ಉಡುಪಿ: ಬಿಸಿಲ ಬೇಗೆ ತೀವ್ರತೆ, ಸೊರಗಿದ ಸ್ವರ್ಣ ನದಿ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಉಡುಪಿ ಜಿಲ್ಲೆಯ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಜೀವನದಿ ಸ್ವರ್ಣೆಯೂ ಬಿಸಿಲಿನ ತಾಪಕ್ಕೆ ಬಸವಳಿದಿದ್ದು ನೀರಿನ ಹರಿವು ಕಡಿಮೆಯಾಗುತ್ತಿದೆ.

. Ad Widget . Ad Widget . Ad Widget .

ಹೀಗಾಗಿ ಜಿಲ್ಲೆಯ ಪ್ರಮುಖ ಅಣೆಕಟ್ಟಾಗಿರುವ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹಣಾ ಮಟ್ಟವೂ ತಗ್ಗುತ್ತಿದೆ. ಬಿಸಿಲ ಬೇಗೆಯು ತೀವ್ರವಾಗಿದ್ದು, ನಗರಸಭೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಾರ್ಚ್ ಆರಂಭದಲ್ಲಿಯೇ ನೀರಿನ ಬೇಡಿಕೆ ಹೆಚ್ಚಿರುವುದು ನಗರಸಭೆಯ ಗೊಂದಲಕ್ಕೆ ಕಾರಣವಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಉಡುಪಿ ನಗರಸಭೆಯಿಂದ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಕುಡಿಯುವ ನೀರನ್ನು ಮಿತವಾದ ಬಳಕೆಗೆ ಆದ್ಯತೆ ನೀಡಿ, ನೀರಿನ ಅಭಾವ ಇರುವ ಈ ಸಮಯದಲ್ಲಿ ನಗರಸಭೆಯೊಂದಿಗೆ ಜನತೆ ಸಹಕರಿಸುವಂತೆ ನಗರಸಭೆಯ ಪೌರಾಯುಕ್ತರು ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *