March 2024

ಮಂಗಳೂರು: ಮಾದಕ ವಸ್ತು ಮಾರಾಟ- ಆರೋಪಿ ಬಂಧನ

ಸಮಗ್ರ ನ್ಯೂಸ್‌ :: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಲೊರೊಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36) ಎಂದು ಗುರುತಿಸಲಾಗಿದೆ. ಈತನಿಂದ 2,30,000 ರೂ. ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. […]

ಮಂಗಳೂರು: ಮಾದಕ ವಸ್ತು ಮಾರಾಟ- ಆರೋಪಿ ಬಂಧನ Read More »

ಕೋಲ್ಪೆ: ಗೂಡಂಗಡಿಯಿಂದ 15 ಸಾವಿರ ರೂ.ಮೌಲ್ಯದ ವಸ್ತು ಕಳವು..!

ಸಮಗ್ರ ನ್ಯೂಸ್‌ : ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಗೂಡಂಗಡಿಯೊಂದರಿಂದ ಕಳ್ಳತನ ಮಾಡಿರುವ ಘಟನೆ ಕೊಣಾಲು ಗ್ರಾಮದ ಕೋಲ್ಪೆ ಬದ್ರಿಯಾ ಜುಮಾ ಮಸೀದಿ ಮುಂಭಾಗದಲ್ಲಿ ನಡೆದಿದೆ. ಕೋಲ್ಪೆ ನಿವಾಸಿ ಮುಸ್ತಫಾ ಎಂಬವರ ಬದ್ರಿಯಾ ಸ್ಟೋರ್ ಗೂಡಂಗಡಿಯಲ್ಲಿ ಈ ಕಳ್ಳತನ ನಡೆದಿದೆ. ಮುಸ್ತಫಾ ಅವರು ಮಾ.20ರಂದು ರಾತ್ರಿ 9 ಗಂಟೆ ವೇಳೆಗೆ ಅಂಗಡಿ ಬಂದ್ ಮಾಡಿ ಮನೆಗೆ ಹೋಗಿದ್ದು ಮಾ.21ರಂದು ಮುಂಜಾನೆ 3 ಗಂಟೆ ವೇಳೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿದ್ದ 4 ಸಾವಿರ ನಗದು, ವಿಮಲ್,

ಕೋಲ್ಪೆ: ಗೂಡಂಗಡಿಯಿಂದ 15 ಸಾವಿರ ರೂ.ಮೌಲ್ಯದ ವಸ್ತು ಕಳವು..! Read More »

ಬೆಳ್ತಂಗಡಿ: ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ| ಮದ್ಯ ಸಹಿತ ಆರೋಪಿ ವಶ

ಸಮಗ್ರ ನ್ಯೂಸ್:‌ ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ನಡೆಸಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಬೆಳಾಲು ಗ್ರಾಮದ ಮಿನಂದೆಲ್ ನಿವಾಸಿ ಶೀನ ಗೌಡರ ಮಗ ದಯಾನಂದ ಗೌಡ (47) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಿನಂದೆಲ್ ಬಾನಿ ಮೆನ್ಸ್

ಬೆಳ್ತಂಗಡಿ: ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ| ಮದ್ಯ ಸಹಿತ ಆರೋಪಿ ವಶ Read More »

ನೆಲ್ಯಾಡಿ: ಡಿಸೇಲ್ ಸಾಗಾಟದ ಟ್ಯಾಂಕರ್ ಪಲ್ಟಿ; ಇಬ್ಬರಿಗೆ ಗಾಯ..!

ಸಮಗ್ರ ನ್ಯೂಸ್‌ : ಡೀಸಿಲ್ ಟ್ಯಾಂಕರ್ ಪಲ್ಟಿಯಾಗಿ ಡೀಸಿಲ್ ಸೋರಿಕೆ ಉಂಟಾಗಿ ಇಬ್ಬರೂ ಗಾಯಗೊಂಡ ಘಟನೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಟ್ಯಾಂಕರ್ ಡ್ರೈವರ್ ಮೋಹಿಲ್ ಮತ್ತು ಮನೀಶ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಡೀಸಿಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಪಲ್ಟಿಯಾಗಿದ್ದು. ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿದೆ. ಗಾಯಗೊಂಡವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ

ನೆಲ್ಯಾಡಿ: ಡಿಸೇಲ್ ಸಾಗಾಟದ ಟ್ಯಾಂಕರ್ ಪಲ್ಟಿ; ಇಬ್ಬರಿಗೆ ಗಾಯ..! Read More »

ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈಗುಳ, ಜೀವ ಬೆದರಿಕೆ

ಸಮಗ್ರ ನ್ಯೂಸ್:‌ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿದ ಘಟನೆ ಉಜಿರೆ ಗ್ರಾಮದ ರಥಬೀದಿಯಲ್ಲಿ ನಡೆದಿದೆ. ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ಹರೀಶ್‌ ಆಚಾರ್ಯ ಎಂಬವರು ಮಾ. ೨೧ ರಂದು ರಾತ್ರಿ ಉಜಿರೆ ಗ್ರಾಮದ ರಥಬೀದಿಯಲ್ಲಿರುವ ಸಮಯ, ಆರೋಪಿಗಳಾದ ಉಜಿರೆ ಗ್ರಾಮದ ಮನೋಜ , ಕಲ್ಮಂಜ ಬೆಳ್ತಂಗಡಿ ಪ್ರಜ್ವಲ್‌ ಗೌಡ ಕೆ ವಿ ಹಾಗೂ ಉಜಿರೆ ಬೆಳ್ತಂಗಡಿ ಜಯಂತ ಎಂಬವರು ಕೆಎ-21-ಎನ್-9957‌ ನೇ ನಂಬ್ರದ ಕಾರು ಹಾಗೂ ಒಮಿನಿ ಗಾಡಿಯಲ್ಲಿ ಬಂದು ಹರೀಶ್‌ ಆಚಾರ್ಯರರನ್ನು ತಡೆದು ನಿಲ್ಲಿಸಿ,

ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈಗುಳ, ಜೀವ ಬೆದರಿಕೆ Read More »

ಮಂಗಳೂರು: ಮೀನು ಹಿಡಿಯಲು ಹೋದ ಬಾಲಕ ಸಮುದ್ರಪಾಲು

ಸಮಗ್ರ ನ್ಯೂಸ್:‌ ಮೀನು ಹಿಡಿಯಲು ಹೋದ ಅಪ್ರಾಪ್ತ ಬಾಲಕ ಗಾಳಿಯ ರಭಸಕ್ಕೆ ಸಮುದ್ರಪಾಲಾದ ಘಟನೆ ನಗರದ ತೋಟ ಬೆಂಗ್ರೆ ಸಮೀಪ ನಡೆದಿದೆ. ಮೃತ ಬಾಲಕನನ್ನು ಮಿಥುನ ಎಂಬವರ ಪುತ್ರ ಪ್ರಜೀತ್ ಎಂ. ತಿಂಗಳಾಯ ಎಂದು ಗುರುತಿಸಲಾಗಿದೆ. ಮನೆಯ ಬಡತನ ಹಾಗೂ ವಿದ್ಯಾಭ್ಯಾಸದ ವ್ಯವಸ್ಥೆಗೆ, ತನ್ನ ತಂದೆಯ ಜೊತೆ ಗುರುವಾರ ಸಂಜೆ 5:30ಕ್ಕೆ ಬೆಂಗ್ರೆ ಸಮುದ್ರದಲ್ಲಿ ಮಿನುಗಾರಿಕೆಗೆ (ನೆಗರ್ ಭಲೆ) ಹೋದ ಸಂದರ್ಭದಲ್ಲಿ, ಗಾಳಿ ರಭಸಕ್ಕೆ ಸಿಲುಕಿ ಸಮುದ್ರಪಾಲಾಗಿದ್ದಾನೆ ಎನ್ನಲಾಗಿದೆ. ಸಂಜೆ 6:50ಕ್ಕೆ ಮೃತದೇಹವು ಅಲೆಗಳ ರಭಸಕ್ಕೆ ಮೇಲೆ

ಮಂಗಳೂರು: ಮೀನು ಹಿಡಿಯಲು ಹೋದ ಬಾಲಕ ಸಮುದ್ರಪಾಲು Read More »

ಕಾರ್ಕಳ: ಟೆಂಪೋ ಪಲ್ಟಿ- ಓರ್ವ ಮೃತ್ಯು, ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್:‌ ತೆಂಗಿನಕಾಯಿ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಮಾಳ ಗ್ರಾಮದ ಕಡಾರಿ ಕ್ರಾಸ್‌ನಲ್ಲಿ ನಡೆದಿದೆ. ಹೆಜಮಾಡಿಯಿಂದ ಮಾಳದೆಡೆಗೆ ತೆಂಗಿನಕಾಯಿ ಸಾಗಿಸುತ್ತಿದ್ದ ವೇಳೆ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಪರಿಣಾಮವಾಗಿ ಐವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಓರ್ವ ಮೃತಪಟ್ಟಿರುತ್ತಾರೆ.ಟೆಂಪೋದಲ್ಲಿ ಚಾಲಕ ಸೇರಿದಂತೆ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರ್ಕಳ: ಟೆಂಪೋ ಪಲ್ಟಿ- ಓರ್ವ ಮೃತ್ಯು, ನಾಲ್ವರಿಗೆ ಗಾಯ Read More »

ಬಂಟ್ವಾಳ: ಗುಡ್ಡಕ್ಕೆ ಆಕಸ್ಮಿಕ ಬೆಂಕಿ

ಸಮಗ್ರ ನ್ಯೂಸ್‌ : ಮಂಚಿ ಎಂಬಲ್ಲಿ ಗುಡ್ಡವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ‌ನಂದಿಸಿದ್ದಾರೆ.ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟ ಇದ್ದು, ಬೆಂಕಿಯ ತೀವ್ರತೆಗೆ ರಬ್ಬರ್ ಕೃಷಿ ನಾಶವಾಗುವ ಸಾಧ್ಯತೆಗಳಿವೆ ಎಂದು ತೋಟದ ಮಾಲಕ ಅಗ್ನಿ ಶಾಮಕದಳದ ಕಚೇರಿಗೆ ಮಾಹಿತಿ ನೀಡಿದ್ದರು. ಗುಡ್ಡದ ಮೇಲೆ ಕಾಣಿಸಿಕೊಂಡ ಬೆಂಕಿ ಯಾವುದೇ ಅಪಾಯವನ್ನು ಮಾಡಬಾರದು ಎಂಬ ದೃಷ್ಟಿಯಿಂದ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.

ಬಂಟ್ವಾಳ: ಗುಡ್ಡಕ್ಕೆ ಆಕಸ್ಮಿಕ ಬೆಂಕಿ Read More »

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ನಡೆಸುತ್ತಿರುವ 5,8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಹಲವು ಸುತ್ತಿನ ಕಾನೂನು ಸಮರದ ಬಳಿಕ ಪಬ್ಲಿಕ್‌ ಪರೀಕ್ಷೆ ಮುಂದುವರಿಸಲು ರಾಜ್ಯ ಹೈಕೋರ್ಟ್‌ ಶುಕ್ರವಾರ ಬೆಳಗ್ಗೆ ಗ್ರೀನ್‌ ಸಿಗ್ನಲ್‌ ನೀಡಿತ್ತು. ಇದೀಗ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ರುಪ್ಸಾ ಇದನ್ನು ಪ್ರಶ್ನಿಸಿ ಮತ್ತೆ ಸುಪ್ರೀಂಕೋರ್ಟ್‌

5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ Read More »

ಮಂಗಳೂರು: ಅಕ್ರಮ 642 ಲೀಟರ್ ಮದ್ಯ, 1.7 ಕೆಜಿ ಡ್ರಗ್ಸ್ ವಶ

ಸಮಗ್ರ ನ್ಯೂಸ್:‌ 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 22 ರವರೆಗೆ ಜಿಲ್ಲೆಯಲ್ಲಿ 3,75,022 ರೂಪಾಯಿ ಮೌಲ್ಯದ 642 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ ಹಾಗೂ 5,43,500 ರೂ. ಮೌಲ್ಯದ 1.7 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದೂರವಾಣಿ ಮೂಲಕ (1950) 97 ಸಾರ್ವಜನಿಕರಿಂದ ಮಾಹಿತಿ ಕೋರಿಕೆಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ. ಸಿ-ವಿಸಿಲ್ ಆಪ್ ಮೂಲಕ ಇಲ್ಲಿಯವರೆಗೆ 600 ದೂರುಗಳು ಸ್ವೀಕೃತಗೊಂಡಿದ್ದು ಎಲ್ಲಾ ದೂರುಗಳನ್ನು ವಿಲೇವಾರಿ ಮಾಡಲಾಗಿರುತ್ತದೆ. ಎನ್.ಜಿ.ಆರ್.ಎಸ್ ಪೋರ್ಟಲ್ (ರಾಷ್ಟ್ರೀಯ ಕುಂದುಕೊರತೆಗಳ

ಮಂಗಳೂರು: ಅಕ್ರಮ 642 ಲೀಟರ್ ಮದ್ಯ, 1.7 ಕೆಜಿ ಡ್ರಗ್ಸ್ ವಶ Read More »