ಮದ್ಯ ನೀತಿ ಹಗರಣ| ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು

ಸಮಗ್ರ ನ್ಯೂಸ್: ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ ಅವರನ್ನು ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಏಪ್ರಿಲ್ 9 ರ ವರೆಗೆ ಜೈಲಿಗೆ ಕಳುಹಿಸಿದೆ.

Ad Widget ... ..

ಮದ್ಯ ನೀತಿ ಹಗರಣದಲ್ಲಿ ಕವಿತಾ ಅವರು ಮಾ.15 ರಂದು ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಕಳೆದ ವಾರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ವೇಳೆ ಅವರ ಮೊಬೈಲ್‌ನಲ್ಲಿದ್ದ ಡೇಟಾವನ್ನು ಪರಿಶೀಲಿಸಲಾಗಿತ್ತು. ಕವಿತಾ ಅವರಿಗೆ ದೆಹಲಿ ನ್ಯಾಯಾಲಯವು ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

ಅವರನ್ನು ಲಾಕಪ್‌ನಲ್ಲಿ ಇರಿಸುವ ಬದಲು ಇ.ಡಿ ತಿಹಾರ್‌ ಜೈಲಿಗೆ ವರ್ಗಾಯಿಸುವ ಸಾಧ್ಯತೆ ಇದ್ದು,. ಬಿಆರ್‌ಎಸ್‌ ನಾಯಕಿ ನಿಜವಾಗಿ 100 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದು, ಇದನ್ನು ಎಎಪಿ ನಾಯಕರಿಗೆ ಪಾವತಿಸಲಾಗಿದೆ ಎಂಬ ಆರೋಪ ಕವಿತಾ ಮೇಲಿದೆ.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರು ದೆಹಲಿ ಸರ್ಕಾರದ ಅಡಿಯಲ್ಲಿ ಮದ್ಯದ ಪರವಾನಗಿಗಾಗಿ ಎಎಪಿಗೆ 100 ಕೋಟಿ ಲಂಚವನ್ನು ಪಾವತಿಸಿದ ‘ಸೌತ್ ಗ್ರೂಪ್’ ನ ಪ್ರಮುಖ ಸದಸ್ಯೆ ಎಂದು ಇಡಿ ಆರೋಪಿಸಿದೆ. ಎಎಪಿ ಗೋವಾ ಮತ್ತು ಪಂಜಾಬ್ ಚುನಾವಣಾ ಪ್ರಚಾರಕ್ಕಾಗಿ ಈ ಹಣವನ್ನು ಬಳಸಿದೆ ಎಂದು ಇಡಿ ಆರೋಪ ಮಾಡಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *