March 2024

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಓರ್ವ ಸಾವನ್ನಪ್ಪಿದ ಬೆನ್ನೆಲೆ ಇದೀಗ ಮತ್ತೋರ್ವ ಸಾವನ್ನಪ್ಪಿದ್ದು, 3 ದಿನದ ಅಂತರದಲ್ಲೇ ಇಬ್ಬರು ದುರ್ಮರಣ ಹೊಂದಿದ್ದಾರೆ. ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮ ವರ್ತೆಗುಂಡಿ ಬಳಿ ಟಿಂಬರ್ ಕಾರ್ಮಿಕ ಅಕ್ಬರ್(35) ಮೃತ ವ್ಯಕ್ತಿ. ತೋಟದಲ್ಲಿ ಆನೆ ಓಡಿಸುವಾಗ ಏಕಾಏಕಿ ನುಗ್ಗಿ ಬಂದಿದೆ. ನೆಲಕ್ಕೆ ಬಿದ್ದ ಅಕ್ಬರ್ ಮೇಲೆ ಕಾಲಿಟ್ಟು ಕಾಡಾನೆ ಕೊಂದಿದೆ. ಎಂಟು ತಿಂಗಳಲ್ಲಿ ಜಿಲ್ಲೆಯಲ್ಲಿ ನಾಲ್ವರನ್ನ ಬಲಿ ಪಡೆದಿರುವ ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕೆ […]

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ Read More »

ಬಿಸಿಲಿನ ತಾಪಕ್ಕೆ ದೇಹ ತಂಪಾಗಿಸಲು ರಾಗಿ ಅಂಬಲಿ ಸೇವನೆ ಉತ್ತಮ

ಸಮಗ್ರ ನ್ಯೂಸ್‌ : ಬೇಸಿಗೆ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಮ್ಮ ದೇಹವನ್ನು ತಂಪಾಗಿಸಲು ರಾಗಿ ಅಂಬಲಿಯನ್ನು ಕುಡಿಯುವುದು ಉತ್ತಮ. ಬೇಸಿಗೆ ತಾಪಕ್ಕೆ ದೇಹಕ್ಕೆ ಆಲಸ್ಯ ಮತ್ತು ದಣಿವು ಕಡಿಮೆ ಮಾಡಲು ಇದನ್ನು ಸೇವಿಸಿ. ರಾಗಿಯಲ್ಲಿ ಅನೇಕ ಪೋಷಕಾಂಶಗಳಿದ್ದು, ಆರೋಗ್ಯಕರವಾದ ಜೀವಸತ್ವಗಳು, ಕಬ್ಬಿಣ, ಕ್ಯಾಲ್ಸಿಯಂ, ಆಂಟಿಆಕ್ಸಿಡೆಂಟ್‌ಗಳು, ಬಿ ಕಾಂಪ್ಲೆಕ್ಸ್, ಸತು, ಫೈಬರ್, ಪ್ರೋಟೀನ್‌ಗಳನ್ನು ಒಳಗೊಂಡಿದೆ. ರಾಗಿ ಅಂಬಲಿ ಬೆಳಗಿನಜಾವ ಉಪಾಹಾರಕ್ಕೆ ಮಾತ್ರವಲ್ಲ ರಾತ್ರಿಯ ಊಟಕ್ಕೂ ಒಳ್ಳೆಯದು. ಹಾಗಾಗಿ ಗೋಧಿ ಹಿಟ್ಟು ಇಷ್ಟಪಡದವರು ರಾಗಿ ಹಿಟ್ಟನ್ನೂ ಬಳಸಬಹುದು. ಬೇಸಿಗೆಯಲ್ಲಿ

ಬಿಸಿಲಿನ ತಾಪಕ್ಕೆ ದೇಹ ತಂಪಾಗಿಸಲು ರಾಗಿ ಅಂಬಲಿ ಸೇವನೆ ಉತ್ತಮ Read More »

ಜೈಲುಪಾಲಾದ ರೀಲ್ಸ್ ರಾಣಿ ಸೋನುಗೌಡ| 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ

ಸಮಗ್ರ ನ್ಯೂಸ್: ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ಸೋನುಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ಸೋನು ಗೌಡ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಬೆಂಗಳೂರಿನ ಸಿಜೆಎಂ ನ್ಯಾಯಾಲಯ ಸೋನು ಗೌಡಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು

ಜೈಲುಪಾಲಾದ ರೀಲ್ಸ್ ರಾಣಿ ಸೋನುಗೌಡ| 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ Read More »

ಕೇಜ್ರಿವಾಲ್ ಬಂಧನ/ ಹೋಳಿ ಬಹಿಷ್ಕರಿಸಿದ ಆಮ್ ಆದ್ಮಿ

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅಬಕಾರಿ ನೀತಿ ಹಗರಣದಲ್ಲಿ ಅರೆಸ್ಟ್ ಆಗಿದ್ದಾರೆ. ಇತ್ತ ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆಯಿಂದ ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತಿದೆ ಎಂದು ಆರೋಪಿಸಿ ಆಪ್ ಈಗಾಗಲೇ ದೇಶಾದ್ಯಂತ ಪ್ರತಿಭಟನೆ ಮಾಡಿದ್ದು, ಇಂದು ಹೋಳಿ ಹಬ್ಬವನ್ನು ಬಹಿಷ್ಕರಿಸಿದೆ. ಕೇಜಿವಾಲ್ ಬಂಧನದಲ್ಲಿರುವ ಕಾರಣ ಆಪ್ ನಾಯಕರು ಯಾರು ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೋಳಿ ಹಬ್ಬ ಆಚರಣೆ ಗೆಲುವಿನ ಸಂಕೇತವಾಗಿದೆ. ಸಂಭ್ರಮದ ಸಂಕೇತವಾಗಿದೆ. ಆದರೆ ಆಪ್ ದುಷ್ಟರ ವಿರುದ್ಧ, ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡುತ್ತಿದೆ. ಹೀಗಾಗಿ ಹೋಳಿ

ಕೇಜ್ರಿವಾಲ್ ಬಂಧನ/ ಹೋಳಿ ಬಹಿಷ್ಕರಿಸಿದ ಆಮ್ ಆದ್ಮಿ Read More »

ಕೇರಳ: ರಥದ ಚಕ್ರಕ್ಕೆ ಸಿಲುಕಿ ಐದು ವರ್ಷದ ಮಗು ಸಾವು

ಸಮಗ್ರ ನ್ಯೂಸ್: ವಾರ್ಷಿಕ ಉತ್ಸವದ ವೇಳೆ ಕೊಲ್ಲಂ ಸಮೀಪದ ಕೊಟ್ಟನ್‌ಕುಳಂಗರ ದೇವಸ್ಥಾನದಲ್ಲಿ ಐದು ವರ್ಷದ ಮಗುವೊಂದು ರಥದ ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಭಕ್ತರು ಎಳೆಯುವ ರಥದ ದೊಡ್ಡ ಚಕ್ರಗಳ ಅಡಿಯಲ್ಲಿ ಆಕಸ್ಮಿಕವಾಗಿ ಮಗು ಬಿದ್ದು ಸಾವನ್ನಪ್ಪಿದೆ. ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಸಾವನ್ನಪ್ಪಿದ ಮಗು. ಮಗುವನ್ನು ಪೋಷಕರು ಪೊಲೀಸರ ಸಹಾಯದೊಂದಿಗೆ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದದರೂ, ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳ: ರಥದ ಚಕ್ರಕ್ಕೆ ಸಿಲುಕಿ ಐದು ವರ್ಷದ ಮಗು ಸಾವು Read More »

ರಾಮಲಲ್ಲಾನ ಮತ್ತೊಂದು ವಿಗ್ರಹ ಕೆತ್ತಿದ ಅರುಣ್‌ ಯೋಗಿರಾಜ್‌

ಸಮಗ್ರ ನ್ಯೂಸ್‌ : ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನವಾಗಿರುವ ಸುಂದರ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿ ವಿಶ್ವವಿಖ್ಯಾತಿ ಗಳಿಸಿದ್ದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ರವರು ಗರ್ಭಗುಡಿಯಲ್ಲಿರುವ ರಾಮಲಲ್ಲಾ ವಿಗ್ರಹದಂತೆಯೇ ಮತ್ತೊಂದು ಪುಟ್ಟ ವಿಗ್ರಹಕ್ಕೆ ಶಿಲ್ಪಿ ರೂಪ ನೀಡಿದ್ದಾರೆ. ರಾಮಲಲ್ಲಾನ ರೂಪವನ್ನು ಕೆತ್ತನೆ ಮಾಡಿ ಭಕ್ತರ ಮನಗೆದ್ದಿದ್ದು, ರಾಮಲಲ್ಲಾನ ಮತ್ತೊಂದು ಪುಟ್ಟ ವಿಗ್ರಹ ಹಿಡಿದುಕೊಂಡಿರುವ ಫೋಟೊ ಈಗ ಎಲ್ಲೆಡೆ ವೈರಲ್‌ ಆಗಿದೆ. ಇದಕ್ಕೂ ಮೊದಲು ಶಿಲ್ಪಿ ಯೋಗಿರಾಜ್‌, ‘ಪ್ರತಿಮೆಯ ಕಣ್ಣುಗಳನ್ನು ಕೆತ್ತಲು ಬಳಸಿದ ವಿಶೇಷ ಸಾಧನಗಳ ಚಿತ್ರವನ್ನು

ರಾಮಲಲ್ಲಾನ ಮತ್ತೊಂದು ವಿಗ್ರಹ ಕೆತ್ತಿದ ಅರುಣ್‌ ಯೋಗಿರಾಜ್‌ Read More »

ಅಸೈಗೋಳಿಯಲ್ಲಿ ರಸ್ತೆ ಅಪಘಾತ|ಡಿವೈಡರ್ ನೆಗೆದು ಬಿದ್ದ ಬೈಕ್, ಸಹ ಸವಾರೆ ದಾರುಣ ಸಾವು

ಸಮಗ್ರ ನ್ಯೂಸ್: ಅಸೈಗೋಳಿಯ ತಿಬ್ಲೆ ಪದವಿನ ರಾಜ್ಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದ ಬೈಕಿನಿಂದ ಎಸೆಯಲ್ಪಟ್ಟ ಸಹ ಸವಾರೆ ಗೃಹಿಣಿಯೋರ್ವರು ದಾರುಣ ಮೃತಪಟ್ಟ ಘಟನೆ ಆದಿತ್ಯವಾರ ಸಂಜೆ ನಡೆದಿದೆ. ಬೋಂದೆಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ನಿಧಿ(29) ಮೃತಪಟ್ಟ ಮಹಿಳೆ. ಬೈಕ್ ಸವಾರ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಧಿ ಆದಿತ್ಯವಾರ ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶವೊಂದರಲ್ಲಿ ಭಾಗವಹಿಸಿ ಯತೀಶ್ ಜೊತೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಸಂಜೆ

ಅಸೈಗೋಳಿಯಲ್ಲಿ ರಸ್ತೆ ಅಪಘಾತ|ಡಿವೈಡರ್ ನೆಗೆದು ಬಿದ್ದ ಬೈಕ್, ಸಹ ಸವಾರೆ ದಾರುಣ ಸಾವು Read More »

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಕಾರು ಕಳ್ಳತನ!

ಸಮಗ್ರ ನ್ಯೂಸ್‌ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಟೊಯೊಟಾ ಫಾರ್ಚೂನರ್ಕಾರನ್ನು ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳ್ಳತನವಾಗಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಾಲಕ ಜೋಗಿಂದರ್ ಅವರು ಟೊಯೊಟಾ ಫಾರ್ಚುನರ್ ಕಾರನ್ನು ಸರ್ವಿಸ್ ಮಾಡಿದ ನಂತರ ಗೋವಿಂದಪುರಿಗೆ ತಂದು ತಮ್ಮ ಮನೆಯಲ್ಲಿ ನಿಲ್ಲಿಸಿದ್ದರು. ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕದ್ದ ಕಾರು ಗುರುಗ್ರಾಮ್ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಆದರೆ,

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಕಾರು ಕಳ್ಳತನ! Read More »

SSLC ಪರೀಕ್ಷೆ ಬರೆಯಬೇಕಾದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಸಮಗ್ರ ನ್ಯೂಸ್‌ : ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಸ್ತೆ ಅಪಘಾತದಲ್ಲಿ, ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುವ ವೇಳೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು,ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಮೃತ ದುರ್ದೈವಿ.

SSLC ಪರೀಕ್ಷೆ ಬರೆಯಬೇಕಾದ ಇಬ್ಬರು ವಿದ್ಯಾರ್ಥಿಗಳು ಮೃತ್ಯು Read More »

ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಸಮಗ್ರ ನ್ಯೂಸ್: ದುಷ್ಕರ್ಮಿಗಳ ಗುಂಡಿಗೆ 11 ವರ್ಷದ ಕಾಡುಕೋಣ ಒಂದು ಬಲಿಯಾದ ಘಟನೆ ಪಿರಿಯಾಪಟ್ಟಣ ದಲ್ಲಿ ನಡೆದಿದೆ. ಮುಖ್ಯರಸ್ತೆಯಿಂದ ಪರದಕಟ್ಟೆ ಕಳ್ಳ ಬೇಟೆ ತಡೆ ಶಿಬಿರಕ್ಕೆ ಹೋಗುವ ರಸ್ತೆಯ ಮೈಸೂರು ಕೊಡಗು ಚೈನ್ ಗೇಟ್ ಅರಣ್ಯ ಪ್ರದೇಶದಲ್ಲಿ ನಡೆದಿದ್ದು ನಾಗರಹೊಳೆ ಹುಲಿ ಸುರಕ್ಷಿತ ಪ್ರದೇಶವಾಗಿದ್ದು ಇಂದು (ಮಾ.25) ಬೆಳಗ್ಗೆ ಕಾಡುಕೋಣಕ್ಕೆ ಗುಂಡು ಹೊಡೆದ ಶಬ್ದ ಕೇಳಿದೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರುವ ಸಂದರ್ಭ ವನ್ಯಜೀವಿ ಬೇಟೆಗಾರರು ಪರರಿಯಾಗಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಅರಣ್ಯ ಇಲಾಖೆ ವಿಶೇಷ ತಂಡ ರಚಿಸಿದೆ.

ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ Read More »