ನಾಳೆ ಜಾತಿಗಣತಿ ವರದಿ ಸಲ್ಲಿಕೆ/ ವರದಿ ಸಲ್ಲಿಕೆ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆ

ಸಮಗ್ರ ನ್ಯೂಸ್: ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನಾಳೆ ಸಲ್ಲಿಕೆ ಮಾಡುವುದಾಗಿ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದ್ದಾರೆ. ಜಾತಿಗಣತಿ ವರದಿ ಸಲ್ಲಿಕೆಗೆ ನಾಳೆ ಕೊನೆ ದಿನವಾಗಿದ್ದು, ಸರ್ಕಾರದ ಸೂಚನೆಯಂತೆ ವರದಿ ಸಿದ್ದವಾಗಿದೆ. ನಾಳೆ ವರದಿ ಸಲ್ಲಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ.

Ad Widget ... ..

ಜಾತಿಗಣತಿ ವರದಿಯಲ್ಲಿ ಏನಿದೆ ಎಂಬುದು ಬಳಿಕ ಗೊತ್ತಾಗಲಿದೆ. ವರದಿ ಬಿಡುಗಡೆಯಾದ ಬಳಿಕ ಸಾರ್ವಜನಿಕವಾಗಿ ಚರ್ಚೆಯಾದರೆ ಉತ್ತಮ. ಸರ್ಕಾರಕ್ಕೆ ವರದಿ ಸಲ್ಲಿಕೆ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆಯಾಗಲಿದೆ. ಬಳಿಕ ಈ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಹೇಳಿದರು

Ad Widget

Leave a Comment

Your email address will not be published. Required fields are marked *