ಇನ್ಮುಂದೆ ಎಲ್ಲಾ ರೋಗಿಗಳನ್ನು ಐಸಿಯು ಗೆ ದಾಖಲು‌ ಮಾಡುವಂತಿಲ್ಲ| ಕೇಂದ್ರದಿಂದ ಐಸಿಯು ದಾಖಲಾತಿಗೆ ಮೇಜರ್ ಸರ್ಜರಿ

ಸಮಗ್ರ ನ್ಯೂಸ್: ರೋಗಿಗಳನ್ನು ತುರ್ತು ನಿಗಾ ಘಟಕ (ಐಸಿಯು) ಕ್ಕೆ ಸೇರ್ಪಡೆ ಮಾಡಿಕೊಳ್ಳಲು ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ನಿಯಮಾವಳಿಗಳನ್ನು ರೂಪಿಸಿದೆ. ದೇಶದ ಪ್ರತಿಷ್ಠಿತ 24 ವೈದ್ಯರ ಸಮಿತಿ ಈ ನಿಯಮಗಳನ್ನು ರೂಪಿಸಿದೆ.

Ad Widget ... .. Ad Widget .

‘ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರೆ, ಉಸಿರಾಟ ಯಂತ್ರ ಅಳವಡಿಸಬೇಕಾದ ಪರಿಸ್ಥಿತಿ ಇದ್ದರೆ, ಹೆಚ್ಚಿನ ನಿಗಾ ವಹಿಸಬೇಕಾದ ಸ್ಥಿತಿಗಳಲ್ಲಿ, ಶಸ್ತ್ರ ಚಿಕಿತ್ಸೆಯ ನಂತರ ಚಿಕಿತ್ಸೆಗಾಗಿ, ತೀವ್ರವಾದ ಶಸ್ತ್ರಚಿಕಿತ್ಸೆ ಅಗತ್ಯವಿದ್ದ ಸಮಯದಲ್ಲಿ ಐಸಿಯುಗಳಲ್ಲಿ ಮಾತ್ರ ಅಡ್ಮಿಟ್‌ ಮಾಡಿಕೊಳ್ಳಬಹುದು ಎಂದು ಈ ಸಮಿತಿ ಹೇಳಿದೆ.

Ad Widget

ಭಾರತದಲ್ಲಿ ಸುಮಾರು 1 ಲಕ್ಷ ಐಸಿಯು ಹಾಸಿಗೆಗಳ ಸೌಲಭ್ಯವಿದ್ದು, ಇವುಗಳಲ್ಲಿ ಬಹುಪಾಲು ಖಾಸಗಿ ಹಾಗೂ ಮಹಾನಗರಗಳಲ್ಲಿವೆ. ಬಡ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯವನ್ನು ಪಡೆದುಕೊಳ್ಳುವುದು ದುಸ್ತರವಾಗಿದೆ. ಹೀಗಾಗಿಯೇ ಎಲ್ಲರಿಗೂ ಈ ಸೌಲಭ್ಯ ದೊರೆಯಬೇಕು ಎಂಬ ಕಾರಣಕ್ಕೆ ನಿಯಮಗಳನ್ನು ರೂಪಿಸಲಾಗಿದೆ ಎಂದು ಸರ್ಕಾರ ಹೇಳಿದೆ.

Leave a Comment

Your email address will not be published. Required fields are marked *