March 2024

ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು

ಸಮಗ್ರ ನ್ಯೂಸ್‌ : ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ, ಮ್ಯಾಕ್ಸಿ, ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ ನದಿಗೆ ಈಜಾಡಲು ಬಂದಿದ್ದ ವೇಳೆ ಘಟನೆ ನಡೆದಿದೆ. ವಿನ್ಸಿ ಎಂಬವರ ಪತ್ನಿಯ ಮನೆ ಶಂಭೂರಿನಲ್ಲಿದ್ದು, ಇಲ್ಲಿಗೆ ಆಗ್ಗಾಗ್ಗೆ ಬಂದು ನೇತ್ರಾವತಿ ನದಿಯಲ್ಲಿ ಸ್ನಾನ […]

ಬಂಟ್ವಾಳ: ಈಜಲು ಬಂದ ವ್ಯಕ್ತಿ ನದಿ ನೀರಿನಲ್ಲಿ ಮುಳುಗಿ ಮೃತ್ಯು Read More »

ರಷ್ಯಾ ಅಧ್ಯಕ್ಷನಾಗಿ ವ್ಲಾದಿಮಿರ್ ಪುತಿನ್ ಪುನರಾಯ್ಕೆ/ ಸ್ಟಾಲಿನ್ ನಂತರ ಸುದೀರ್ಘ ಕಾಲ ರಷ್ಯಾವನ್ನು ಆಳಿದ ವ್ಯಕ್ತಿ ಎಂಬ ಹೆಗ್ಗಳಿಕೆ

ಸಮಗ್ರ ನ್ಯೂಸ್: ರಷ್ಯಾ ಅಧ್ಯಕ್ಷೀಯ ಚುನಾವಣೆ ಮೂರು ದಿನಗಳ ಕಾಲ ನಡೆದು, ಬರೋಬ್ಬರಿ 7.6 ಕೋಟಿ (ಶೇ.87.29) ಮತಗಳನ್ನು ಪಡೆಯುವ ಮೂಲಕ ಹಾಲಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಐದನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1999ರಲ್ಲಿ ಮೊದಲ ಬಾರಿಗೆ ಅಧ್ಯಕ್ಷರಾದ ಪುಟಿನ್ ಇದುವರೆಗೆ ಅಧ್ಯಕ್ಷ ಇಲ್ಲವೇ ಪ್ರಧಾನಿಯಾಗಿ ಸತತ ಅಧಿಕಾರ ನಡೆಸಿದ್ದಾರೆ. ಈ ಬಾರಿ ಗೆಲ್ಲುವುದರೊಂದಿಗೆ ಅವರ ಅಧಿಕಾರಾವಧಿ ಮತ್ತೆ 2030ರವರೆಗೆ ವಿಸ್ತರಣೆಗೊಂಡಿದೆ. ಈ ಮೂಲಕ ಅವರು ಸುದೀರ್ಘ ಅವಧಿಗೆ ದೇಶವನ್ನು ಆಳಿದ ಸ್ಟಾಲಿನ್ ನಂತರದ ಸ್ಥಾನ ಪಡೆದುಕೊಂಡಿದ್ದು,

ರಷ್ಯಾ ಅಧ್ಯಕ್ಷನಾಗಿ ವ್ಲಾದಿಮಿರ್ ಪುತಿನ್ ಪುನರಾಯ್ಕೆ/ ಸ್ಟಾಲಿನ್ ನಂತರ ಸುದೀರ್ಘ ಕಾಲ ರಷ್ಯಾವನ್ನು ಆಳಿದ ವ್ಯಕ್ತಿ ಎಂಬ ಹೆಗ್ಗಳಿಕೆ Read More »

ಮಂಗಳೂರು: ಗಾಂಜಾ ಮಾರಾಟ| ಇಬ್ಬರ ಬಂಧನ

ಸಮಗ್ರ ನ್ಯೂಸ್‌ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ನಡೆದಿದೆ. ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್‌ ಯಾನೆ ಪೊಂಗ ಅಶ್ರಫ್‌ (30), ಅದೇ ಗ್ರಾಮದ ತಿಲಕನಗರ ನಿವಾಸಿ ಮೊಹಮ್ಮದ್‌ ಅಲ್ಫಾಜ್‌ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ, ಮೊಬೈಲ್‌ ಫೋನ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ಗಾಂಜಾ ಮಾರಾಟ| ಇಬ್ಬರ ಬಂಧನ Read More »

ಹಿಂದೆ ಸರಿದ ಸಮುದ್ರ/ ಕೇರಳದಲ್ಲೊಂದು ವಿಚಿತ್ರ ಘಟನೆ

ಸಮಗ್ರ ನ್ಯೂಸ್: ಕೇರಳದ ಪುರಕ್ಕಾಡ್‍ನಲ್ಲಿ ಸಮುದ್ರವು ಏಕಾಏಕಿ ತೀರದಿಂದ ಸುಮಾರು 50 ಮೀಟರ್ ಸಮುದ್ರ ಹಿಂದೆ ಸರಿದು ಅಚ್ಚರಿ ಉಂಟು ಮಾಡಿದೆ. ಈ ಬೆಳವಣಿಗೆಯಿಂದ ಯಾವುದೇ ಅಪಾಯ ಉಂಟಾಗಿಲ್ಲವಾದರೂ, ತೀರದ ನಿವಾಸಿಗಳಿಗೆ ನಿದ್ದೆಯಿಲ್ಲದಂತೆ ಮಾಡಿದೆ ರಾತ್ರಿ ವೇಳೆ ಅಲೆಗಳ ಅಬ್ಬರ ಜೋರಾಗಿರುತ್ತದೆ. ಮುಂಜಾನೆ ವೇಳೆ ಇಂತಹ ವಿದ್ಯಮಾನ ಕಂಡು ಬಂದಿದೆ. ಈ ಹಿಂದೆ ಎರಡು ಬಾರಿ ಇದೇ ರೀತಿ ನಡೆದಿತ್ತು ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ. ಪುರಕ್ಕಾಡ್‍ನಿಂದ ದಕ್ಷಿಣಕ್ಕೆ 300 ಮೀಟರ್ ದೂರದಲ್ಲಿ ಈ ಘಟನೆ ನಡೆದಿದ್ದು,

ಹಿಂದೆ ಸರಿದ ಸಮುದ್ರ/ ಕೇರಳದಲ್ಲೊಂದು ವಿಚಿತ್ರ ಘಟನೆ Read More »

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ – ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ದೂರು

ಸಮಗ್ರ ನ್ಯೂಸ್: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆಯಿಂದಾಗಿ ರೋಗಿಗಳಿಗೆ ತೊಂದರೆಗಳಾಗುತ್ತಿದ್ದು ಇದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಕಾರಣರಾಗಿದ್ದಾರೆ. ಹಾಗಾಗಿ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಗರದ ನಿವಾಸಿಯೋರ್ವರು ದೂರು ನೀಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಸೋಮವಾರ ನಗರದಲ್ಲಿ ನಡೆದ ಅಪಘಾತದಲ್ಲಿ 70 ವಯಸ್ಸಿನ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ವೆನ್ಲಾಕ್ ಕರೆದುಕೊಂಡು ಹೋದಾಗ ಚಿಕಿತ್ಸೆ ಸಿಗಲಿಲ್ಲ. ತುರ್ತು ಚಿಕಿತ್ಸಾ ಸಿಗಲಿಲ್ಲ,

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ – ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ದ ದೂರು Read More »

