ್ದರು ಮತ್ತು ಆಧುನಿಕ ಭಾರತವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೃಷ್ಣರಾಜ ಸಾಗರ ಅಣೆಕಟ್ಟಿನ ವಾಸ್ತುಶಿಲ್ಪಿ; ಅಣೆಕಟ್ಟುಗಳಲ್ಲಿ ನೀರು ವ್ಯರ್ಥವಾಗಿ ಹರಿಯುವುದನ್ನು ತಡೆಯಲು ಉಕ್ಕಿನ ಬಾಗಿಲುಗಳನ್ನು ರೂಪಿಸಿದರು.ಇಂದು ಬಹುಶಃ ಅನೇಕ ಜನರು ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು ಭಾರತದ

ಸೆ.15 ಇಂದು ಇಂಜಿನಿಯರ್ಸ್ ಡೇ | ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರಿಗೊಂದು ಸೆಲ್ಯೂಟ್ Read More »

ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ| ಬಾಯಲ್ಲಿ ನೊರೆ, ಅಸ್ವಸ್ಥ

ಸಮಗ್ರ ನ್ಯೂಸ್: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ. ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೈತ್ರಾ ಬಾಯಿಯಲ್ಲಿ ನೊರೆ

ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ| ಬಾಯಲ್ಲಿ ನೊರೆ, ಅಸ್ವಸ್ಥ Read More »

ಎಲ್ಲಾ ಸರ್ಕಾರಿ‌ ಕೆಲಸಗಳಿಗೂ ಜನನ ಪ್ರಮಾಣವಷ್ಟೇ ಸಾಕು| ಅ.1ರಿಂದ ಅಧಿಕೃತ ಜಾರಿ

ಸಮಗ್ರ ನ್ಯೂಸ್: ಕಳೆದ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ, 2023ಗೆ ತಿದ್ದುಪಡಿ ಮಾಡಲಾಗಿತ್ತು. ಇದಕ್ಕೆ ಅನುಮೋದನೆ ಕೂಡ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂತಹ ಜನನ ಪ್ರಮಾಣ ಪತ್ರವೇ ಎಲ್ಲಾ ದಾಖಲೆಗಳಿಗೆ ಮೂಲ ದಾಖಲೆಯಾಗಿಸೋ ಕಾನೂನು ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ. ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯಲು, ಚಾಲನಾ ಪರವಾನಗಿ ನೀಡಲು, ಮತದಾರರ ಪಟ್ಟಿ ತಯಾರಿಕೆ, ಆಧಾರ್ ಸಂಖ್ಯೆ, ವಿವಾಹ ನೋಂದಣಿ ಅಥವಾ ಸರ್ಕಾರಿ ಉದ್ಯೋಗಕ್ಕೆ ನೇಮಕಾತಿಗಾಗಿ ಜನನ ಪ್ರಮಾಣಪತ್ರವನ್ನು

ಎಲ್ಲಾ ಸರ್ಕಾರಿ‌ ಕೆಲಸಗಳಿಗೂ ಜನನ ಪ್ರಮಾಣವಷ್ಟೇ ಸಾಕು| ಅ.1ರಿಂದ ಅಧಿಕೃತ ಜಾರಿ Read More »

ಮಂಗಳೂರು: ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್

ಸಮಗ್ರ ನ್ಯೂಸ್: .ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕದ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿಯ ಮಹೇಶ್ (31) ಜೀವಾಂತ್ಯ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ. ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್ Read More »

ಮಂಗಳೂರು: ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ; ಮತ್ತಿಬ್ಬರು ಗಂಭೀರ

ಸಮಗ್ರ ನ್ಯೂಸ್: ಬೈಕ್ ಅಪಘಾತದಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರ ವಲಯದ ಪಡೀಲ್ ಅಂಡರ್ ಪಾಸ್‌ ಬಳಿ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು ಮತ್ತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ, ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದ ಭವಿನ್ ರಾಜ್(20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭವಿನ್‌

ಮಂಗಳೂರು: ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ; ಮತ್ತಿಬ್ಬರು ಗಂಭೀರ Read More »

ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಯಾಪ್

ಸಮಗ್ರ ನ್ಯೂಸ್: ಜನಪ್ರಿಯ ಮೆಸೆಂಜರ್‌ ಆಯಪ್ ಆಗಿರುವ ವಾಟ್ಸ್ ಆಯಪ್ ಹೊಸ ‘ವಾಟ್ಸ್ ಆ್ಯಪ್ ಚಾನೆಲ್ಸ್‌’ ಎಂಬ ಫೀಚರ್‌ ಅನ್ನು ಬಿಡುಗಡೆಗೊಳಿಸುತ್ತಿದೆ. ಇದೊಂದು ಏಕಮುಖ ಪ್ರಸಾರ ಪರಿಕರವಾಗಿದ್ದು, ಅಪ್‌ಡೇಟ್ಸ್‌ ಎಂಬ ಹೊಸ ಟ್ಯಾಬ್‌ನಲ್ಲಿ ನಿಮ್ಮ ಆಸಕ್ತಿಯ ಜನರು ಮತ್ತು ಸಂಸ್ಥೆಗಳಿಂದ ಅಪ್‌ಡೇಟ್‌ಗಳನ್ನು ಒದಗಿಸುತ್ತದೆ. ವಾಟ್ಸ್ ಆಯಪ್ ಚಾನಲ್ಸ್‌ ಎಂಬ ಈ ಹೊಸ ಫೀಚರ್‌ ಭಾರತ ಸಹಿತ 150ಕ್ಕೂ ಅಧಿಕ ದೇಶಗಳಲ್ಲಿ ಮುಂದಿನ ಕೆಲ ವಾರಗಳಲ್ಲಿ ಲಭ್ಯವಾಗಲಿದೆ. ಬಳಕೆದಾರರ ದೇಶದ ಆಧಾರದ ಮೇಲೆ ಸ್ವಯಂಚಾಲಿತವಾಗಿ ಫಿಲ್ಟರ್‌ ಮಾಡಲಾದ ಚಾನೆಲ್‌ಗಳನ್ನು

ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಯಾಪ್ Read More »