March 2024

ಮೂರನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್

ಸಮಗ್ರ ನ್ಯೂಸ್: ಬಿಜೆಪಿ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ, ತಮಿಳುನಾಡಿನ ಕೊಯಮತ್ತೂರಿನಿಂದ ನಿವೃತ್ತ ಪೊಲೀಸ್ ಅಧಿಕಾರಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಸ್ಪರ್ಧೆ ಮಾಡಲಿದ್ದಾರೆ. ಈ ಹಿಂದೆ ತೆಲಂಗಾಣದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಡಾ. ತಮಿಳ್ ಸಾಯಿ ಸೌಂದರ್ಯರಾಜನ್ ಗೆ ಚೆನೈ ದಕ್ಷಿಣದಿಂದ ಟಿಕೆಟ್ ನೀಡಲಾಗಿದೆ. ಎಲ್. ಮುರುಗನ್ ನೀಲಗಿರಿ ಕ್ಷೇತ್ರದಿಂದ, ಪೆÇನ್ನು ರಾಧಾಕೃಷ್ಣನ್ ಕನ್ಯಾಕುಮಾರಿಯಿಂದ ಸ್ಪರ್ಧೆ ಮಾಡಲಿದ್ದಾರೆ. ತಮಿಳುನಾಡಿನಲ್ಲಿ ಲೋಕಸಭಾ ಚುನಾವಣೆಗೆ […]

ಮೂರನೇ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ/ ಕೊಯಮತ್ತೂರಿನಿಂದ ಅಣ್ಣಾಮಲೈಗೆ ಟಿಕೆಟ್ Read More »

ಲೋಕಸಭಾ ಚುನಾವಣೆ/ ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ಐಕಾನ್‍ಗಳ ನೇಮಕ

ಸಮಗ್ರ ನ್ಯೂಸ್: ನಟ ರಮೇಶ್ ಅರವಿಂದ್ ಸೇರಿದಂತೆ 8 ಮಂದಿಯನ್ನು ಮೂರು ಜಿಲ್ಲೆಗಳ ಜಿಲ್ಲಾ ಚುನಾವಣಾ ಐಕಾನ್ ಗಳಾಗಿ ರಾಜ್ಯ ಚುನಾವಣಾ ಆಯೋಗ ನೇಮಕ ಮಾಡಿ ಆದೇಶಿಸಲಾಗಿದೆ. ಮೈಸೂರು, ಬೆಂಗಳೂರು ಹಾಗೂ ವಿಜಯಪುರ ಜಿಲ್ಲೆಗಳಿಗೆ ಜಿಲ್ಲಾ ಐಕಾನ್ ಗಳನ್ನು ನೇಮಕ ಮಾಡುತ್ತಿರೋದಾಗಿ ಹೆಚ್ಚುವರಿ ಚುನಾವಣಾಧಿಕಾರಿ ತಿಳಿಸಿದ್ದಾರೆ. ಮಾಡೆಲ್ ಕುಮಾರಿ ತನಿಷ್ಕಾ ಮೂರ್ತಿ, ಅಂತಾರಾಷ್ಟ್ರೀಯ ವೈಲ್ಡ್ ಲೈಫ್ ಫೆÇೀಟೋಗ್ರಾಫರ್ ಕೆ ಸೇನಾನಿ ಹಾಗೂ ಬಿಎಸ್ ಕೃಪಾಕರ್ ಅವರನ್ನು ಮೈಸೂರು ಜಿಲ್ಲೆಯ ಜಿಲ್ಲಾ ಐಕಾನ್ ಗಳಾಗಿ ನೇಮಕ ಮಾಡಿ ಆದೇಶಿಸಲಾಗಿದೆ.

ಲೋಕಸಭಾ ಚುನಾವಣೆ/ ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ಐಕಾನ್‍ಗಳ ನೇಮಕ Read More »

ದುಬಾರೆ ಬಳಿ ಪ್ರವಾಸಿಗರ ಕಾರಿನ ಮೇಲೆ ಕಾಡಾನೆ ದಾಳಿ| ಅಪಾಯದಿಂದ ಪಾರು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಮೀಪ ಪ್ರವಾಸಿಗರಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿರುವ ಘಟನೆ ಇಂದು (ಮಾ.21) ಬೆಳಗ್ಗೆ ನಡೆದಿದೆ. ಕಾಡಾನೆಯ ಲಗ್ಗೆಯಿಂದ ಕಾರಿಗೆ ಹಾನಿಯಾಗಿದ್ದು, ಅದರಲ್ಲಿದ್ದ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆ ಸಂಭಂದ ಅರಣ್ಯ ಇಲಾಖೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ದುಬಾರೆ ಬಳಿ ಪ್ರವಾಸಿಗರ ಕಾರಿನ ಮೇಲೆ ಕಾಡಾನೆ ದಾಳಿ| ಅಪಾಯದಿಂದ ಪಾರು Read More »

ಮಂಗಳೂರು: ಮಾ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭದ ಹಿನ್ನಲೆ |ನಿಷೇಧಾಜ್ಞೆ ಜಾರಿ

ಸಮಗ್ರ ನ್ಯೂಸ್‌ : ಎಸ್.ಎಸ್.ಎಲ್.ಸಿ ಪರೀಕ್ಷೆ ಮಾ.25 ರಿಂದ ಎಪ್ರಿಲ್ 6ರ ವರೆಗೆ ನಡೆಯಲಿದ್ದು, ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 39 ಪರೀಕ್ಷಾ ಕೇಂದ್ರಗಳಿವೆ.ಆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪ ಪೊಲೀಸ್ ಆಯುಕ್ತರೂ ಆಗಿರುವ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ದಾರ್ಥ್ ಗೋಯಲ್ ಆದೇಶಿಸಿದ್ದಾರೆ. ನಿಷೇಧಿತ

ಮಂಗಳೂರು: ಮಾ. 25 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭದ ಹಿನ್ನಲೆ |ನಿಷೇಧಾಜ್ಞೆ ಜಾರಿ Read More »

ಉಳಿದ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್/ ನಾಳೆ ಘೋಷಣೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕರ್ನಾಟಕದ ಉಳಿದ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ (ಮಾ. 22) ಘೋಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಈಗಾಗಲೇ ಬಾಕಿ ಉಳಿದಿರುವ ಐದು ಕ್ಷೇತ್ರಗಳ ಕುರಿತು ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಸುದೀರ್ಘ ಚರ್ಚೆಯಾಗಿದೆ. ಮಾ.22ರಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಈ ಕುರಿತು ಚರ್ಚೆ ಮಾಡಿ ಟಿಕೆಟ್ ಘೋಷಣೆ ಮಾಡಲಿದ್ದಾರೆ ಎಂದು ಅವರು ಹೇಳಿದರು. ಮೈತ್ರಿಯಿಂದಾಗಿ ಎನ್‍ಡಿಎ ರಾಜ್ಯದಲ್ಲಿ

ಉಳಿದ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್/ ನಾಳೆ ಘೋಷಣೆ Read More »

ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ

ಸಮಗ್ರ ನ್ಯೂಸ್:ಮಾ.21 ರಿಂದ ಮಾ.23 ರ ತನಕ ಮಹಾರಾಷ್ಟ್ರದಲ್ಲಿ ನಡೆಯಲಿರುವ 70ನೇ ಸೀನಿಯರ್ ನ್ಯಾಷನಲ್ ಕಬಡ್ಡಿ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೇಕಲ್ಲಿನ ಮಿಥುನ್ ಗೌಡ ಆಯ್ಕೆ. ಇವರು ಮಂಗಳೂರಿನ ಗೋಕರ್ಣನಾಥೇಶ್ವರ ಕಾಲೇಜಿನ ಪೈನಲ್ ಬಿ.ಎ ವಿದ್ಯಾರ್ಥಿ. ಏನೆಕಲ್ಲು ಗ್ರಾಮದ ಸುಂದರ ಗೌಡ ಮತ್ತು ವಸಂತಿ ದಂಪತಿಗಳ ಪುತ್ರ.

ನ್ಯಾಷನಲ್ ಕಬಡ್ಡಿ ಚಾಂಪಿಯನ್‌ ಶಿಪ್ ಗೆ ಮಿಥುನ್ ಏನೆಕಲ್ ಆಯ್ಕೆ Read More »

