ಉಬರಡ್ಕ: ಸೌಜನ್ಯ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನೆ ಆರಂಭ

ಸಮಗ್ರ ನ್ಯೂಸ್: ಸೌಜನ್ಯ ಪರ ಹೋರಾಟ ಸಮಿತಿ ಉಬರಡ್ಕ ಮಿತ್ತೂರು ಆಶ್ರಯದಲ್ಲಿ ಸೌಜನ್ಯ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆ ಉಬರಡ್ಕದಲ್ಲಿ ನ. 20ರಂದು ನಡೆಯಿತು.

Ad Widget ... ..

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಉದ್ಘಾಟಿಸಿದರು. ತುಳು ಜಾನಪದ ವಾಗ್ಮಿ ತಮ್ಮಣ್ಣ ಶೆಟ್ಟಿ, ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್, ಸೌಜನ್ಯ ತಾಯಿ ಕುಸುಮಾವತಿ, ನ್ಯಾಯವಾದಿ ಮೋಹಿತ್ ಕುಮಾರ್, ಸಾಮಾಜಿಕ ಕಾರ್ಯಕರ್ತೆ ಪ್ರಸನ್ನರವಿ, ಗೌಡ ಯುವ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ವೆಂಕಟ್ರಮಣ ಗೌಡ ಕೆದಂಬಾಡಿ ಮತ್ತಿತರರು ಉಪಸ್ಥಿತರಿದ್ದರು. ಉಬರಡ್ಕ ಮಿತ್ತೂರು ಸೌಜನ್ಯ ಪರ ಹೋರಾಟ ಸಮಿತಿ ಸಂಚಾಲಕ ಗಂಗಾಧರ ಪಿ.ಎಸ್. ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸುಳ್ಯ ಪೊಲೀಸರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Ad Widget

Leave a Comment

Your email address will not be published. Required fields are marked *