ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಅಧ್ಯಯನ ಮತ್ತು ಸಮೀಕ್ಷೆ/ ಡಿಸೆಂಬರ್ 18 ರಂದು ವರದಿ ಸಲ್ಲಿಸಲು ಸೂಚನೆ

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಅಧ್ಯಯನ ಮತ್ತು ಸಮೀಕ್ಷೆಯ ವರದಿಯನ್ನು ಡಿಸೆಂಬರ್ 18 ರಂದು ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಸೂಚಿಸಿದ್ದಾರೆ

Ad Widget ... ..

ಸ್ಥಾಯಿ ಸರ್ಕಾರಿ ವಕೀಲ ಅಮಿತ್ ಶ್ರೀವಾಸ್ತವ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ವರದಿಯನ್ನು ಸಲ್ಲಿಸಬೇಕಿದ್ದ ಎಎಸ್‍ಐ ಅಧೀಕ್ಷಕ ಪುರಾತತ್ವಶಾಸ್ತ್ರಜ್ಞ ಅವಿನಾಶ್ ಮೊಹಾಂತಿ ಅವರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಉಲ್ಲೇಖಿಸಿದ್ದಾರೆ. ಈ ಅರ್ಜಿಯ ಮೂಲಕ ಎಎಸ್‍ಐ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದೆ ಎಂದು ಅವರು ತಿಳಿಸಿದ್ದಾರೆ.

Ad Widget

ಡಿಸೆಂಬರ್ 18 ರಂದು ವರದಿಯನ್ನು ಸಲ್ಲಿಸಲು ಎಎಸ್‍ಐಗೆ ನ್ಯಾಯಾಲಯ ಒಂದು ವಾರ ಕಾಲಾವಕಾಶ ನೀಡಿದೆ ಎಂದು ಶ್ರೀವಾಸ್ತವ ಹೇಳಿದರು

Leave a Comment

Your email address will not be published. Required fields are marked *