ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರಾ ಅವರಿಗೆ ಫೋನ್ ಕರೆ ಮಾಡಿ ಪ್ರಚಾರದ ಸಿದ್ಧತೆಗಳು ಮತ್ತು ಹೆಚ್ಚಿನವುಗಳ ಬಗ್ಗೆ ಮಾತನಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad Widget ... ..

ಪ್ರಧಾನಿಯವರು ರೇಖಾ ಪಾತ್ರಾ ರನ್ನು ‘ಶಕ್ತಿ ಸ್ವರೂಪ’ ಎಂದು ಬಣ್ಣಿಸಿದ್ದಾರೆ. ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ 19 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಸಂದೇಶಖಾಲಿ ಪ್ರದೇಶಕ್ಕೆ ಒಳಪಡುವ ಬಸಿರ್ಹತ್ ಕ್ಷೇತ್ರದಿಂದ ರೇಖಾ ಪಾತ್ರಾ ಅವರನ್ನು ಕಣಕ್ಕಿಳಿಸಿದೆ.ಪಾತ್ರಾ ಗೃಹಿಣಿಯಾಗಿದ್ದು, ಈಗ ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್ ಮತ್ತು ಅವರ ಸಹಚರರಿಂದ ಚಿತ್ರಹಿಂಸೆ ಮತ್ತು ಕಿರುಕುಳಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *