ಕಡಬ: ಮಕ್ಕಳಾಗಿಲ್ಲ ಎಂದು ಸಾವಿಗೆ ಶರಣಾದ ವ್ಯಕ್ತಿ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವರು
ಮಕ್ಕಳಾಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಘಟನೆ ಕಡಬ ತಾಲೂಕು ಕಾಣಿಯೂರು ಗ್ರಾಮದ ಅಬ್ಬಡದಲ್ಲಿ ಅ.12 ರಂದು ನಡೆದಿದೆ. ಮೃತಪಟ್ಟವರನ್ನು ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ.

. Ad Widget . Ad Widget

ಮನೆಯಲ್ಲಿ ಯಾರೂ ಇಲ್ಲದ ವೇಳೆ ಅವರು ಸಾವಿಗೆ ಶರಣಾಗಿದ್ದಾರೆ. ಕಳೆದ 20 ವರ್ಷಗಳ ಹಿಂದೆ ಅವರು ಶೋಭಾ ಅನ್ನುವವರ ಜೊತೆ ವಿವಾಹವಾಗಿದ್ದರು. ಆದರೆ ಅವರಿಗೆ ಸಂತಾನ ಭಾಗ್ಯ ಒಲಿದು ಬಂದಿರಲಿಲ್ಲ. ಇದರಿಂದ ನೊಂದು ಮದ್ಯ ಸೇವನೆ ಮಾಡಲು ಶುರು ಮಾಡಿಕೊಂಡಿದ್ದರು.

. Ad Widget . . Ad Widget . Ad Widget

ಇತ್ತೀಚೆಗೆ ಸುಮಾರು 4 ವರ್ಷಗಳಿಂದ ಲೋಕಯ್ಯ ಗೌಡರು ಕೂಲಿ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು , ಮದ್ಯ ಸೇವನೆ ಅಧಿಕವಾಗಿ ಸಮಯಕ್ಕೆ ಸರಿಯಾಗಿ ಅನ್ನ – ಆಹಾರ ಇಲ್ಲದೇ ನಿತ್ರಾಣಗೊಂಡಿದ್ದರು . ನ.12ರಂದು ಶೋಭಾ ಬೆಳಗ್ಗೆ ಕೂಲಿ ಕೆಲಸಕ್ಕೆ ಹೋಗಿದ್ದು , ಸಂಜೆ ಮನೆಗೆ ಬಂದಾಗ ಮನೆಯ ಹಾಲ್ ನಲ್ಲಿ ಲೋಕಯ್ಯ ಗೌಡರು ಬಿದ್ದುಕೊಂಡಿದ್ದು , ಅವರ ಬಾಯಿಯಿಂದ ಬಿಳಿ ನೊರೆ ಬಂದಿದ್ದು , ಘಾಟು ವಾಸನೆ ಬರುತ್ತಿತ್ತು . ಮುಟ್ಟಿ ನೋಡಿದಾಗ ಮೈ ತಣ್ಣಗಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪರೀಕ್ಷಿಸಿದಾಗ ಲೋಕಯ್ಯ ಗೌಡರು ಮೃತಪಟ್ಟಿರುವುದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

Your email address will not be published. Required fields are marked *