ದ.ಕ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ, ಕೋವಿ ಡೆಪಾಸಿಟ್ ವಿಚಾರ| ಕುಕ್ಕೆಗೆ ಭೇಟಿ ನೀಡಿದ ಡಿಸಿಎಂ ಹೇಳಿದ್ದೇನು?
ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಕ್ಸಲ್ ಚಟುವಟಿಕೆ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಕ್ಸಲ್ ಚಟುವಟಿಕೆ ಬಗ್ಗೆ ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳ ಬಳಿ ಚರ್ಚೆ ನಡೆಸುತ್ತೇನೆ ಎಂದರು. ಇನ್ನು ಚುನಾವಣಾ ಸಂದರ್ಭದಲ್ಲಿ ಕೃಷಿಕರ ಕೋವಿ ಠೇವಣಿ ಇಡುವ ವಿಚಾರ ವ್ಯಕ್ತವಾಗುತ್ತಿರುವ ವಿರೋಧಕ್ಕೆ ಪ್ರತಿಕ್ರಿಯಿಸಿದ ಅವರು ಇದು ಹಿಂದಿನಿಂದಲೇ ಬಂದ ಸಂಪ್ರದಾಯ, ಚುನಾವಣಾ ಇಲಾಖೆಯ ಆದೇಶದ ಮೇರೆಗೆ ಈ ಕ್ರಮ ಜರುಗಿಸಲಾಗುತ್ತಿದೆ. ಕಾಡುಪ್ರಾಣಿಗಳ ಸಮಸ್ಯೆಯಿರುವ ಕೃಷಿಕರಿಗೆ […]










