ಸಮಗ್ರ ನ್ಯೂಸ್: ಆಕಸ್ಮಿಕ ಬೆಂಕಿಗೆ ಮೀನುಗಾರಿಕಾ ಬೋಟೊಂದು ಸಂಪೂರ್ಣವಾಗಿ ಭಸ್ಮವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಂಗ್ರೆ ಮೀನುಗಾರಿಕಾ ಬಂದರಿನಲ್ಲಿ ಅ. 10ರಂದು ಮುಂಜಾನೆ 4.30ಕ್ಕೆ ಸಂಭವಿಸಿದೆ.
ಬೋಟ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸಿ ಕೋಟ್ಯಾಂತರ ಮೌಲ್ಯದ ವಸ್ತು ನಾಶವಾಗಿದೆ. ಬೆಂಕಿ ಬಂದರಿನಲ್ಲಿ ಲಂಗರು ಹಾಕಿರುವ ಇನ್ನಷ್ಟು ಬೋಟ್ ಗಳಿಗೆ ಹರಡುವ ಮುನ್ಸೂಚನೆ ದೊರೆತ ಹಿನ್ನಲೆಯಲ್ಲಿ ಸ್ಥಳೀಯರು ಬೆಂಕಿ ತಗುಲಿದ ಬೋಟನ್ನು ಬಂದರಿನಿಂದ ನದಿ ಕಡೆಗೆ ಕೊಂಡೊಯ್ದಿದ್ದಾರೆ.
ಸ್ಥಳೀಯರ ಮುನ್ನೆಚರಿಕೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಅರುಣ್ ಎಂಬವರು ಈ ಬೋಟ್ ಅನ್ನು ನಡೆಸುತ್ತಿದ್ದರು. ಕದ್ರಿ ಮತ್ತು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.






