March 2024

ಲಡಾಖ್‌ನಲ್ಲಿ ಸೋನಮ್ ವಾಂಗ್‌ಚುಕ್ ಆಮರಣಾಂತ ಉಪವಾಸ|ಲಡಾಖ್‌ಗೆ ಸ್ವಾಯತ್ತತೆ ತರುವ ಪ್ರಯತ್ನ

ಸಮಗ್ರ ನ್ಯೂಸ್: ಸೋನಮ್ ವಾಂಗ್ಚುಕ್ , ನವೋದ್ಯಮಿ, ಇಂಜಿನಿಯರ್ ಮತ್ತು ಶಿಕ್ಷಣ ಸುಧಾರಣಾವಾದಿಯಾದ ಇವರು ಮಾರ್ಚ್ 6ರಿಂದ ಆಮರಣಾಂತ ಉಪವಾಸ ಆರಂಭಿಸಿ ಇಂದಿಗೆ 20 ದಿನಗಳು ದಾಟಿದೆ. ಮಾರ್ಚ್ 6 ರಂದು, ಶೂನ್ಯ ತಾಪಮಾನದಲ್ಲಿ ಸಮುದ್ರ ಮಟ್ಟದಿಂದ 3,500 ಮೀಟರ್ ಎತ್ತರದಲ್ಲಿ ಅವರು ಪ್ರತಿಭಟನೆ ಆರಂಭಿಸಿದ್ದು, ಈ ಪ್ರತಿಭಟನೆಯ ಉದ್ದೇಶ ಲಡಾಖ್ಗೆ ಸ್ವಾಯತ್ತತೆಯನ್ನು ತರಲು ಪ್ರಯತ್ನಿಸುತ್ತದೆ. ಅದೇ ವೇಳೆ ಕೈಗಾರಿಕೀಕರಣದಿಂದ ಹಿಮಾಲಯ ಪ್ರದೇಶದ ದುರ್ಬಲ ಪರಿಸರ ಮತ್ತು ಹಿಮನದಿಗಳಿಗೆ ಹಾನಿಯನ್ನು ತೋರಿಸುತ್ತದೆ. ವಾಂಗ್ಚುಕ್ ಅವರು ಇನ್ನೂ ಮೂರು […]

ಲಡಾಖ್‌ನಲ್ಲಿ ಸೋನಮ್ ವಾಂಗ್‌ಚುಕ್ ಆಮರಣಾಂತ ಉಪವಾಸ|ಲಡಾಖ್‌ಗೆ ಸ್ವಾಯತ್ತತೆ ತರುವ ಪ್ರಯತ್ನ Read More »

ಫ್ಲೋರಿಡಾದಲ್ಲಿ ಹೊಸ ವರ್ಷದಿಂದ 14 ವಯಸ್ಸಿನವರೆಗೆ ಸಾಮಾಜಿಕ ಜಾಲತಾಣದ ಖಾತೆ ತೆರೆಯುವಂತಿಲ್ಲ

ಸಮಗ್ರ ನ್ಯೂಸ್: 14ಕ್ಕಿಂತ ಕಡಿಮೆ ವಯಸ್ಸಿನವರು ಮುಂದಿನ ವರ್ಷದಿಂದ ಸಾಮಾಜಿಕ ಜಾಲತಾಣ ಸೇರುವಂತಿಲ್ಲ ಎಂದು ಅಮೆರಿಕದ ಫ್ಲೋರಿಡಾದಲ್ಲಿ ಕಾನೂನಿಗೆ ಗವರ್ನರ್ ರಾನ್ ಡೆಸ್ಯಾಂಟಿಸ್ ಸಹಿ ಮಾಡಿದ್ದಾರೆ. 14 ವರ್ಷಕ್ಕಿಂತ ಕೆಳ ವಯಸ್ಸಿನವರ ಎಲ್ಲಾ ಖಾತೆಗಳನ್ನು ತೆಗೆದು ಹಾಕುವಂತೆ ಈಗಾಗಲೇ ಎಲ್ಲ ಸಾಮಾಜಿಕ ಜಾಲತಾಣ ಕಂಪನಿಗಳಿಗೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಹೊಸ ಕಾನೂನಿನ ಅನ್ವಯ 14 ರಿಂದ 15 ವರ್ಷದೊಳಗಿನ ಮಕ್ಕಳು ಇನ್‍ಸ್ಟಾಗ್ರಾಂ ಮತ್ತು ಸ್ನ್ಯಾಪ್‍ಚಾಟ್‍ನಂಥ ಸಾಮಾಜಿಕ ಜಾಲತಾಣ ಖಾತೆಗಳನ್ನು ಹೊಂದಲು ಪೋಷಕರ ಒಪ್ಪಿಗೆ

ಫ್ಲೋರಿಡಾದಲ್ಲಿ ಹೊಸ ವರ್ಷದಿಂದ 14 ವಯಸ್ಸಿನವರೆಗೆ ಸಾಮಾಜಿಕ ಜಾಲತಾಣದ ಖಾತೆ ತೆರೆಯುವಂತಿಲ್ಲ Read More »

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಸಂದೇಶಖಾಲಿ ಸಂತ್ರಸ್ತರಲ್ಲಿ ಒಬ್ಬರಾದ ರೇಖಾ ಪಾತ್ರಾ ಅವರಿಗೆ ಫೋನ್ ಕರೆ ಮಾಡಿ ಪ್ರಚಾರದ ಸಿದ್ಧತೆಗಳು ಮತ್ತು ಹೆಚ್ಚಿನವುಗಳ ಬಗ್ಗೆ ಮಾತನಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಪ್ರಧಾನಿಯವರು ರೇಖಾ ಪಾತ್ರಾ ರನ್ನು ‘ಶಕ್ತಿ ಸ್ವರೂಪ’ ಎಂದು ಬಣ್ಣಿಸಿದ್ದಾರೆ. ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದ 19 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಸಂದೇಶಖಾಲಿ

ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾರನ್ನು ‘ಶಕ್ತಿ ಸ್ವರೂಪ’ ಎಂದ ಮೋದಿ Read More »

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್ : ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಯಾವ ಮಾಂತ್ರಿಕ ಪೆಟ್ಟಿಗೆ ಮೋದಿ ಬಳಿ ಇದೆ. ಇದಕ್ಕೆ ಉತ್ತರ ಕೊಡುತ್ತೀರಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, ಮೋದಿಯವರೆ, ಅಜಿತ್ ಪವಾರ್, ಮುಕುಲ್ ರಾಯ್, ನವೀನ್ ಜಿಂದಾಲ್, ತಪಸ್ ರಾಯ್, ಪೆಮಾ ಖಂಡ್ ಇವರ ಮೇಲೆಲ್ಲಾ ಭ್ರಷ್ಟಾಚಾರದ ಆರೋಪವಿದೆ. ಇವರೆಲ್ಲಾ ಈಗ ನಿಮ್ಮ ಸಂಬಂಧ ಬೆಳೆಸಿದ್ದಾರೆ. ಇಲ್ಲಿ ಕೆಲವರಿಗೆ ಉನ್ನತ ಹುದ್ದೆ ಸಿಕ್ಕಿದೆ. ನಿಮ್ಮ ಪಕ್ಷದ

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್ Read More »

ಕಾವೇರಿ ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವು

ಸಮಗ್ರ ನ್ಯೂಸ್: ಕುಟುಂಬಸ್ಥರ ಜೊತೆ ಪ್ರವಾಸ ಹೋಗಿ,ಈಜಲು ಹೋದ ನಾಲ್ವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿ‌ನ ಮುತ್ತತ್ತಿಯಲ್ಲಿ ನಡೆದಿದೆ. ಕುಟುಂಬಸ್ಥರು, ಸ್ನೇಹಿತರು ಸೇರಿ ಒಂದೇ ಬಸ್‌ನಲ್ಲಿ 40 ಜನ ಮೈಸೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ನಾಲ್ವರು ಕಾವೇರಿ ನದಿಯಲ್ಲಿ ಈಜಾಡಲು ಹೋಗಿದ್ದು, ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ರಕ್ಷಣೆ ಮಾಡಲು ಉಳಿದ ಮೂವರು ಹೋಗಿ ದುರಂತ ಅಂತ್ಯ ಕಂಡಿದ್ದಾರೆ.

ಕಾವೇರಿ ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವು Read More »

ಬ್ಯಾಂಕ್ ಕೆಲಸ ಬಿಟ್ಟು ಲ್ಯಾಪ್‌ಟಾಪ್‌ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಲೇಡಿ ಅರೆಸ್ಟ್

ಸಮಗ್ರ ನ್ಯೂಸ್: ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಕದಿಯುತ್ತಿದ್ದ ಜೆಸ್ಸಿ ಅಗರ್ ವಾಲ್ ಎಂಬಾಕೆಯನ್ನು ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಕೆ ಹೋಟೆಲ್, ಪಿಜಿಗಳಲ್ಲಿ ರೂಂ ಪಡೆದು ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಳು. ಹೋಟೆಲ್‌ ಹಾಗೂ ಪಿಜಿಯಲ್ಲಿರವವರು ಟಿಫಿನ್, ಊಟಕ್ಕೆ ತೆರಳಿದ ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಲ್ಯಾಪ್‌ಟಾಪ್ ಕದ್ದು ಎಸ್ಕೇಪ್ ಆಗುತ್ತಿದ್ದಳು. ಇನ್ನೂ ಈಕೆ ಐಸಿಐಸಿಐ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಕೆಲಸ ಬಿಟ್ಟು ಕೋರಮಂಗಲ, ಇಂದಿರಾನಗರ, ಎಚ್‌ಎಎಲ್ ಸುತ್ತಮುತ್ತ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡಿದ್ದಳು.

ಬ್ಯಾಂಕ್ ಕೆಲಸ ಬಿಟ್ಟು ಲ್ಯಾಪ್‌ಟಾಪ್‌ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಲೇಡಿ ಅರೆಸ್ಟ್ Read More »

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ

ಸಮಗ್ರ ನ್ಯೂಸ್:‌ ಲೋಕಸಭಾ ಚುನಾವಣೆ ಸಮಯದಲ್ಲಿ ಬಳ್ಳಾರಿಯಲ್ಲಿ ಚಿನ್ನ, ಬೆಳ್ಳಿಯ ಉಡುಗೊರೆ ಕೊಟ್ಟು ಜನರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಬಳ್ಳಾರಿ ಪಾಲಿಕೆ ಮೇಯರ್‌, ಉಪಮೇಯರ್ ಚುನಾವಣೆ ಕಸರತ್ತು ನಡೆಸುತ್ತಿದ್ದು, ಮೇಯರ್ ಆಕಾಂಕ್ಷಿಗಳು ಭರ್ಜರಿ ಉಡುಗೊರೆ ನೀಡಿದ್ದಾರೆ. ಮಾರ್ಚ್ 28ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ. ಬಹುಮತ ಇದ್ದರೂ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಇದೀಗ ಗಿಫ್ಟ್ ಕೊಟ್ಟು ಜನರನ್ನು ಸೆಳೆಯುತ್ತಿದ್ದಾರೆ. ಮುಲ್ಲಂಗಿ ನಂದೀಶ್, ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ

ಚಿನ್ನ, ಬೆಳ್ಳಿ ಉಡುಗೊರೆ ಕೊಟ್ಟು ಜನರನ್ನು ಸೆಳೆಯುತ್ತಿರುವ ರಾಜಕೀಯ Read More »

ಕೇಜ್ರಿವಾಲ್‌ ಪ್ರಕರಣದಲ್ಲಿ ನ್ಯಾಯಯುತ, ಕಾನೂನಾತ್ಮಕ ಪ್ರಕ್ರಿಯೆ ನಡೆಯಲಿ;ಅಮೆರಿಕ

ಸಮಗ್ರ ನ್ಯೂಸ್: ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ರವರು ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾರೆ. ಅವರ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕಾದ ಸ್ಟೇಟ್‌ ಇಲಾಖೆ ವಕ್ತಾರ, ಕೇಜ್ರಿವಾಲ್ ಪ್ರಕರಣ ಕುರಿತಂತೆ ಅವರಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸರಿಯಾದ ಸಮಯದಲ್ಲಿ ಕಾನೂನಾತ್ಮಕ ಪ್ರಕ್ರಿಯೆ ನಡೆಯುವುದೆಂದು ಆಶಿಸುತ್ತೇವೆ ಎಂದು ಹೇಳಿದೆ.‌ ಜರ್ಮನ್‌ ವಿದೇಶ ಸಚಿವರ ಹೇಳಿಕೆಗೆ ಭಾರತ ಸರ್ಕಾರ ವ್ಯಕ್ತಪಡಿಸಿರುವ ಆಕ್ಷೇಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಕ್ತಾರರು ಭಾರತ ಸರ್ಕಾರದ ಜೊತೆ ನಡೆಸಿದ ಚರ್ಚೆಗಳ ಕುರಿತು

ಕೇಜ್ರಿವಾಲ್‌ ಪ್ರಕರಣದಲ್ಲಿ ನ್ಯಾಯಯುತ, ಕಾನೂನಾತ್ಮಕ ಪ್ರಕ್ರಿಯೆ ನಡೆಯಲಿ;ಅಮೆರಿಕ Read More »

ಮಹಿಳೆ ಮೇಲೆ ಬಿಎಂಟಿಸಿ ಕಂಡಕ್ಟರ್ ಹಲ್ಲೆ|ಕಂಡಕ್ಟರ್ ಸಸ್ಪೆಂಡ್ ಮಾಡಲು BMTC ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಟಿಕೆಟ್ ವಿಚಾರವಾಗಿ ಮಹಿಳಾ ಪ್ರಯಾಣಿಕರಿಗೊಬ್ಬರಿಗೆ ಕಂಡಕ್ಟರ್ ಹಲ್ಲೆ ಮಾಡಿದ ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಹಲ್ಲೆ ದೃಶ್ಯವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ಪೋನ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಚಾರವಾಗಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ನಿರ್ವಾಹಕ ಬಸವರಾಜ್ ನನ್ನು ಸಸ್ಪೆಂಡ್ ಮಾಡುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ.

ಮಹಿಳೆ ಮೇಲೆ ಬಿಎಂಟಿಸಿ ಕಂಡಕ್ಟರ್ ಹಲ್ಲೆ|ಕಂಡಕ್ಟರ್ ಸಸ್ಪೆಂಡ್ ಮಾಡಲು BMTC ಆದೇಶ Read More »

ಕಡಬ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61ವ.)ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ. ತಮ್ಮ ಮನೆಯಿಂದ ಅನತಿ ದೂರದ ಗುಡ್ಡೆಯೊಂದರಲ್ಲಿ ಶಿವಣ್ಣ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ ಗೌಡ ಅವರು ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ

ಕಡಬ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ Read More »