October 2023

ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ರೆಕಾರ್ಡ್ ನಿರ್ಮಿಸಿದ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ

ಸಮಗ್ರ ನ್ಯೂಸ್: ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆಯುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ ಮೈಕ್ರೊ ಪರಮೇಶ್ ಇಂಡಿಯಾ ಬುಕ್ ಆಪ್ ರೆಕಾರ್ಡ್‌ ಸೇರಿದ್ದಾರೆ. ನಾಡಗೀತೆ ಬರೆಯಲು 136 ಅಕ್ಕಿ ಕಾಳು ಹಾಗೂ 2 ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಕಡಿಮೆ ಅವಧಿಯಲ್ಲಿ, ಕಡಿಮೆ ಅಕ್ಕಿ ಕಾಳುಗಳನ್ನು ಬಳಸಿಕೊಂಡು ಈ ದಾಖಲೆ ಮಾಡಿರುವುದು ಅವರ ಸಾಧನೆಯಾಗಿದೆ. ಇಂಡಿಯಾ ಬುಕ್ ಆಪ್ ರೆಕಾರ್ಡ್‌ ಸಂಸ್ಥೆಯುವರು ಇತ್ತೀಚೆಗೆ ಕುಕ್ಕೆಗೆ ಬಂದು ಪರಮೇಶ ಅವರ ಸಾಧನೆಯನ್ನು ವೀಡಿಯೊ ದಾಖಲೆ ಮಾಡಿಕೊಂಡು ಹೋಗಿದ್ದರು. ಗುರುವಾರ ಸಂಸ್ಥೆಯು […]

ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ರೆಕಾರ್ಡ್ ನಿರ್ಮಿಸಿದ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ Read More »

ಹವಾಮಾನ ವರದಿ| ನಿಮ್ನ ಒತ್ತಡ, ಚಂಡಮಾರುತ ಭೀತಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಪಶ್ಚಿಮ ಮಧ್ಯ ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗಿದ್ದು, ಅ. 21ಕ್ಕೆ ಚಂಡಮಾರುತವಾಗಿ ಪರಿವರ್ತನೆ ಯಾಗಲಿದೆ. ಅ. 22ರ ಬಳಿಕ ಮಳೆ ಮತ್ತಷ್ಟು ತೀವ್ರತೆ ಪಡೆಯುವ ಸಾಧ್ಯತೆ ಇದೆ. ಇದರ ಪರಿಣಾಮ ಕರಾವಳಿ ಭಾಗಕ್ಕೆ ಅಷ್ಟೊಂದು ಇಲ್ಲದಿದ್ದರೂ ಕೆಲವೊಂದು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಸದ್ಯಕ್ಕೆ ಯಾವುದೇ ಅಲರ್ಟ್‌ ಘೋಷಿಸಲಿಲ್ಲ. ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ

ಹವಾಮಾನ ವರದಿ| ನಿಮ್ನ ಒತ್ತಡ, ಚಂಡಮಾರುತ ಭೀತಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ Read More »

ಸುವರ್ಣ ರಾಜ್ಯೋತ್ಸವ ಹಿನ್ನಲೆ| ಐದು ಕನ್ನಡ ಗೀತಗಾಯನ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ನ.1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಐದು ಕನ್ನಡಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ರಾಜ್ಯದ

ಸುವರ್ಣ ರಾಜ್ಯೋತ್ಸವ ಹಿನ್ನಲೆ| ಐದು ಕನ್ನಡ ಗೀತಗಾಯನ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ Read More »

ನವರಾತ್ರಿ ನವದುರ್ಗೆ| ಸಪ್ತಮಿ ದಿನ ಕಾಳರಾತ್ರಿ ಪೂಜೆ, ಕಷ್ಟ ನಷ್ಟಗಳಿಗೆ ಕೊನೆ

ಸಮಗ್ರ ವಿಶೇಷ: ಶರನ್ನವರಾತ್ರಿಯ ಸಪ್ತಮಿ ತಿಥಿಯ ದಿನದಂದು ಮಾತಾ ದುರ್ಗೆಯ ಅತ್ಯಂತ ಶಕ್ತಿಶಾಲಿ ರೂಪವನ್ನು ಪೂಜಿಸಲಾಗುತ್ತದೆ. ಈ ದಿನ ಮಾತಾ ಕಾಳರಾತ್ರಿ ಪೂಜೆ ಮತ್ತು ಮಂತ್ರಗಳನ್ನು ಪಠಿಸುವುದರಿಂದ ಎಲ್ಲಾ ರೀತಿಯ ಕಷ್ಟ, ನೋವುಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಮಾತಾ ಕಾಳರಾತ್ರಿಯನ್ನು ಎಲ್ಲಾ ಸಿದ್ಧಿಗಳ ದೇವತೆ ಎಂದೂ ಕರೆಯಲಾಗುತ್ತದೆ. ಆದ್ದರಿಂದ ಈ ದಿನ ತಾಯಿಯನ್ನು ತಂತ್ರ-ಮಂತ್ರದಿಂದ ಪೂಜಿಸಲಾಗುತ್ತದೆ. ಈಕೆಯನ್ನೇ ದಕ್ಷಿಣ ಭಾರತದಲ್ಲಿ ಸರಸ್ವತಿ ದೇವಿ ಎಂದು ಪೂಜಿಸಲಾಗುತ್ತದೆ. ಮಾತಾ ಕಾಳರಾತ್ರಿ ಯ ಮಂತ್ರಗಳನ್ನು ಪಠಿಸುವುದರಿಂದ ಭೂತದೆವ್ವ, ನಕಾರಾತ್ಮಕ ಶಕ್ತಿಗಳು

