ಕಾಂಗ್ರೆಸ್‍ಗೆ ಮತ್ತೊಂದು ಶಾಕ್/ ಮೈತ್ರಿಕೂಟವನ್ನು ತೊರೆಯುವ ಸಾಧ್ಯತೆಯಲ್ಲಿ ಆರ್‍ಎಲ್‍ಡಿ

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟವನ್ನು ಆರ್‍ಎಲ್‍ಡಿ ಪಕ್ಷವು ತೊರೆಯುವ ಸಾಧ್ಯತೆ ಹೆಚ್ಚಿದ್ದು, ಕಾಂಗ್ರೆಸ್‍ಗೆ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಆರ್‍ಎಲ್‍ಡಿ ಮತ್ತು ಸಮಾಜವಾದಿ ಪಕ್ಷ (ಎಸ್‍ಪಿ) ನಡುವಿನ ಮೈತ್ರಿ ಪತನದ ಅಂಚಿನಲ್ಲಿದೆ ಎಂದು ಹೇಳಲಾಗಿದ್ದು, ಆರ್‍ಎಲ್‍ಡಿ ನಾಯಕ ಜಯಂತ್ ಚೌಧರಿ ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಕೆಲಸ ಮಾಡಲಿದ್ದಾರೆ. .

. Ad Widget . Ad Widget

ಜಯಂತ್ ಚೌಧರಿ ಅವರು ಬಿಜೆಪಿಯೊಂದಿಗೆ ಕೆಲಸ ಮಾಡುತ್ತಾರೆ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ನಾಲ್ಕು ಸ್ಥಾನಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸಿರುವುದು ಗೊತ್ತಾಗಿದೆ.

. Ad Widget . . Ad Widget . Ad Widget

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಫೆಬ್ರವರಿ 14 ರಂದು ಉತ್ತರ ಪ್ರದೇಶಕ್ಕೆ ಹೊರಡಲಿದ್ದು, ಅದೇ ದಿನ ಮೈತ್ರಿಯಿಂದ ಹಿಂದೆ ಸರಿಯುವ ಬಗ್ಗೆ ಆರ್‍ಎಲ್‍ಡಿ ಮುಖ್ಯಸ್ಥರು ಹೇಳಿಕೆ ನೀಡುವ ಸಾಧ್ಯತೆಯಿದೆ.

Leave a Comment

Your email address will not be published. Required fields are marked *