ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಅನುದಾನ ಹೆಚ್ಚಳ/ ಕೇಂದ್ರದ ಆದೇಶ

ಸಮಗ್ರ ನ್ಯೂಸ್: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಗಳಿಗೆ ನೀಡುವ ದೈನಂದಿನ ಕೂಲಿ ಅನುದಾನವನ್ನು 4 ರಿಂದ 10 ಪ್ರತಿಶತದಷ್ಟು ಹೆಚ್ಚಿಸಿದೆ.

Ad Widget ... ..

ಕರ್ನಾಟಕಕ್ಕೆ ಶೇ.10ರಷ್ಟು ನೆರವನ್ನು ಹೆಚ್ಚಿಸಲಾಗಿದ್ದು, ಈ ಹಿಂದೆ ಇದ್ದ 316 ರೂ. ಈಗ 349 ರೂಪಾಯಿಗೆ ಏರಿಕೆಯಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ವಿವಿಧ ತೆರಿಗೆ ದರಗಳನ್ನು ನಿಗದಿಪಡಿಸಿದೆ.

Ad Widget

ಹರಿಯಾಣದಲ್ಲಿ ಗರಿಷ್ಠ 374 ನಿಗದಿಯಾಗಿದೆ. ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‍ಗಳು ಅತಿ ಕಡಿಮೆ ಅಂದರೆ 234 ನಿಗದಿಯಾಗಿದೆ. ಈ ದರವು ಮಾರ್ಚ್ 27 ರಂದು ಮಾಡಿದ ನಂತರದ ದರವಾಗಿದೆ. ಪರಿಷ್ಕøತ ದರಗಳ ಕುರಿತು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ಆದೇಶ ಹೊರಡಿಸಿದೆ. ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಅತಿ ಕಡಿಮೆ 7 ರು. ಏರಿಕೆ ಮಾಡಲಾಗಿದೆ. ಈ ರಾಜ್ಯಗಳಲ್ಲಿ ಕೂಲಿ ದರವನ್ನು 237 ರೂ.ಗೆ ಹೆಚ್ಚಿಸಲಾಗಿದೆ.

Leave a Comment

Your email address will not be published. Required fields are marked *