ಉಳ್ಳಾಲ: ಹರೇಕಳ ಕೊಲೆಯತ್ನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸಮಗ್ರ ನ್ಯೂಸ್:‌ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನ ಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದ ಉಳ್ಳಾಲ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ ಪೊಲೀಸ್ ತಂಡ ಬಂಧಿಸಿದೆ. ಹರೇಕಳ ಕಡವಿನ ಬಳಿ ಬಳಿಯಿರುವ ಎನ್ .ಎಫ್ ಜನರಲ್ ಸ್ಟೋರ್ ಮಾಲೀಕ ಅಬ್ದುಲ್ ರಹಿಮಾನ್ ಎಂಬವರ ಮೇಲೆ 2017ರ ಮೇ.24 ರಂದು ರಿಕ್ಷಾದಲ್ಲಿ ಬಂದಿದ್ದ ಅಶ್ರಫ್ ಮತ್ತು

ಉಳ್ಳಾಲ: ಹರೇಕಳ ಕೊಲೆಯತ್ನ ಪ್ರಕರಣ- ತಲೆಮರೆಸಿಕೊಂಡಿದ್ದ ಆರೋಪಿ ಬಂಧನ Read More »

ಬಂಗಾಳದ ನೂತನ ಡಿಜಿಪಿಯಾಗಿ ಸಂಜಯ್ ಮುಖರ್ಜಿ/ 24 ಗಂಟೆಗಳಲ್ಲಿ ಬದಲಾದ ನೇಮಕಾತಿ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಡಿಜಿಪಿ ಹುದ್ದೆಗೆ ಸಂಜಯ್ ಮುಖರ್ಜಿ ಅವರನ್ನು ನೇಮಿಸುವಂತೆ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ವಿವೇಕ್ ಸಹಾಯ್ ಅವರನ್ನು ನೇಮಕ ಮಾಡಿದ 24 ಗಂಟೆಗಳಲ್ಲಿ ಚುನಾವಣಾ ಆಯೋಗ ಅವರಿಗೆ ಗೇಟ್ ಪಾಸ್ ನೀಡಿದೆ. ವಿವೇಕ್ ಸಹಾಯ್ ಅವರ ನೇಮಕವು ಅವರ ಹಿರಿತನವನ್ನು ಆಧರಿಸಿದ್ದರೂ, ಲೋಕಸಭಾ ಚುನಾವಣೆ ಮುಗಿಯುವ ಮೊದಲು ಅವರು ಮೇ ಕೊನೆಯ ವಾರದಲ್ಲಿ ನಿವೃತ್ತರಾಗುವುದರಿಂದ ಮುಖರ್ಜಿ ಅವರನ್ನು ಡಿಜಿಪಿಯಾಗಿ ಹೆಸರಿಸಿದೆ. 1989ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿರುವ ಮುಖರ್ಜಿ, ಚುನಾವಣಾ

ಬಂಗಾಳದ ನೂತನ ಡಿಜಿಪಿಯಾಗಿ ಸಂಜಯ್ ಮುಖರ್ಜಿ/ 24 ಗಂಟೆಗಳಲ್ಲಿ ಬದಲಾದ ನೇಮಕಾತಿ Read More »

ಪುತ್ತೂರು: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಲೇಟ್‌ ಮಾಡಿ ತಿಂದ ದುಷ್ಟರು

ಸಮಗ್ರ ನ್ಯೂಸ್‌ : ಕಳೆದ ಹಲವಾರು ತಿಂಗಳಿಂದ ನೆಲ್ಲಿಕಟ್ಟೆ ಪರಿಸರದ ಶಾಲೆ, ಆರೋಗ್ಯ ಕೇಂದ್ರಗಳಲ್ಲಿ ಚಿಲ್ಲರೆ ಕಳವು, ಸೊತ್ತುಗಳಿಗೆ ಹಾನಿ ಮಾಡುವ ಪ್ರಕರಣ ಸೇರಿ ಸದಾ ಒಂದಲ್ಲೊಂದು ಅವಾಂತರ ನಡೆಯುತ್ತಿದ್ದು, ಇದೀಗ ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳನುಗ್ಗಿದ ಕಿಡಿಗೇಡಿಗಳು ಪುಟಾಣಿಗಳಿಗೆಂದು ಇಡಲಾಗಿದ್ದ ಕೋಳಿ ಮೊಟ್ಟೆಗಳನ್ನು ಆಮ್ಲೇಟ್‌ ಮಾಡಿ ತಿಂದು ತೆರಳಿರುವ ಘಟನೆ ಮಾ.18ರಂದು ಬೆಳಕಿಗೆ ಬಂದಿದೆ. ನೆಲ್ಲಿಕಟ್ಟೆಯ ಶ್ರೀ ರಾಮಕೃಷ್ಣ ಸಮಾಜ ಸೇವಾ ಸಂಸ್ಥೆಯ ಬಳಿಯ ಅಂಗನವಾಡಿ ಕೇಂದ್ರಕ್ಕೆ ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಕೇಂದ್ರದ

ಪುತ್ತೂರು: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಲೇಟ್‌ ಮಾಡಿ ತಿಂದ ದುಷ್ಟರು Read More »

ಉಡುಪಿಯ ನಂ.1 ಬೀಡಿ ಮಾಲೀಕ ಟಿ.ಕೃಷ್ಣಪ್ಪ ನಿಧನ

ಸಮಗ್ರ ನ್ಯೂಸ್:‌ ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ಅವರು ಇಂದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರಿಗೆ 78 ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಟಿ.ಕೃಷ್ಣಪ್ಪ ಅವರು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರು‌ 51 ವರ್ಷಗಳ ಹಿಂದೆ ನಂ.1 ಬೀಡಿಯನ್ನು ಕರಾವಳಿಗೆ ಪರಿಚಯಿಸಿದ್ದರು. ಅಂದಿನಿಂದ ಇಂದಿನಿಂದವರೆಗೂ ನಂ.1 ಬೀಡಿ ಕರಾವಳಿಯಾದ್ಯಂತ ಪ್ರಖ್ಯಾತಿ ಪಡೆದಿದೆ. ಮೃತರು ಪತ್ನಿ, ಇಬ್ಬರು ಗಂಡು, ಮೂವರು ಹೆಣ್ಣು ಮಕ್ಕಳನ್ನು

ಉಡುಪಿಯ ನಂ.1 ಬೀಡಿ ಮಾಲೀಕ ಟಿ.ಕೃಷ್ಣಪ್ಪ ನಿಧನ Read More »

ಉಡುಪಿ: ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ಸಾವಿರಾರು ರೂ. ವಂಚನೆ

ಸಮಗ್ರ ನ್ಯೂಸ್‌ : ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರ್ ಎಂಬವರು ಮಾರ್ಚ್ 14ರಂದು ತನ್ನ ವ್ಯವಹಾರದ 6000ರೂ. ಹಣವನ್ನು ಗೂಗಲ್ ಪೇನಲ್ಲಿ ಕೈತಪ್ಪಿನಿಂದ ಬೇರೊಂದು ನಂಬರಿಗೆ ಕಳುಹಿಸಿದ್ದು, ಈ ಸಂಬಂಧ ಗೂಗಲ್‌ನಲ್ಲಿ ಸಿಕ್ಕಿದ ಕಸ್ಟಮರ್ ಕೇರ್‌ಗೆ ಕರೆ ಮಾಡಿದ್ದರು. ಹಣವನ್ನು ಹಿಂದಕ್ಕೆ ಪಡೆಯಲು 5 ಡಿಜಿಟ್‌ಗಳ ಸಂಖ್ಯೆಗಳ ಆ್ಯಪ್‌ನಲ್ಲಿ ನಮೂದಿಸುವಂತೆ ತಿಳಿಸಿದ್ದರು. ಅದರಂತೆ ನಂಬರ್ ನಮೂದಿಸಿದ ಬಳಿಕ ಇವರ ಖಾತೆಯಿಂದ

ಉಡುಪಿ: ಗೂಗಲ್ ಪೇ ಕಸ್ಟಮರ್ ಕೇರ್ ಹೆಸರಿನಲ್ಲಿ ಸಾವಿರಾರು ರೂ. ವಂಚನೆ Read More »