ಆರ್ಥಿಕ ಅಸಮಾನತೆ ಪ್ರಮಾಣ ಹೆಚ್ಚಳ/ ದೇಶದ ಶೇ.1ರಷ್ಟು ಶ್ರೀಮಂತರಲ್ಲಿ ಶೇ.40.1ರಷ್ಟು ಸಂಪತ್ತು

ಸಮಗ್ರ ನ್ಯೂಸ್: ಆರ್ಥಿಕ ಅಸಮಾನತೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಭಾರತದಲ್ಲಿ ಹೆಚ್ಚುತ್ತಲೇ ಇದ್ದು, 2022-23ರಲ್ಲಿ ದೇಶದ ಶೇ.1ರಷ್ಟು ಶ್ರೀಮಂತರು ದೇಶದ ಒಟ್ಟು ಆದಾಯದಲ್ಲಿ ಶೇ.22.6ರಷ್ಟು ಪಾಲು ಮತ್ತು ಸಂಪತ್ತಿನಲ್ಲಿ ಶೇ.40.1ರಷ್ಟು ಪಾಲು ಹೊಂದಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಇನ್‍ಕಮ್ ಆಂಡ್ ವೆಲ್ತ್ ಇನ್‍ಈಕ್ವಾಲಿಟಿ ಇನ್ ಇಂಡಿಯಾ, 1922 – 2023: ದಿ ರೈಸ್ ಆಫ್ ದಿ ಬಿಲಿಯನೇರ್ ರಾಜ್ ಎಂಬ ಶೀರ್ಷಿಕೆ ಹೊಂದಿರುವ ಪ್ಯಾರಿಸ್ ಸ್ಕೂಲ್ ಆಫ್ ಎಕನಾಮಿಕ್ಸ್‍ನ ಥೋಮಸ್ ಪಿಕೆಟ್ಟಿ, ಹಾರ್ವರ್ಡ್ ಕೆನಡಿ ಸ್ಕೂಲ್‍ನ ಲೂಕಸ್

ಆರ್ಥಿಕ ಅಸಮಾನತೆ ಪ್ರಮಾಣ ಹೆಚ್ಚಳ/ ದೇಶದ ಶೇ.1ರಷ್ಟು ಶ್ರೀಮಂತರಲ್ಲಿ ಶೇ.40.1ರಷ್ಟು ಸಂಪತ್ತು Read More »

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ|ಮರಳು ಸಾಗಾಟ ಆರೋಪ

ಸಮಗ್ರ ನ್ಯೂಸ್‌ : ಲಾರಿಗಳ ನಂಬರ್ ಪ್ಲೇಟ್ ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರಳು ಸಾಗಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಮಂಗಳೂರಿನ ಕಣ್ಣೂರಿನಲ್ಲಿ ಮಧ್ಯರಾತ್ರಿ ರಸ್ತೆ ತಡೆದು ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಅಲ್ಲದೆ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿಯಾಗಿದ್ದು, ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದ್ದಾರೆ ಈ ವೇಳೆ ಉದ್ವಿಘ್ನ

ಮಂಗಳೂರು: ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ|ಮರಳು ಸಾಗಾಟ ಆರೋಪ Read More »

ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು

ಸಮಗ್ರ ನ್ಯೂಸ್‌ : ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಂಗಳೂರು ಹೊರವಲಯದ ಹಳೆಯಂಗಡಿ ಮೂಲದ ದಂಪತಿ, 3 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ನಿಂದ ಸೌದಿ ಅರೇಬಿಯಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ಮಗುವಿನೊಂದಿಗೆ ದಂಪತಿ ತೆರಳುತ್ತಿದ್ದಾಗ ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ದುರ್ಘಟನೆಯ ಮಹಿತಿ ಸಿಕ್ಕಿದ ಕೂಡಲೇ ಸ್ಥಳೀಯ ಅಧಿಕಾರಿಗಳು ಘಟನನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನ

ಸೌದಿ ಅರೇಬಿಯಾದಲ್ಲಿ ಭೀಕರಅಪಘಾತ| ಹಳೆಯಂಗಡಿಯ ನಾಲ್ವರು ಮೃತ್ಯು Read More »

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸಮಗ್ರ ನ್ಯೂಸ್‌ : ಅರಣ್ಯ ಪರಿಸರದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸೊತ್ತುಗಳ ಪತ್ತೆಯಾದ ಘಟನೆ ಬೆಳ್ತಂಗಡಿ ಪುದುವೆಟ್ಟು‌ಗ್ರಾಮದ ಬೋಳ್ಮಿನಾರು, ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಳೆಂಜ ಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳದಲ್ಲಿ ಮದ್ಯದ

ಬೆಳ್ತಂಗಡಿ: ಅರಣ್ಯದಲ್ಲಿ ಅಸ್ತಿಪಂಜರ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »