ವಿಜಯಪುರ: ಶಾಸಕ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಆದೇಶಕ್ಕೆ ತಡೆಯಾಜ್ಞೆ| ಸತ್ಯದ ಗೆಲುವು ಎಂದ ಬಿಜೆಪಿ ಪೈರ್ ಬ್ರ್ಯಾಂಡ್

ಸಮಗ್ರ ನ್ಯೂಸ್: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಮಾಡಲು ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ.

Ad Widget ... ..

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಫೈರ್ ಬ್ರ್ಯಾಂಡ್​, ಕಾಂಗ್ರೆಸ್ ಸರ್ಕಾರ ನಮ್ಮ ಸಿದ್ದಸಿರಿ ಸಕ್ಕರೆ ಹಾಗು ಎಥನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗು ಮುಚ್ಚುವ ಷಡ್ಯಂತ್ರಕ್ಕೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ತಡೆ ನೀಡಿದೆ. ಇದು “ಸತ್ಯದ ಗೆಲುವು” ಎಂದು ಬರೆದುಕೊಂಡಿದ್ದಾರೆ.

Ad Widget

ಏನಿದು ಪ್ರಕರಣ?
ಕೆಲ ದಿನಗಳ ಹಿಂದಷ್ಟೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಶುಗರ್ ಫ್ಯಾಕ್ಟರಿ ಬಂದ್​​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿತ್ತು. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಸಿದ್ದಶ್ರೀ ಸಕ್ಕರೆ ಕಾರ್ಖಾನೆ ಬಂದ್​ಗೆ ಆದೇಶ ಹೊರಡಿಸಿತ್ತು. ಸಿದ್ದಶ್ರೀ ಸಕ್ಕರೆ ಕಾರ್ಖಾನೆ ವಿರುದ್ಧ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬಿಡಲಾಗುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ. ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನೆಲೆ ಫ್ಯಾಕ್ಟರಿ ಬಂದ್​ಗೆ ಆದೇಶ ನೀಡಲಾಗಿತ್ತು.

Leave a Comment

Your email address will not be published. Required fields are marked *