ನವರಾತ್ರಿ ನವದುರ್ಗೆ| ಸಪ್ತಮಿ ದಿನ ಕಾಳರಾತ್ರಿ ಪೂಜೆ, ಕಷ್ಟ ನಷ್ಟಗಳಿಗೆ ಕೊನೆ Read More »

ಕಾಣಿಯೂರು: ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ

ಸಮಗ್ರ ನ್ಯೂಸ್: ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಯೋಗಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ. ಇವರು ಕಾಣಿಯೂರು ಪ್ರಗತಿ ವಿದ್ಯದಸಂಸ್ಥೆಯ ಆರನೇ ತರಗತಿ ವಿದ್ಯಾರ್ಥಿ. ಹಾಗೂ ಯೋಗ ಶಿಕ್ಷಕಿ ಶಶಿಕಲಾ ಅವರ ವಿದ್ಯಾರ್ಥಿ.

ಕಾಣಿಯೂರು: ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೋನಿಷ್ ತಂಟೆಪ್ಪಾಡಿ ನಾಲ್ಕನೇ ಸ್ಥಾನ Read More »

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್, ವೀಲ್ ಚೇರ್ ಹಸ್ತಾಂತರ

ಸಮಗ್ರ ನ್ಯೂಸ್:ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿ ನೀಡಲಾದ ವಾಟರ್ ಬೆಡ್ ಮತ್ತು ವೀಲ್ ಚೇರ್ ಅನ್ನು ವಲಯ ಮೇಲ್ವಿಚಾರಕ ಗೋಪಾಲಕೃಷ್ಣ ಅವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಸುಳ್ಯ ತಾಲೂಕಿನ ಐವರ್ನಾಡು ಒಕ್ಕೂಟದ ಕೋಡ್ತಿಲು ಸ್ವರ್ಣಗೌರಿ ಸಂಘದ ಸದಸ್ಯ ಮಲ್ಲು ರವರ ತಾಯಿ ಚೋಮು ಅವರಿಗೆ ಹಾಗೂ ಐವರ್ನಾಡು ಗ್ರಾಮದ ಪಾಲೇಪ್ಪಾಡಿ ಒಕ್ಕೂಟದ ಅಧ್ಯಕ್ಷ ರಾಮಚಂದ್ರರವರ ತಾಯಿ ಸೀತಮ್ಮ ಅವರಿಗೆ ವಾಟರ್ ಬೆಡ್ ಮತ್ತು ಶ್ರೀ ಲಕ್ಷ್ಮೀ ಸ್ವ ಸಹಾಯ ಸಂಘದ ಸದಸ್ಯೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್, ವೀಲ್ ಚೇರ್ ಹಸ್ತಾಂತರ Read More »

ಸುಳ್ಯ: ಗಣಪತಿ ಕಲಾ ಕೇಂದ್ರದವರಿಂದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ವ್ಯಾಘ್ರಚಾಮುಂಡಿ ದೇವಸ್ಥಾನ ಕಾಯರ್ತೋಡಿಯಲ್ಲಿ ನವರಾತ್ರಿ ಉತ್ಸವದ 5ನೇ ದಿನದಂದು ಶ್ರೀ ಗಣಪತಿ ಕಲಾ ಕೇಂದ್ರ ಸುಳ್ಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಹಾರ್ಮೋನಿಯಂನಲ್ಲಿ ಶಿವಾನಂದ ಉಪ್ಪಲ, ತಬಲದಲ್ಲಿ ವಿನೋದ್ ಅರಂಬೂರು, ಕೊಳಲು ವಾದನದಲ್ಲಿ ಜಯರಾಂ ಶಾಂತಿನಗರ ಸಹಕರಿಸಿದರು. ಗಾಯಕರಾಗಿ ಯೋಗೀಶ್ ಎಸ್. ಜಯನಗರ, ಲಕ್ಷ್ಮೀನಾರಾಯಣ, ಚಂದ್ರಶೇಖರ ಮೇನಾಲ, ವಸುಚರಣ್ ಶಾಂತಿನಗರ,ವಿಜೇಶ್ ಬೊಳುಬೈಲು, ಕೀರ್ತನ ಜಯನಗರ, ವಿದ್ಯಾ ಅರಂಬೂರು ಭಾಗವಹಿಸಿದ್ದರು.

