ವಂಟಮೂರಿ ಮಹಿಳೆ‌‌ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ| ಪ್ರೇಮಿಗಳ ಮದುವೆ ಮಾಡಿಸಿದ ಪೊಲೀಸ್

ಸಮಗ್ರ ನ್ಯೂಸ್: ಇತ್ತೀಚೆಗೆ ವಂಟಮೂರಿಯಲ್ಲಿ ನಡೆದ ಘಟನೆ ಎಲ್ಲರಿಗೂ ತಿಳಿದಿರುವಂತ್ತದೆ. ಮಗ ಯುವತಿಯೊಂದಿಗೆ ಓಡಿ ಹೋದ ಎಂಬ ಕಾರಣಕ್ಕೆ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿತ್ತು. ಸದ್ಯ ಈಗ ಈ ಘಟನೆಗೆ ಕಾರಣವಾಗಿದ್ದ ವಂಟಮೂರಿ ಗ್ರಾಮದ ಪ್ರೇಮಿಗಳ ಮದುವೆ ಮಾಡಿಸಲಾಗಿದೆ. ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಲಾಗಿದೆ.

. Ad Widget . Ad Widget

ದುಂಡಪ್ಪ ಅಶೋಕ ನಾಯಕ್ ಎಂಬ ವಂಟಮೂರಿ ಗ್ರಾಮದ ಯುವಕ, ಪ್ರಿಯಾಂಕಾ ಬಸಪ್ಪ ನಾಯಕ್ ಎಂಬ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಯ ಪೋಷಕರು ಇವರ ಪ್ರೀತಿಯನ್ನು ತಿರಸ್ಕರಿಸಿ ಯುವತಿಗೆ ಬೇರೊಬ್ಬರ ಜೊತೆ ವಿವಾಹ ಮಾಡಲು ನಿರ್ಧರಿಸಿದ್ದರು. ಈ ವಿಚಾರ ತಿಳಿದು ಯುವತಿಯ ನಿಶ್ಚಿತಾರ್ಥದ ಹಿಂದಿನ ದಿನ ಇಬ್ಬರೂ ಪರಾರಿ ಆಗಿದ್ದರು. ಮಗಳು ಯುವಕನ ಜೊತೆ ಓಡಿ ಹೋದ ವಿಚಾರ ತಿಳಿಯುತ್ತಿದ್ದಂತೆ ಯುವತಿ ಕುಟುಂಬಸ್ಥರು ಯುವಕನ ಮನೆಗೆ ನುಗ್ಗಿ ಮಲಗಿದ್ದ ದುಂಡಪ್ಪನ ತಾಯಿ ಕಮಲವ್ವಳನ್ನು ಹೊರಗೆ ಎಳೆದುಕೊಂಡು ಬಂದು ದೌರ್ಜನ್ಯವೆಸಗಿದ್ದರು.

. Ad Widget . . Ad Widget . Ad Widget

ಯುವಕನ ತಾಯಿಯನ್ನು ಯುವತಿಯ ಕಡೆಯವರು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದರು. ಬಳಿಕ ಬೆಳಗಾವಿ ಜಿಲ್ಲಾ ಪೊಲೀಸರು ಪ್ರೇಮಿಗಳನ್ನು ರಕ್ಷಣೆ ಮಾಡಿದ್ದರು. ಇದೀಗ ಉಪನೋಂದಣಿ ಕಚೇರಿಯಲ್ಲಿ ಕಾನೂನು ಪ್ರಕಾರ ಇವರಿಬ್ಬರ ವಿವಾಹ ಮಾಡಿಸಿದ್ದಾರೆ.

Leave a Comment

Your email address will not be published. Required fields are marked *