March 2024

ಉಡುಪಿ: ಬಾಡಿಗೆ ಹಣ ಪಾವತಿಸುವಂತೆ ಜೀವ ಬೆದರಿಕೆ|ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಜೀವ ಬೆದರಿಕೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಳಂಬೆಯ ಸುರೇಶ್‌ ಅವರು ಪ್ರಶಾಂತ್‌ ಅವರಿಗೆ ಅಂಗಡಿಯನ್ನು ಬಾಡಿಗೆಗೆ ನೀಡಿದ್ದರು. ಆದರೆ ಅವರು ಅಂಗಡಿಯ ಬಾಡಿಗೆ ಹಣವನ್ನು ಪಾವತಿಸಿರಲಿಲ್ಲ. ಡಿ. 4ರಂದು ರಾತ್ರಿ ಪ್ರಶಾಂತ್‌ ಅವರು ಸುರೇಶ್‌ ಅವರಿಗೆ ಕರೆಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಇದೇ ಕಾರಣದಿಂದ ಆಘಾತಕ್ಕೊಳಗಾಗಿ ಸುರೇಶ್‌ ಅವರು ಡಿ. 8ರಂದು ಸಾವನ್ನಪ್ಪಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಬಾಡಿಗೆ ಹಣ ಪಾವತಿಸುವಂತೆ ಜೀವ ಬೆದರಿಕೆ|ಯುವಕ ಆತ್ಮಹತ್ಯೆ Read More »

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ| ವೇಣೂರು ಪೊಲೀಸರ ದಾಳಿ

ಸಮಗ್ರ ನ್ಯೂಸ್ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ನಡೆದಿದೆ. ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ, ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್ ಠಾಣಾ ಪಿಎಸ್ಟ್ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 90

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ| ವೇಣೂರು ಪೊಲೀಸರ ದಾಳಿ Read More »

ಸಾರ್ವಜನಿಕವಾಗಿ ವ್ಯಾಪಕ ಟೀಕೆ/ ಹಸಿರು ಸಮವಸ್ತ್ರ ಮತ್ತು ಬಾಕ್ಸ್ ವಾಪಾಸು ಮಾಡಿದ ಜೊಮಾಟೋ

ಸಮಗ್ರ ನ್ಯೂಸ್: ಆನ್‍ಲೈನ್ ಆಹಾರ ಪೂರೈಕಾ ಸಂಸ್ಥೆ ಜೊಮಾಟೋ ಹಸಿರು ಸಮವಸ್ತ್ರ ಧರಿಸಿ, ಹಸಿರು ಬಾಕ್ಸ್‍ಗಳಲ್ಲಿ ಡೆಲಿವರಿ ಮಾಡಬೇಕು ಎಂದು ಹೊರಡಿಸಿದ್ದ ತನ್ನ ನಿರ್ಧಾರವನ್ನು, ಸಾರ್ವಜನಿಕರ ವ್ಯಾಪಕ ಟೀಕೆಗಳ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡು ತನ್ನ ನಿರ್ಧಾರವನ್ನು ಹಿಂಪಡೆದಿದೆ. ಈ ಕುರಿತು ಜೊಮಾಟೊ ಸಂಸ್ಥಾಪಕ ಹಾಗೂ ಸಿಇಒ ದೀಪಿಂದರ್ ಗೋಯಲ್, ಎಂದು ಅವರು ಸ್ಪಷ್ಟಪಡಿಸಿದ್ದು, ಆಹಾರ ವಿತರಣೆಯಲ್ಲಿ ಪ್ರತ್ಯೇಕತೆ ಮಾಡಲು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಎಲ್ಲಾ ರೀತಿಯ ಆಹಾರ ವಿತರಕರು ಕೆಂಪು ಬಣ್ಣದ ಸಮವಸ್ತ್ರವನ್ನೇ ಧರಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣ

ಸಾರ್ವಜನಿಕವಾಗಿ ವ್ಯಾಪಕ ಟೀಕೆ/ ಹಸಿರು ಸಮವಸ್ತ್ರ ಮತ್ತು ಬಾಕ್ಸ್ ವಾಪಾಸು ಮಾಡಿದ ಜೊಮಾಟೋ Read More »

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಎಲ್ಎ, ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಾಗಾರ

ಸಮಗ್ರ ನ್ಯೂಸ್: ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾ.14ರಂದು ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ದ.ಕ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ನ ಬಿಎಲ್ಎ ಗಳಿಗೆ ಹೊಸ ಮತದಾರರ ಪಟ್ಟಿಯ ಸೇರ್ಪಡೆ ಹಾಗೂ ತಿದ್ದುಪಡಿಯ ತರಬೇತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರುಗಳಿಗೆ ಪಕ್ಷ ಸಂಘಟನೆಯ ತರಬೇತಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರ ನಿರ್ದೇಶನದಂತೆ ಹಾಗೂ ಬಿಎಲ್ಎ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿಯವರ ಉಪಸ್ಥಿತಿಯಲ್ಲಿ ಮಹಮ್ಮದ್ ಬಡಗನ್ನೂರು

ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬಿಎಲ್ಎ, ಬೂತ್ ಅಧ್ಯಕ್ಷರಿಗೆ ತರಬೇತಿ ಕಾರ್ಯಾಗಾರ Read More »

ಬಸ್ ಪ್ರಯಾಣಿಕರೇ ಗಮನಿಸಿ| ಈ ವಸ್ತುಗಳನ್ನು ಇನ್ಮುಂದೆ ಪ್ರಯಾಣದಲ್ಲಿ ಕೊಂಡೊಯ್ಯುವಂತಿಲ್ಲ!!

ಸಮಗ್ರ ನ್ಯೂಸ್: ರಾಜ್ಯ ಸಾರಿಗೆಯ ನಾಲ್ಕು ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರು ಇನ್ಮುಂದೆ ಲಗೇಜ್‌ಗಳಲ್ಲಿ ಕೆಲವು ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೆಜ್ಜೆ ಹೆಜ್ಜೆಗೂ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಲಗೇಜ್ ಸಾಗಿಸಲು ಪ್ರಯಾಣಿಕರಿಗೆ ಕೆಲವು ಕಟ್ಟಪ್ಪಣೆ ಹಾಕಲಾಗಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯು ಕಾವೇರುತ್ತಿದೆ. ರಾಜಕೀಯ ಪಕ್ಷಗಳ ನಾಯಕರು ಮತದಾರರನ್ನು ಸೆಳೆಯಲು ಸರ್ಕಸ್ ಶುರು ಮಾಡಿದ್ದಾರೆ. ಇದರ ನಡುವೆ ನಾಲ್ಕು ನಿಗಮಗಳಿಗೆ ಹೊಸ ನಿಯಮ ಜಾರಿಯಾಗಿದೆ. ಸೂಕ್ತ

ಬಸ್ ಪ್ರಯಾಣಿಕರೇ ಗಮನಿಸಿ| ಈ ವಸ್ತುಗಳನ್ನು ಇನ್ಮುಂದೆ ಪ್ರಯಾಣದಲ್ಲಿ ಕೊಂಡೊಯ್ಯುವಂತಿಲ್ಲ!! Read More »

ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ

ಸಮಗ್ರ ನ್ಯೂಸ್‌ : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದಿದ್ದಾರೆ. ಮಾರ್ಚ್ 12 ತಮಿಳುನಾಡು ಮೂಲದ MSV ವರದರಾಜು ಎಂಬ ಸರಕು ಸಾಗಣೆಯ ನೌಕೆ ಮಂಗಳೂರು ಹಳೇ ಬಂದರಿಂದ ಸರಕು ತುಂಬಿಸಿ ಲಕ್ಷದ್ವೀಪದತ್ತ ಅಗತಿ ದ್ವೀಪದತ್ತ ಪ್ರಯಾಣ ಬೆಳೆಸಿತ್ತು. ಹಡಗಿನಲ್ಲಿ ಕ್ಯಾಪ್ಟನ್ ಭಾಸ್ಕರನ್, ಸಿಬಂದಿಗಳಾದ

ಮಂಗಳೂರಿನಿಂದ ಹೊರಟ ನೌಕೆ ಮುಳುಗಡೆ| ಅಪಾಯದಿಂದ ಪಾರಾದ ಸಿಬ್ಬಂದಿ Read More »

ಬಂಟ್ವಾಳ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಎಂದು ಗುರುತಿಸಲಾಗಿದೆ. ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮ ವ್ಯವಸ್ಥೆಯಲ್ಲಿದ್ದರು. ನಂತರ ಹೆಚ್ಚಿನ ಚಿಕಿತ್ಸೆ ನೀಡಿದ್ಯಾದರೂ ಸ್ವಲ್ಪ

ಬಂಟ್ವಾಳ: ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತ್ಯು Read More »

ಕೊಣಾಜೆ: ಗಾಂಜಾ ಮಾರಾಟ|ಆರೋಪಿ ವಶ

ಸಮಗ್ರ ನ್ಯೂಸ್:‌ ಲವ ಕುಶ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೃದ್ಧರೋರ್ವರನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಕೊಣಾಜೆ ನರಿಂಗಾನ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮೂಲತಃ ಕಾಟಿಪಳ್ಳ ನಿವಾಸಿ, ಪ್ರಸಕ್ತ ನೆತ್ತಿಲಪದವಿನಲ್ಲಿ ವಾಸವಿರುವ ಉಮ್ಮರ್ ಫಾರೂಕ್ ಯಾನೆ ಮಂಗಳ್ ಫಾರೂಕ್ ಯಾನೆ ಕುಶ್‌ಮೋನು (68) ಎಂದು ಗುರುತಿಸಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು, 20 ಸಾವಿರ ಮೌಲ್ಯದ 998 ಗ್ರಾಂ ಗಾಂಜಾ ಹಾಗೂ ಆಕ್ಟಿವಾ ಸ್ಕೂಟರ್‌ನ್ನು ವಶಪಡಿಸಿಕೊಂಡಿದ್ದಾರೆ.

ಕೊಣಾಜೆ: ಗಾಂಜಾ ಮಾರಾಟ|ಆರೋಪಿ ವಶ Read More »

ಬೆಳ್ತಂಗಡಿ :ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

ಸಮಗ್ರ ನ್ಯೂಸ್ : ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವ್ಯಕ್ತಿಗೆ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವೀಸಾ ನೀಡದೆ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು, ಅರಸಿನಮಕ್ಕಿ ನಿವಾಸಿ ರೆಜಿ ಕೆ ಎ ಎಂಬವರ ಮಗ ಆಲ್ವಿನ್ ಕೆ.ಆರ್ ಎಂಬವರೇ ಲಕ್ಷಾಂತರ ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ವ್ಯಕ್ತಿ. ಆರೋಪಿಯನ್ನು ಮನೋಜ್ ಎಂದು ಗುರುತಿಸಲಾಗಿದೆ. ಆಲ್ವಿನ್ ಕೆ ಎ ಅವರಿಗೆ ಮನೋಜ್

ಬೆಳ್ತಂಗಡಿ :ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ Read More »

ಐಸಿಸಿ ಟಿ-20 ರಾಂಕಿಂಗ್/ ಅಗ್ರಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್ ಯಾದವ್

ಸಮಗ್ರ ನ್ಯೂಸ್: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗqಗೊಳಿಸಿರುವ ಟ್ವೆಂಟಿ-20 ಬ್ಯಾಟಿಂಗ್ ರಾಂಕಿಂಗ್ ಪಟ್ಟಿಯಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಸೂರ್ಯಕುಮಾರ್ ಒಟ್ಟು 861 ರೇಟಿಂಗ್ ಪಾಯಿಂಟ್ ಹೊಂದಿದ್ದಾರೆ. ಇಂಗ್ಲೆಂಡ್ ಫಿಲ್ ಸಾಲ್ಟ್ ಎರಡು ಮತ್ತು ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಯುವ ಭರವಸೆಯ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ 714 ರೇಟಿಂಗ್ ಪಾಯಿಂಟ್ ಹೊಂದಿದ್ದು, 6ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಭಾರತದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ 660 ರೇಟಿಂಗ್ ಅಂಕಗಳೊಂದಿಗೆ

ಐಸಿಸಿ ಟಿ-20 ರಾಂಕಿಂಗ್/ ಅಗ್ರಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್ ಯಾದವ್ Read More »