ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಪ್ರತಿಭಟನೆ ಸಂಧರ್ಭದಲ್ಲಿ ರಸ್ತೆ ತಡೆದು ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ​​ಹೈಕೋರ್ಟ್ ವಜಾ ಮಾಡಿದ್ದು, 10 ಸಾವಿರ ರೂ. ದಂಡ ವಿಧಿಸಿದೆ. ಹಾಗೆ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.

. Ad Widget . Ad Widget . Ad Widget .

ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂ.ಬಿ ಪಾಟೀಲ್​ ಸೇರಿದಂತೆ ಕಾಂಗ್ರೆಸ್​ನ ನಾಯಕರು ಮತ್ತು ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆ ತಡೆ ಉಂಟಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನಸಾಮಾನ್ಯರ ಸಂಚಾರಕ್ಕೆ ತೊಂದರೆಯುಂಟಾಗಿತ್ತು. ಹೀಗಾಗಿ ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ ಆಗಿನ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಅದರಂತೆ ಮಾರ್ಚ್ 7 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ​ ರಣದೀಪ್ ಸುರ್ಜೇವಾಲಾ, ಮಾರ್ಚ್ 11 ರಂದು ಸಚಿವ ಎಂ.ಬಿ.ಪಾಟೀಲ್, ಮಾರ್ಚ್ 15 ರಂದು ಸಚಿವ ರಾಮಲಿಂಗಾರೆಡ್ಡಿ ಅವರು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *