October 2023

ಇಸ್ರೇಲ್ – ಹಮಾಸ್ ಕದನ/ ನಾಳೆ ಇಸ್ರೇಲ್‌ಗೆ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಭೇಟಿ

ಸಮಗ್ರ ನ್ಯೂಸ್: ಇಸ್ರೇಲ್ ಹಾಗೂ ಹಮಾಸ್ ನಡುವಿನ ಕದನ ಮುಂದುವರೆದಿದ್ದು, ಇದೀಗ ಅಮೆರಿಕಾ ಅಧ್ಯಕ್ಷ ಜೋ ಬಿಡೆನ್ ನಾಳೆ ಇಸ್ರೇಲ್ ಗೆ ಭೇಟಿ ನೀಡಲಿದ್ದಾರೆ. ಯುದ್ಧದ ಆರಂಭದ ದಿನದಿಂದಲೂ ಇಸ್ರೇಲ್ ಗೆ ಸಹಾಯಹಸ್ತವನ್ನು ಚಾಚುತ್ತ ಬಂದಿರುವ ಅಮೇರಿಕಾ, ಇದೀಗ ಗಾಜಾ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ಯುಎಸ್ ಅಧ್ಯಕ್ಷ ಜೋ ಬಿಡೆನ್ ಬುಧವಾರ ಇಸ್ರೇಲ್‌ಗೆ ಭೇಟಿ ನೀಡುತ್ತಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಮಹತ್ವ ಪಡೆದುಕೊಂಡಿದೆ. ಹಮಾಸ್ ಸೇರಿದಂತೆ ಇತರೆ ಭಯೋತ್ಪಾದಕರಿಂದ ತನ್ನ ಜನರನ್ನು ರಕ್ಷಿಸಲು ಮತ್ತು ಭವಿಷ್ಯದ […]

ಇಸ್ರೇಲ್ – ಹಮಾಸ್ ಕದನ/ ನಾಳೆ ಇಸ್ರೇಲ್‌ಗೆ ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಭೇಟಿ Read More »

20 ಅಡಿ ಕರ್ನಾಟಕದ ಲೇಖನಿ/ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ

ಸಮಗ್ರ ನ್ಯೂಸ್: ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ತಯಾರಾದ 20 ಅಡಿ ಉದ್ದದ ಲೇಖನಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಸಿಕ್ಕಿದೆ. ಸಾಗರದ ಆವಿನಹಳ್ಳಿಯ ಗಣೇಶ್ ಹಾರ್ಡ್‌ವೇರ್ ಮತ್ತು ಜೈಗಣೇಶ್ ವುಡ್‌ವರ್ಕ್ ಮಾಲೀಕ, ಕುಶಲಕರ್ಮಿಯೂ ಆಗಿರುವ ಕೃಷ್ಣಮೂರ್ತಿ ಆಚಾರ್ ಹತ್ತು ವರ್ಷಗಳ ಹಿಂದೆ ಪೆನ್ ತಯಾರಿಸಿದ ಈ ಲೇಖನಿಗೆ ನವದೆಹಲಿಯಲ್ಲಿ ಶನಿವಾರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ದಾಖಲಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೃಷ್ಣಮೂರ್ತಿ ಆಚಾರ್ ವಿಶ್ವಕರ್ಮಸ್ ಎಂಬ ಹೆಸರಿನಲ್ಲಿ ಈ ಬೃಹತ್ ಲೇಖನಿಯನ್ನು

20 ಅಡಿ ಕರ್ನಾಟಕದ ಲೇಖನಿ/ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ Read More »

ಚೈತ್ರಾ ವಂಚನೆ ಪ್ರಕರಣ| ಮೂರನೇ ಆರೋಪಿ ಹಾಲಶ್ರೀ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್:ಕೋಟ್ಯಾಂತರ ರೂ. ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನು ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಹಾಲಶ್ರೀ ಪರ ವಕೀಲರು ಮನವಿ ಮಾಡಿದ್ದರು.

ಚೈತ್ರಾ ವಂಚನೆ ಪ್ರಕರಣ| ಮೂರನೇ ಆರೋಪಿ ಹಾಲಶ್ರೀ ಜಾಮೀನು ಅರ್ಜಿ ವಜಾ Read More »

ಇಂದು ತುಲಾ ಸಂಕ್ರಮಣ| ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಕಲ ಸಿದ್ದತೆ

ಸಮಗ್ರ ನ್ಯೂಸ್: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ. ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ.

ಇಂದು ತುಲಾ ಸಂಕ್ರಮಣ| ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಕಲ ಸಿದ್ದತೆ Read More »

ಫ್ರೀ ಟಿಕೆಟ್​​​ ಹರಿದು ಎಸೆದ ಬಿಎಂಟಿಸಿ ಬಸ್​ ಕಂಡಕ್ಟರ್​ ಅಮಾನತು

ಸಮಗ್ರ ನ್ಯೂಸ್: ಮಹಿಳೆಯರಿಗೆ ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವ ಶಕ್ತಿ ಯೋಜನೆ ಜಾರಿ ಬಂದ ನಂತರ ಇಲಾಖೆಯ ಆದಾಯ ಹೆಚ್ಚಾಗುತ್ತಿದೆ. ಆದರೆ, ಉಚಿತ ಟಿಕೆಟ್​ಗಳನ್ನು ಬಿಎಂಟಿಸಿ ಬಸ್ ಕಂಡೆಕ್ಟರ್ ಹರಿದು ಬಿಸಾಡುವ ಮೂಲಕ ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ತನಿಖೆ ನಡೆಸಿದ ಅಧಿಕಾರಿಗಳು ಕಂಡೆಕ್ಟರ್​ನನ್ನು ಅಮಾನತು ಮಾಡಿದ್ದಾರೆ. ಮೆಜೆಸ್ಟಿಕ್​​​​ನಿಂದ ತಾವರಕೆರೆ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶ್ ಅರ್ಜುನ್ ಕೊಟ್ಯಾಳ ಅಮಾನತುಗೊಂಡ ಕಂಡಕ್ಟರ್​. ಡಿಪೋ-17 ಮಾರ್ಗದ

ಫ್ರೀ ಟಿಕೆಟ್​​​ ಹರಿದು ಎಸೆದ ಬಿಎಂಟಿಸಿ ಬಸ್​ ಕಂಡಕ್ಟರ್​ ಅಮಾನತು Read More »

ನವರಾತ್ರಿ ನವದುರ್ಗೆ| ಇಂದು ಚಂದ್ರಘಂಟಾ ದೇವಿಯ ಆರಾಧನೆ ಮಾಡಿ

ಸಮಗ್ರ ವಿಶೇಷ: ಮಂತ್ರ ತಂತ್ರ ಮುಂತಾದ ವಿಧಿ ವಿಧಾನಗಳಿಂದ ಪೂಜೆಗೈಯುವ ದುರ್ಗಾ ಮಾತೆಯ ಮೂರನೆಯ ಶಕ್ತಿಯ ಹೆಸರೇ ಚಂದ್ರಘಂಟಾ. ನವರಾತ್ರಿಯ 3ನೆಯ ದಿನದಂದು ಈಕೆಯ ಪೂಜೆಯನ್ನು ಮಾಡಲಾಗುತ್ತದೆ. ನೋಡಲು ಶಾಂತಿ ಸ್ವರೂಪಿಯಂತೆ ಕಾಣುತ್ತಾಳೆ. ಮಸ್ತಕದಲ್ಲಿ ಘಂಟೆಯನ್ನು ಹೋಲುವ ಅರ್ಧ ಚಂದ್ರನಿದ್ದಾನೆ. ಈ ಕಾರಣದಿಂದಲೇ ಈಕೆಗೆ ಚಂದ್ರ ಘಂಟ ಎಂಬ ಹೆಸರು ಬಂದಿದೆ. ಪ್ರತಿಯೊಂದು ಕೈಗಳಲ್ಲಿಯೂ ಆಯುಧಗಳನ್ನು ಹಿಡಿದುತನ್ನ ವಾಹನವಾದ ಸಿಂಹದ ಮೇಲೆ ಈಕೆ ಕುಳಿತಿದ್ದಾಳೆ. ಇವಳ ಆಕೃತಿ ರಾಕ್ಷಸರನ್ನು ಸಂಹರಿಸಲು ಹೊರಟಂತಿದೆ. ನವರಾತ್ರಿಯ ಮೂರನೆಯ ದಿನದ ಪೂಜೆಯು

ನವರಾತ್ರಿ ನವದುರ್ಗೆ| ಇಂದು ಚಂದ್ರಘಂಟಾ ದೇವಿಯ ಆರಾಧನೆ ಮಾಡಿ Read More »

ಕಾವೇರಿ ಇನ್ನು ದುಬಾರಿ/ ಬೆಂಗಳೂರಿನಲ್ಲಿ ಕಾವೇರಿ ನೀರಿಗೂ ತಟ್ಟಲಿದೆ ಬೆಲೆ ಏರಿಕೆಯ ಬಿಸಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಲೆ ಏರಿಕೆಯ ಬಿಸಿ ಎಲ್ಲಾ ಕ್ಷೇತ್ರಗಳನ್ನು ತಲುಪುತ್ತಿದ್ದು, ಇದೀಗ ಕಾವೇರಿ ನೀರು ಕೂಡ ದುಬಾರಿಯಾಗುವ ಸಾಧ್ಯತೆ ಕಂಡುಬರುತ್ತಿದೆ ಬಿಡಬ್ಲ್ಯೂಎಸ್‌ಎಸ್‌ಬಿ ನೀರಿನ ದರ ಏರಿಕೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ನೀರಿನ ದರ ಏರಿಕೆಗೆ ಜಲಮಂಡಳಿ ಮುಂದಾಗಿದೆ. 9 ವರ್ಷಗಳ ನಂತರ ನೀರಿನ ದರ ಏರಿಕೆ ಆಗುವ ಸಾಧ್ಯತೆ ಇದೆ. ಆದಾಯ ಕುಸಿತದ ಪರಿಣಾಮ ಆರ್ಥಿಕ ವೆಚ್ಚವನ್ನು ಸರಿದೂಗಿಸುವ ನಿಟ್ಟಿನಲ್ಲಿ ಜಲಮಂಡಳಿ ನೀರಿನ ಬೆಲೆ ಹೆಚ್ಚಳಕ್ಕೆ ಮುಂದಾಗಿದ್ದು, ಗೃಹ ಬಳಕೆ ಶೇ.30 ರಿಂದ 40, ವಾಣಿಜ್ಯ ಬಳಕೆ

ಕಾವೇರಿ ಇನ್ನು ದುಬಾರಿ/ ಬೆಂಗಳೂರಿನಲ್ಲಿ ಕಾವೇರಿ ನೀರಿಗೂ ತಟ್ಟಲಿದೆ ಬೆಲೆ ಏರಿಕೆಯ ಬಿಸಿ Read More »

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ Read More »

ಚಿಕ್ಕಮಗಳೂರು:ಕಾರು ಮುಖಾಮುಖಿ ಡಿಕ್ಕಿ| ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ರಸ್ತೆಯ ಇಕ್ಕೆಲಗಳ ಮರಗಿಡಗಳು ಹುಲುಸಾಗಿ ಬೆಳೆದಿದ್ದು ಅವುಗಳನ್ನ ಕಡಿಯದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ನಡೆದಿದೆ. ಲೋಕೋಪಯೋಗಿ ಇಲಾಖೆ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಳನ್ನು ಕಡಿಯದ ಹಿನ್ನೆಲೆ ರಸ್ತೆ ಕಾಣದೆ ಮೇಲಿಂದ ಮೇಲೆ ಅಪಘಾತಗಳಾಗ್ತಿವೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ತಿರುವಿನಲ್ಲಿ ರಸ್ತೆ ಸೂಕ್ತವಾಗಿ ಕಾಣಿಸದೆ ಹೊರನಾಡಿಗೆ ಹೋಗುತ್ತಿದ್ದ ಹಾಗೂ ಹೊರನಾಡಿನಿಂದ ಬರುತ್ತಿದ್ದ ಎರಡು ಕಾರುಗಳು ತಿರುವಿನಲ್ಲಿ

ಚಿಕ್ಕಮಗಳೂರು:ಕಾರು ಮುಖಾಮುಖಿ ಡಿಕ್ಕಿ| ನಾಲ್ವರಿಗೆ ಗಾಯ Read More »

ಶಾಸಕ‌ ಸ್ವರೂಪ್ ಪ್ರಕಾಶ್ ಗೆ ಕರೆಂಟ್ ಶಾಕ್| ನಗರ ಸಭೆ ಸಾಮಾನ್ಯ ಸಭೆಯಲ್ಲಿ ಘಟನೆ

ಸಮಗ್ರ ನ್ಯೂಸ್: ಹಾಸನ ನಗರಸಭೆಯಲ್ಲಿ ವೇದಿಕೆ ಮೇಲೆ ನಿಂತು ಮಾತನಾಡುತ್ತಿದ್ದ ಶಾಸಕ ಸ್ವರೂಪ್‌ ಪ್ರಕಾಶ್‌ ಅವರಿಗೆ ಸಿಟ್ಟಿಂಗ್‌ ಮೈಕ್‌ ಮುಟ್ಟಿದಾಗ ಕರೆಂಟ್‌ ಶಾಕ್‌ ಹೊಡೆದಿದ್ದು, ಅದರಿಂದ ಕೈ ತೆಗೆದ ತಕ್ಷಣವೇ ಕರೆಂಟ್‌ ಹೋಗಿದೆ. ಸಾಮಾನ್ಯ ಸಭೆಯಲ್ಲಿ ವೇದಿಕೆ ಮೇಲೆ ನಿಂತು ಮಾತನಾಡೋ ವೇಳೆ ಕರೆಂಟ್ ಶಾಕ್ ಹೊಡೆಸಿಕೊಂಡಿದ್ದಾರೆ. ನಗರಸಭೆ ಕುವೆಂಪು ಸಭಾಂಗಣದಲ್ಲಿ ನಡೆಯುತ್ತಿದ್ದ ನಗರಸಭಾಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಾಮಾನ್ಯ ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಭಾಗಿಯಾಗಿದ್ದರು. ಈ ವೇಳೆ ಮಾತನಾಡುತ್ತಾ ವೇದಿಕೆ ಮೇಲಿದ್ದ ಟೇಬಲ್ ಮೈಕ್ ಮುಟ್ಟಿದ

ಶಾಸಕ‌ ಸ್ವರೂಪ್ ಪ್ರಕಾಶ್ ಗೆ ಕರೆಂಟ್ ಶಾಕ್| ನಗರ ಸಭೆ ಸಾಮಾನ್ಯ ಸಭೆಯಲ್ಲಿ ಘಟನೆ Read More »