Ad Widget

ಕ್ರೀಡಾಂಗಣದಲ್ಲಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್

ಸಮಗ್ರ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ನಡುವಣ ಐಪಿಎಲ್ ಪಂದ್ಯದ ವೇಳೆ ಆರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಕ್ರೀಸ್​ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್​ ಬಳಿ ಬಂದು ಕೊಹ್ಲಿಯ ಕಾಲು ಹಿಡಿದ ಘಟನೆ ನಡೆದಿದ್ದು, ತಕ್ಷಣ ಆತನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ರಾಯಚೂರಿನಿಂದ ಬಂದಿದ್ದ ಅಪ್ರಾಪ್ತ ಎಂಬ ಮಾಹಿತಿ ತಿಳಿದು ಬಂದಿದೆ. ಈತ 3000 ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್ ಖರೀದಿ ಮಾಡಿದ್ದನು. ಈತ ವಿರಾಟ್ ಕೊಹ್ಲಿಯ ಹುಚ್ಚು ಅಭಿಮಾನಿಯಾಗಿದ್ದು, ರಾಯಚೂರಿನ ಅಪ್ರಾಪ್ತನ ಮೇಲೆ ಕಬ್ಬನ್ ಪಾರ್ಕ್​ ಠಾಣೆ ಪೊಲೀಸರು ಕರ್ತವ್ಯಕ್ಕೆ ಅಡ್ಡಿ, ಮೈದಾನಕ್ಕೆ ಅತಿಕ್ರಮಣ ಪ್ರವೇಶದಡಿ ಕೇಸ್ ದಾಖಲಿಸಿಕೊಂಡು ಆತನ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *