ಜ್ಞಾನವಾಪಿ ಮಸೀದಿ ಪಾವಿತ್ರ್ಯತೆ ಕಾಪಾಡಿ/ ಸುಪ್ರೀಂ ಕೋರ್ಟ್ ಸೂಚನೆ

ಸಮಗ್ರ ನ್ಯೂಸ್: ಜ್ಞಾನವಾಪಿ ಮಸೀದಿಯ ಸಮೀಕ್ಷೆಯಲ್ಲಿ ಪತ್ತೆಯಾದ ಶಿವಲಿಂಗ ಸ್ಥಳವನ್ನು ಮುಸ್ಲಿಮರು ವಝುಖಾನವಾಗಿ ಬಳಕೆ ಮಾಡಿ ಅಪವಿತ್ರ ಮಾಡಿದ್ದಾರೆ. ಇದು ಹಿಂದು ಭಕ್ತರ ಭಾವನೆಯನ್ನು ಘಾಸಿಗೊಳಿಸಿದೆ. ಹೀಗಾಗಿ ಈ ಸ್ಥಳದ ಶುಚಿತ್ವ ಕಾಪಾಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ.

Ad Widget ... ..

ಮಸೀದಿಯ ಸರ್ವೆಯಲ್ಲಿ ಶಿವಲಿಂಗ ಪತ್ತೆಯಾದ ಶಿವಲಿಂಗ ಸ್ಥಳವನ್ನು ಮುಸ್ಲಿಮರು ತಮ್ಮ ನಮಾಜ್‍ಗೆ ಮೊದಲು ಕೈಕಾಲು, ಮುಖ ತೊಳೆಯಲು ವಝುಖಾನವಾಗಿ ಬಳಕೆ ಮಾಡುತ್ತಿದ್ದರು. ಈ ಮೂಲಕ ಅತ್ಯಂತ ಪವಿತ್ರ ಶಿವಲಿಂಗವನ್ನು ಅಪವಿತ್ರಗೊಳಿಸಲಾಗಿದೆ. ಹೀಗಾಗಿ ಸದ್ಯ ಶಿವಲಿಂಗ ಪತ್ತೆಯಾಗಿರುವ ಸ್ಥಳದಲ್ಲಿ ಶುಚಿತ್ವ ಹಾಗೂ ಪಾವಿತ್ರ್ಯತೆ ಕಾಪಾಡಲು ಸುಪ್ರೀಂ ಕೋರ್ಟ್‍ಗೆ ಮನವಿ ಮಾಡಲಾಗಿತ್ತು.

Ad Widget

ಈ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್, ಪಾವಿತ್ರ್ಯತೆ ಕಾಪಾಡಲು ಸೂಚನೆ ನೀಡಿದೆ. ವಾರಣಾಸಿ ಜಿಲ್ಲಾಧಿಕಾರಿಗಳ ಸುಪರ್ಧಿಯಲ್ಲಿ ಶುಚಿತ್ವ ಹಾಗೂ ಪಾವಿತ್ರ್ಯತೆ ಕಾಪಾಡಲು ಎಲ್ಲಾ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

Leave a Comment

Your email address will not be published. Required fields are marked *