ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರ/ ಮುಜುರಾಯಿ ಇಲಾಖೆಗೆ ಕೊಡಬೇಕು ದ್ವಿಗುಣ ಆದಾಯ

ಸಮಗ್ರ ನ್ಯೂಸ್: ವಿಧಾನಸಭೆಯಲ್ಲಿ ಇಂದು ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರವಾಗಿದೆ. ದೇವಸ್ಥಾನಗಳು ಕೊಡುತ್ತಿದ್ದ ಆದಾಯವನ್ನು ಸರ್ಕಾರ ದ್ವಿಗುಣಗೊಳಿಸಿದ್ದು, ಮುಜರಾಯಿ ಇಲಾಖೆಗೆ ದೇವಾಲಯಗಳು ಕೊಡುತ್ತಿದ್ದ ಆದಾಯ ಕೂಡ ದ್ವಿಗುಣಗೊಳಿಸಲಾಗಿದೆ. 10 ಲಕ್ಷದಿಂದ ಒಂದು ಕೋಟಿ ರೂಪಾಯಿ ಆದಾಯ ಹೊಂದಿರುವ ದೇಗುಲಗಳು ಶೇ. 5 ರಷ್ಟು ಹಣ ಸಲ್ಲಿಸಬೇಕು. ಒಂದು ಕೋಟಿಗೂ ಅಧಿಕ ಆದಾಯ ಮೀರಿದ ದೇವಸ್ಥಾನಗಳು ಶೇಕಡ 10 ರಷ್ಟು ಹಣ ಸಲ್ಲಿಸಬೇಕು.

. Ad Widget . Ad Widget

ಅರ್ಚಕರು, ದೇಗುಲ ಸಿಬ್ಬಂದಿ ಮೃತಪಟ್ಟಾಗ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಮೊದಲು ಮೃತಪಟ್ಟ ಕುಟುಂಬಕ್ಕೆ 35,000 ರೂ. ಕೊಡಲಾಗುತ್ತಿತ್ತು. ಸಿ ಗ್ರೇಡ್ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಗೆ ವಿಮೆ ಸೌಕರ್ಯ ಒದಗಿಸಲು ಬಿಲ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅರ್ಚಕರು, ದೇಗುಲ ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 5000 ದಿಂದ 50,000 ರೂ. ವರೆಗೆ ವಿದ್ಯಾರ್ಥಿ ವೇತನ ನೀಡಲು ಅವಕಾಶ ಕಲ್ಪಿಸಲಾಗಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *