ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗ

ಸಮಗ್ರ ನ್ಯೂಸ್: ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲೆಂದು ಆಗಮಿಸಿದ್ದ ಪ್ರವಾಸಿಗನೊಬ್ಬ ಆಯತಪ್ಪಿ ಅಲ್ಲಿನ ಬಾವಿಗೆ ಬಿದ್ದ ಘಟನೆ ನಡೆದಿದೆ.

Ad Widget ... ..

ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಮಠದ ಸಮೀಪದ ಶಿರಬೀಡು ಬಳಿ ಇರುವ ಬಾವಿ ಮೇಲೆ ಕುಳಿತುಕೊಂಡಿದ್ದಾಗ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾನೆ. ನೀರು ಕಡಿಮೆ ಇದ್ದಿದ್ದರಿಂದ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯರು ಹಗ್ಗದ ಸಹಾಯದಿಂದ ಸಂತೋಷ್​ನನ್ನು ಮೇಲಕ್ಕೆತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *