March 2024

ಬಿಸಿಲ‌ ಬೇಗೆಗೆ ತಂಪೆರೆದ‌ ವರುಣ| ಸುಳ್ಯ, ಕಡಬ ತಾಲೂಕಿನ ಹಲವೆಡೆ ಉತ್ತಮ ಮಳೆ

ಸಮಗ್ರ ನ್ಯೂಸ್: ಹಲವು ದಿನಗಳಿಂದ‌ ಸೆಕೆಯಿಂದ ತತ್ತರಿಸಿದ್ದ‌ ಕರಾವಳಿಗೆ ಕಳೆದೆರಡು ದಿನಗಳಿಂದ‌ ಮಳೆಯ‌ ಸಿಂಚನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಲವೆಡೆ ಮತ್ತು‌ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು. ಸುಳ್ಯ, ಕಡಬ ತಾಲೂಕಿನ ಕೊಲ್ಲಮೊಗ್ರ, ಕಲ್ಲಾಜೆ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ, ಮರ್ಕಂಜ, ಎಲಿಮಲೆ, ಸಂಪಾಜೆ, ಅರಂತೋಡು, ಹರಿಹರ ಪಲ್ಲತ್ತಡ್ಕ, ಪಂಬೆತ್ತಾಡಿ ಸೇರಿದಂತೆ ವಿವಿಧ […]

ಬಿಸಿಲ‌ ಬೇಗೆಗೆ ತಂಪೆರೆದ‌ ವರುಣ| ಸುಳ್ಯ, ಕಡಬ ತಾಲೂಕಿನ ಹಲವೆಡೆ ಉತ್ತಮ ಮಳೆ Read More »

ಮಾ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಶುರು

ಸಮಗ್ರ ನ್ಯೂಸ್: 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ಯು ಮಾ.25ರಿಂದ ಪ್ರಾರಂಭವಾಗುತ್ತಿದ್ದು, ರಾಜ್ಯಾದ್ಯಂತ 2,750 ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದು, ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಮಾ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಶುರು Read More »

ಮಡಿಕೇರಿ: ಭಾರತೀಯ ನೌಕಾಪಡೆಗಳ ತಂಡದಿಂದ ವೀರ ಪ್ರತಿಮೆಗಳಿಗೆ ಪುಷ್ಪಾರ್ಚನೆ

ಸಮಗ್ರ ನ್ಯೂಸ್: ಭಾರತೀಯ ನೌಕಾಪಡೆಗಳ ತಂಡ ಮಡಿಕೇರಿಯಲ್ಲಿರುವ ವೀರ ಪ್ರತಿಮೆಗಳಿಗೆ ಪುಷ್ಪಾರ್ಚನೆಯನ್ನು ಸಲ್ಲಿಸುವುದರ ಮೂಲಕ ಗೌರವ ಅರ್ಪಿಸಿದರು. ಕರ್ನಾಟಕ ಹೆರಿಟೇಜ್ ರ್‍ಯಾಲಿ ಮೂಲಕ ಅಗ್ನಿಪಥ್ ಯೋಜನೆಯ ಮಾಹಿತಿ, ದೇಶ ಸೇವೆಯ ಮಹತ್ವ ಹಾಗೂ ಕರ್ನಾಟಕ ಪಾರಂಪರೆಯನ್ನು ಪರಿಚಯಿಸುವ ಪ್ರಯತ್ನಕ್ಕೆ ಭಾರತೀಯ ನೌಕಾಪಡೆಯ ತಂಡ ಫೀಲ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ,ಮಂಗೇರಿರ ಮುತ್ತಣ್ಣ, ಅಜ್ಜಮಾಡ ದೇವಯ್ಯ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು. ನೌಕಾದಳ ಕಮಾಂಡರ್ ಕಮಾಂಡರ್ ರವೀಂದ್ರ ಕುಮಾರ್, ಸಂಯೋಜಕ ಲೆಫ್ಟಿನೆಂಟ್ ಕಮಾಂಡರ್ ಕುಂಚೆಟ್ಟಿರ ಸುಬ್ಬಯ್ಯ, ಮತ್ತಿತರ ಅಧಿಕಾರಿಗಳು

ಮಡಿಕೇರಿ: ಭಾರತೀಯ ನೌಕಾಪಡೆಗಳ ತಂಡದಿಂದ ವೀರ ಪ್ರತಿಮೆಗಳಿಗೆ ಪುಷ್ಪಾರ್ಚನೆ Read More »

ಲಾರಿ-ಆ್ಯಂಬುಲೆನ್ಸ್ ನಡುವೆ ಅಪಘಾತ

ಸಮಗ್ರ ನ್ಯೂಸ್: ವಿರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಕೊಳತ್ತೋಡು ಗ್ರಾಮದಲ್ಲಿ ಲಾರಿ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಬವಿಸಿದ್ದು ಲಾರಿ ಚಾಲಕನ ಸಮಯ ಪ್ರಜ್ಞೆಯಿಂದ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿರಾಜಪೇಟೆ ಸರಕಾರಿ ಆಸ್ಪತ್ರೆಗೆ ಸಂಬಂಧಿಸಿದ ಆ್ಯಂಬುಲೆನ್ಸ್, ವಿರಾಜಪೇಟೆ DHS ಕಂಪೆನಿಗೆ ಸೇರಿದ ಲಾರಿ ನಡುವೆ ಬಿಟ್ಟಂಗಾಲದಲ್ಲಿ ಅಪಘಾತ ಸಂಭವಿಸಿದೆ. ಸವಾರನನ್ನು ಆಸ್ಪತ್ತೆಗೆ ಸಾಗಿಸುವಾಗ ಅತೀ ವೇಗದಿಂದ ಬಂದ ಆಂಬ್ಯುಲೆನ್ಸ್ ಲಾರಿಗೆ ಗುದ್ದಿದ್ದು, ಇದನ್ನು ರಕ್ಷಿಸಲು ಹೋಗಿ ಮರಕ್ಕೆ ಗುದ್ದಿ ಲಾರಿ ನಿಲ್ಲಿಸಿ ಲಾರಿ ಚಾಲಕನ

ಲಾರಿ-ಆ್ಯಂಬುಲೆನ್ಸ್ ನಡುವೆ ಅಪಘಾತ Read More »

HEALTH TIPS|ಈ ರೀತಿಯ ಮೀನುಗಳನ್ನು ತಿನ್ನೋದು ಸ್ಟಾಪ್ ಮಾಡಿ

ಸಮಗ್ರ ನ್ಯೂಸ್: ಕೆಲವರು ಮಾಂಸಕ್ಕಿಂತ ಮೀನನ್ನು ಹೆಚ್ಚು ಇಷ್ಟಪಡುತ್ತಾರೆ. ಮಟನ್ ಮತ್ತು ಚಿಕನ್ ಬದಲಿಗೆ ಮೀನುಗಳನ್ನು ಹೆಚ್ಚು ತಿನ್ನಲು ವೈದ್ಯರು ಸಲಹೆ ನೀಡುತ್ತಾರೆ. ಗರ್ಭಿಣಿಯರು, ಹಾಲುಣಿಸುವ ಮಹಿಳೆಯರು ಮತ್ತು ತಾಯಂದಿರಾಗಲು ಬಯಸುವ ಮಹಿಳೆಯರು ಮೀಥೈಲ್ ಮರ್ಕ್ಯುರಿ ಹೊಂದಿರುವ ಮೀನುಗಳನ್ನು ತಿನ್ನಬಾರದು. ಅಂತಹ ವಿಷಕಾರಿ ವಸ್ತುಗಳು ಭ್ರೂಣಗಳು, ಶಿಶುಗಳು ಮತ್ತು ಮಕ್ಕಳ ನರಮಂಡಲದ ಬೆಳವಣಿಗೆಯಲ್ಲಿ ಸಮಸ್ಯೆಗಳನ್ನು ಉಂಟುಮಾಡಬಹುದು. ಆದರೆ ಈ ಪಟ್ಟಿಯಲ್ಲಿ ಮೀನು ಸೇರಿದೆಯೇ? ವಿಷದಂತೆ ನಿಮಗೆ ಹಾನಿ ಮಾಡುವ ಅಪಾಯಕಾರಿ ಮೀನುಗಳ ಪಟ್ಟಿಯನ್ನು ಪರಿಶೀಲಿಸಿ. ಮೀನಿನ ನಿಯಮಿತ

HEALTH TIPS|ಈ ರೀತಿಯ ಮೀನುಗಳನ್ನು ತಿನ್ನೋದು ಸ್ಟಾಪ್ ಮಾಡಿ Read More »

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ 12 ಮಂದಿ ಆರೋಪಿಗಳಿಗೆ ಗಡಿಪಾರು ಆದೇಶ

ಸಮಗ್ರ ನ್ಯೂಸ್:‌ ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 12 ಮಂದಿ ಆರೋಪಿಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಅಡ್ಯಾರ್‌ಪದವಿನ ಮುಹಮ್ಮದ್ ಅಶ್ರಫ್ (42) ಮತ್ತು ರಿಯಾಝ್ ಅಹ್ಮದ್ (35), ಸುರತ್ಕಲ್ ಕಾಟಿಪಳ್ಳ ಮದ್ಯದ ವಿಜ್ವಲ್ ಪೂಜಾರಿ (29),ಸುರತ್ಕಲ್ ಕಾನಕಟ್ಲದ ಗಿರಿಧರ್ (24) , ಕಾಟಿಪಳ್ಳ ಚೊಕ್ಕಬೆಟ್ಟುವಿನ ಹರ್ಷದ್ ಯಾನೆ ಹಫೀಝ್ (28), ಉರ್ವಸ್ಟೋರ್‌ನ ವೃಕ್ಷಿತ್ ಯಾನೆ ರಕ್ಷಿತ್ (23) ಮತ್ತು ದುರ್ಗೇಶ್ (25),

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ 12 ಮಂದಿ ಆರೋಪಿಗಳಿಗೆ ಗಡಿಪಾರು ಆದೇಶ Read More »

ಜೆಡಿಎಸ್ ಪಾಲಾದ ಸಕ್ಕರೆ ನಾಡು/ ಸುಮಲತಾಗೆ ನಿರಾಸೆ

ಸಮಗ್ರ ನ್ಯೂಸ್: ಸಕ್ಕರೆ ನಾಡು ಮಂಡ್ಯ ಜೆಡಿಎಸ್ ಪಾಲಾಗಿದ್ದು, ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾಗೆ ಭಾರೀ ನಿರಾಸೆಯಾಗಿದೆ.. ಈ ಕುರಿತು ಬಿಜೆಪಿ ಸಭೆಯಲ್ಲಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಮಾಹಿತಿ ನೀಡಿದ್ದಾರೆ. ಜೆಡಿಎಸ್ ಕ್ಷೇತ್ರಗಳನ್ನು ಕೊನೆಗೂ ಬಿಜೆಪಿ ಫೈನಲ್ ಮಾಡಿದ್ದು, ಕೋಲಾರ, ಮಂಡ್ಯ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಈ ಕುರಿತು, ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. ಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳನ್ನು ಜೆಡಿಎಸ್

ಜೆಡಿಎಸ್ ಪಾಲಾದ ಸಕ್ಕರೆ ನಾಡು/ ಸುಮಲತಾಗೆ ನಿರಾಸೆ Read More »

ಪುತ್ತೂರು: ಫೇಸ್‌ಬುಕ್‌ ಖಾತೆಯಲ್ಲಿ ದ್ವೇಷ ಬಿತ್ತುವ ಪೋಸ್ಟರ್lದೂರು ದಾಖಲು

ಸಮಗ್ರ ನ್ಯೂಸ್:‌ ಜಾತಿ, ಜನಾಂಗ, ಪಂಗಡಗಳ ನಡುವೆ ದ್ವೇಷ ಬಿತ್ತುವ ಹಾಗೂ ಸಮಾಜದ ಸೌಹಾರ್ದತೆಗೆ ಭಂಗವನ್ನುಂಟು ಮಾಡುವಂತಹ ಪೋಸ್ಟನ್ನು ಫೇಸ್‌ಬುಕ್‌ ಖಾತೆಯಲ್ಲಿ ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ಮಾ 21 ರಂದು ರಾತ್ರಿ ಬಲ್ಯಗ್ರಾಮ, ಕಡಬ ನಿವಾಸಿ, ದ.ಕ ಜಿಲ್ಲೆಯ ಅಂಬೇಡ್ಕರ್‌ ಅಪತ್ಬಾಂಧವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜು ಹೊಸ್ಮಠರವರ ಮೊಬೈಲ್ ಗೆ ಬಂದ ಫೇಸ್ಟುಬುಕ್‌ನ ಲಿಂಕ್‌ನ್ನು ಪರಿಶೀಲಿಸಿದಾಗ, ಪ್ರವೀಣ್ ಮದ್ದಡ್ಕ ಎಂಬಾತನು ತನ್ನ ಫೇಸ್‌ಬುಕ್ ಖಾತೆಯಲ್ಲಿ

ಪುತ್ತೂರು: ಫೇಸ್‌ಬುಕ್‌ ಖಾತೆಯಲ್ಲಿ ದ್ವೇಷ ಬಿತ್ತುವ ಪೋಸ್ಟರ್lದೂರು ದಾಖಲು Read More »

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಸಮಗ್ರ ನ್ಯೂಸ್: ಕಾಡಾನೆ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಕ್ಕಬ್ಬೆ ಸಮೀಪ ನಾಲಾಡಿಯಲ್ಲಿ ನಡೆದಿದೆ. ಮೃತ ಕಂಬೆಯಂಡ ರಾಜ ದೇವಯ (59) ಇಂದು ಬೆಳಗ್ಗೆ ನಾಲಾಡಿಯಲಿರುವ ತಮ್ಮ ಮನೆಯ ಸಮೀಪದ ತೋಟಕ್ಕೆ ತೆರಳಿದಾಗ ದಿಢೀರ್ ಕಾಣಿಸಿಕೊಂಡ ಆನೆ ಇವರ ಮೇಲೆ ಎರಗಿ ತುಳಿದುಕೊಂದಿದೆ. ಒಟ್ಟು ಮೂರು ಆನೆಗಳು ತೋಟದಲ್ಲಿ ಇದ್ದವು ಎಂದು ಹೇಳಲಾಗುತ್ತಿದೆ. ಕೆ.ಕೆ ರಾಜ ದೇವಯ್ಯ ಅವರು ಕೃಷಿಕರು ಹಾಗೂ ಕಕ್ಕಬೆಯಲ್ಲಿ ಸ್ವಂತ ಆಟೋ ಬಾಡಿಗೆಗೆ ಓಡಿಸುತ್ತಿದ್ದರು.

ಕಾಡಾನೆ ದಾಳಿಗೆ ವ್ಯಕ್ತಿ ಬಲಿ Read More »

17ನೇ ಆವೃತ್ತಿ ಐಪಿಎಲ್ ಆರಂಭ/ ಮೊದಲ ಪಂದ್ಯದಲ್ಲೇ ದಾಖಲೆ ನಿರ್ಮಿಸಿದ ಕೊಹ್ಲಿ

ಸಮಗ್ರ ನ್ಯೂಸ್: ಐಪಿಎಲ್‍ನ 17ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ತಂಡದ ವಿರಾಟ್ ಕೊಹ್ಲಿ ಕೆಲ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಟಿ20 ಕ್ರಿಕೆಟ್‍ನಲ್ಲಿ 12 ಸಾವಿರ ರನ್‍ಗಳ ಮೈಲುಗಲ್ಲು ಸಾಧಿಸುವ ಮೂಲಕ ಟಿ20 ಕ್ರಿಕೆಟ್‍ನಲ್ಲಿ 12000 ರನ್ ಪೂರ್ಣಗೊಳಿಸಿದ ಭಾರತದ ಮೊದಲ ಮತ್ತು ವಿಶ್ವದ 6ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವೆಸ್ಟ್‍ಇಂಡೀಸ್‍ನ ಕ್ರಿಸ್ ಗೇಲ್(14562), ಪಾಕಿಸ್ತಾನದ ಶೋಯೆಬ್ ಮಲಿಕ್(13360), ವಿಂಡೀಸ್‍ನ ಕೀರನ್ ಪೆÇಲ್ಲಾರ್ಡ್(12900), ಇಂಗ್ಲೆಂಡ್‍ನ ಅಲೆಕ್ಸ್ ಹೇಲ್ಸ್(12319)

17ನೇ ಆವೃತ್ತಿ ಐಪಿಎಲ್ ಆರಂಭ/ ಮೊದಲ ಪಂದ್ಯದಲ್ಲೇ ದಾಖಲೆ ನಿರ್ಮಿಸಿದ ಕೊಹ್ಲಿ Read More »