ಸುಳ್ಯ: ಗಣಪತಿ ಕಲಾ ಕೇಂದ್ರದವರಿಂದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ Read More »

ಅಸಿಸ್ಟೆಂಟ್ ಪ್ರೊಫೆಸರ್, ಸೈಂಟಿಸ್ಟ್ ಹುದ್ದೆಗಳು ಖಾಲಿ ಇವೆ! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: ಉದ್ಯೋಗ ಹುಡುಕುತ್ತಿರೋ ಆಕಾಂಕ್ಷಿಗಳಿಗೆ ಒಂದು ಗುಡ್ ನ್ಯೂಸ್​. ಆಸಕ್ತ ಅಭ್ಯರ್ಥಿಗಳು 31-Oct-2023 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅನ್ವಯಿಸಬಹುದು. 32 ಇಂಜಿನಿಯರ್, ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅಕ್ಟೋಬರ್ 2023 ರ CCI ಅಧಿಕೃತ ಅಧಿಸೂಚನೆಯ ಮೂಲಕ ಇಂಜಿನಿಯರ್, ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಸಿಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job details:ಸಂಸ್ಥೆಯ ಹೆಸರು: ಇನ್ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್

ಅಸಿಸ್ಟೆಂಟ್ ಪ್ರೊಫೆಸರ್, ಸೈಂಟಿಸ್ಟ್ ಹುದ್ದೆಗಳು ಖಾಲಿ ಇವೆ! ಬೇಗ ಅಪ್ಲೇ ಮಾಡಿ Read More »

ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ ಇವೆ, ಒಳ್ಳೆಯ ಸ್ಯಾಲರಿ ಕೂಡ ಕೊಡ್ತಾರೆ!

ಸಮಗ್ರ ಉದ್ಯೋಗ: NIMHANS Recruitment ಆರಂಭಿಸಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ NIMHANS ಅಧಿಕೃತ ಅಧಿಸೂಚನೆಯ ಮೂಲಕ ಅಕ್ಟೋಬರ್ 2023 ರ ಮೂಲಕ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 18-ನವೆಂಬರ್-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ನಿಮ್ಹಾನ್ಸ್ ಹುದ್ದೆಯ ಅಧಿಸೂಚನೆಸಂಸ್ಥೆಯ ಹೆಸರು: ನ್ಯಾಷನಲ್

ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ ಇವೆ, ಒಳ್ಳೆಯ ಸ್ಯಾಲರಿ ಕೂಡ ಕೊಡ್ತಾರೆ! Read More »

ವಿಟ್ಲದ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದಲ್ಲಿ ದನದ ಕಿವಿ!! ಗೋಮಾತೆಯ ಮೇಲೆ ವಿಕೃತಿ ಮೆರೆದವರಿಗೆ ಶೋಧ

ಸಮಗ್ರ ನ್ಯೂಸ್: ದುಷ್ಕರ್ಮಿಗಳು ದನದ ಕಿವಿ ಕತ್ತರಿಸಿ ಬಿಸಾಕಿದ ಘಟನೆ‌ ವಿಟ್ಲದ ಕೆಲಿಂಜ ಕೊಟ್ಟಾರಿ ಕಟ್ಟೆ ಬಸ್ಸು ನಿಲ್ದಾಣದ ಬಳಿ ಅ. 20 ರಂದು ಬೆಳಕಿಗೆ ಬಂದಿದೆ. ವೀರಕಂಭ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್ ನಿಲ್ದಾಣದ ಬಳಿ ಅ. 20ರಂದು ಮುಂಜಾನೆ ಕತ್ತರಿಸಿದ ದನದ ಕಿವಿ ಮತ್ತು ಚರ್ಮ ಪತ್ತೆಯಾಗಿದೆ. ಸ್ಥಳೀಯರು ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಸೇರಿದ್ದು, ಈ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಡಹಬ್ಬ ದಸರಾ ಮತ್ತು

ವಿಟ್ಲದ ಕೊಟ್ಟಾರಿಕಟ್ಟೆ ಬಸ್ ನಿಲ್ದಾಣದಲ್ಲಿ ದನದ ಕಿವಿ!! ಗೋಮಾತೆಯ ಮೇಲೆ ವಿಕೃತಿ ಮೆರೆದವರಿಗೆ ಶೋಧ Read More »