ಬೆಳ್ತಂಗಡಿ: ಮರ ಕಡಿಯುವ ಯಂತ್ರ ಕುತ್ತಿಗೆಗೆ ಸಿಕ್ಕಿ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಮರ ಕಡಿಯುವ ವೇಳೆ ಆಯತಪ್ಪಿ ಕಟ್ಟಿಂಗ್ ಮೆಷಿನ್ ಜೊತೆ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬೆಳ್ತಂಗಡಿಯ ಸಾವ್ಯದಲ್ಲಿ ನಡೆದಿದೆ. ಮೃತರನ್ನು ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಎಂದು ಗುರುತಿಸಲಾಗಿದೆ.

Ad Widget ... .. Ad Widget .

ಈ ಘಟನೆ ಡಿಸೆಂಬರ್ 19 ರಂದು ನಡೆದಿದ್ದು, ಪ್ರಶಾಂತ್ ಕಟ್ಟಿಂಗ್ ಮೇಷಿನ್ ಜೊತೆ ಮರ ಕತ್ತರಿಸುತ್ತಿದ್ದರು, ಈ ವೇಳೆ ಆಯತಪ್ಪಿ ಅವರು ಮೆಷಿನ್ ಜೊತೆಗೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಕಟ್ಟಿಂಗ್ ಮೆಷಿನ್ ಚಾಲನಾ ಸ್ಥಿತಿಯಲ್ಲಿದ್ದ ಕಾರಣ ಅದು ಅವರ ಕುತ್ತಿಗೆಗೆ ತಾಗಿದೆ.

Ad Widget

ಗಂಭೀರ ಗಾಯದ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಸ್ಥಳೀಯ ಆಸ್ಪತೆಗೆ ದಾಖಲಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸಹೋದರ ಪ್ರಮೋದ್ ಈ ಬಗ್ಗೆ ವೇಣೂರು ಠಾಣೆಯಲ್ಲಿ ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *