Ad Widget

ಕಡಬ: ನದಿಗೆ ಹಾರಿದ ಯುವತಿ| ಪ್ರಾಣ ರಕ್ಷಿಸಿದ ಆಟೋ ಚಾಲಕ!

ಸಮಗ್ರ ನ್ಯೂಸ್: ನದಿಗೆ ಹಾರಿದ ಯುವತಿಯೋರ್ವಳನ್ನು ಆಟೋ ಚಾಲಕ ರಕ್ಷಿಸಿದ ಘಟನೆ ಕಡಬ ಆಲಂಕಾರು ಸಮೀಪದ ಶಾಂತಿಮೊಗರಿನಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget

ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಯುವತಿಯು ತನ್ನ ಸ್ಕೂಟಿ ನಿಲ್ಲಿಸಿ ಹಾರಿದ್ದಾಳೆ. ಈ ವೇಳೆ ಆಟೋ ಚಾಲಕನ ಸಮಯ ಪ್ರಜ್ಞೆಯಿಂದ ಆಕೆ ಬದುಕುಳಿದಿರುವುದಾಗಿ ವರದಿಯಾಗಿದೆ. ಇನ್ನು ಯುವತಿ ಕಡಬ ಸಮುದಾಯ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ.

Ad Widget . Ad Widget .

ಯುವತಿಯನ್ನು ಪೊಲೀಸರು ಕಡಬ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಯುವತಿ ನದಿಗೆ ಹಾರಿರಬಹುದೆಂಬುದು ಪೊಲೀಸರ ತನಿಖೆ ಮೂಲಕ ತಿಳಿದು ಬರಬೇಕಿದೆ.

Leave a Comment

Your email address will not be published. Required fields are marked *