ಲೋಕಸಭಾ ಚುನಾವಣೆ/ ತಲಕಾವೇರಿಯಿಂದ ಪ್ರಚಾರ ಆರಂಭಿಸಿದ ಯುದುವೀರ್

ಸಮಗ್ರ ನ್ಯೂಸ್: ತಲಕಾವೇರಿಯಲ್ಲಿ ಮಾತೆ ಕಾವೇರಿಗೆ ಪೂಜೆ ಸಲ್ಲಿಸುವ ಮೂಲಕ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ತಮ್ಮ ಚುನಾವಣಾ ಪ್ರಚಾರ ಆರಂಭಿಸಿದರು. ಮೊದಲು ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದ ಅವರು, ಬಳಿಕ ಭಗಂಡೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Ad Widget ... ..

ಪೂಜೆಯ ಬಳಿಕ ಯದುವೀರ್ ಹಾಗೂ ಇತರರು ಚೇರಂಬಾಣೆ, ಸಂಪಾಜೆ, ಮೂರ್ನಾಡು ಸೇರಿದಂತೆ ವಿವಿಧೆಡೆಗಳಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದರು.

Ad Widget

ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದು, ಯದುವೀರ್ ಅವರ ಗೆಲುವಿಗಾಗಿ ಪ್ರಾರ್ಥಿಸಿದರು.

Leave a Comment

Your email address will not be published. Required fields are marked *