ಮಡಿಕೇರಿ:ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡಗು ಜಿಲ್ಲಾ ಅಂಗನವಾಡಿ ನೌಕರರು ಹಾಗೂ ಸಿ.ಐ.ಟಿ.ಯು ನೇತೃತ್ವದಲ್ಲಿ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜ. 23 ರಂದು ಪ್ರತಿಭಟನೆ ನಡೆಸಲಾಯಿತು.

. Ad Widget . Ad Widget . Ad Widget .

ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ತಮ್ಮ ಕನಿಷ್ಠ ವೇತನ ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು, ಅಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಪ್ರಸ್ತುತ ಮಾಸಿಕ 11.500 ರೂ ಗೌರವ ಧನವನ್ನಷ್ಟೇ ಪಡೆಯುತ್ತಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

2017ರ ಬಳಿಕ ಗೌರವದನ ಹೆಚ್ಚಳವಾಗಿಲ್ಲ ಬೆಲೆ ಏರಿಕೆಯ ಈ ದಿನಗಳಲ್ಲಿ ಕನಿಷ್ಠ 31ಸಾವಿರ ವೇತನವನ್ನು ನೀಡಬೇಕೆಂದು ಒತ್ತಾಯಿಸಿದರಲ್ಲದೆ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದವರಿಗೆ ಕನಿಷ್ಠ 10 ಸಾವಿರ ಪಿಂಚಣಿ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಬಿ. ಆರ್ ಭರತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ಸಿ ಸಾಬು, ಪೊನ್ನಂಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ ಎಸ್ ಸುಮಿತ್ರ, ಮಡಿಕೇರಿ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಬಿ.ಎಸ್ ಸರೋಜಾ, ಸೋಮವಾರಪೇಟೆ ಅಂಗನವಾಡಿ ನೌಕರರ ಸಂಘದ ಖಜಾಂಚಿ ಎಂ ಬಿ ಜಮುನಾ, ವಿರಾಜಪೇಟೆ ತಾಲೂಕು ಅಧ್ಯಕ್ಷೆ ಎ ವಿ ಶೀಲಾ ಹಾಗೂ ಎಲ್ಲಾ ತಾಲೂಕಿನ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.

Leave a Comment

Your email address will not be published. Required fields are marked *