March 2024

ಮಂಗಳೂರು : ಆನ್‌ಲೈನ್ ಜಾಲತಾಣಕ್ಕೆ ಸಿಲುಕಿ ವ್ಯಕ್ತಿಯೊಬ್ಬರಿಗೆ ಲ.ರೂ ವಂಚನೆ

ಸಮಗ್ರ ನ್ಯೂಸ್: ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಆ್ಯಪ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಅಶೋಕ ನಗರದ ನಿವಾಸಿಯೋರ್ವರು ಫೇಸ್‌ಬುಕ್ ನೋಡುತ್ತಿದ್ದಾಗ ಅದರಲ್ಲಿ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಆ್ಯಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿ ಹೆಚ್ಚಿನ ಲಾಭಾಂಶ ಗಳಿಸಬಹುದು ಎಂಬ ಸಂದೇಶವಿತ್ತು. ಅದರಲ್ಲಿದ್ದ ಲಿಂಕ್ ತೆರೆದು ವಾಟ್ಸ್ ಆ್ಯಪ್ ಗ್ರೂಪ್‌ವೊಂದಕ್ಕೆ ಸೇರ್ಪಡೆಗೊಂಡಿದ್ದರು. ಬಳಿಕ ಅದರಲ್ಲಿ ಬಂದ ಸೂಚನೆಯಂತೆ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದರು. ಆದರೆ ಯಾವುದೇ ಲಾಭಾಂಶ ನೀಡಲಿಲ್ಲ. ಈ ಬಗ್ಗೆ […]

ಮಂಗಳೂರು : ಆನ್‌ಲೈನ್ ಜಾಲತಾಣಕ್ಕೆ ಸಿಲುಕಿ ವ್ಯಕ್ತಿಯೊಬ್ಬರಿಗೆ ಲ.ರೂ ವಂಚನೆ Read More »

ದ.ಕ. – ಉಡುಪಿ ಗಡಿಯಲ್ಲಿ ಚೆಕ್‌ಪೋಸ್ಟ್ ಕಾರ್ಯಾರಂಭ

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣೆ ಅಕ್ರಮಗಳ ನಿಗ್ರಹಕ್ಕಾಗಿ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ದ.ಕ. ಮತ್ತು ಉಡುಪಿ ಜಿಲ್ಲೆಗಳ ಗಡಿಭಾಗವಾಗಿರುವ ಹೆಜ ಮಾಡಿಯಲ್ಲಿ ಈಗಾಗಲೇ ಚೆಕ್‌ಪೋಸ್ಟ್ ಕಾರ್ಯಾರಂಭ ಮಾಡಿದೆ. ಇದೇ ವೇಳೆ ಟೋಲ್‌ಗೇಟ್ ತಪ್ಪಿಸಿ ಸಾಗಲು ವಾಹನ ಸವಾರರು ಬಳಸಿಕೊಳ್ಳುತ್ತಿದ್ದ ದ.ಕ. ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪಲಿಮಾರು – ಕರ್ನಿರೆ ಭಾಗ ದಲ್ಲೂ ಚೆಕ್‌ಪೋಸ್ಟ್ ನಿರ್ಮಾಣಕ್ಕೆ ಸೂಕ್ತ ಜಾಗದ ಪರಿಶೀಲನೆ ಅಂತಿಮ ಘಟ್ಟದಲ್ಲಿದೆ. ಪಲಿಮಾರು ಗ್ರಾಮದಿಂದ ಕರ್ನಿರೆ, ಬಳ್ಕುಂಜೆ ಮಾರ್ಗವಾಗಿ ದ.ಕ. ಜಿಲ್ಲೆಯ ಮೂಲ್ಕಿಯನ್ನು

ದ.ಕ. – ಉಡುಪಿ ಗಡಿಯಲ್ಲಿ ಚೆಕ್‌ಪೋಸ್ಟ್ ಕಾರ್ಯಾರಂಭ Read More »

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಕಾಡ್ಗಿಚ್ಚು

ಸಮಗ್ರ ನ್ಯೂಸ್ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿಯನ್ನು ಹತೋಟಿಗೆ ತರಲು ಅರಣ್ಯ ಇಲಾಖೆ ಹರಸಾಹಸ ಪಡುವ ಆತಂಕದ ಕ್ಷಣಗಳು ಉಂಟಾಗಿವೆ. ಭಾನುವಾರ ಸಂಜೆ ಕುದುರೆಮುಖ ಶಿಖರದ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ನಾವೂರು ಗ್ರಾಮದ ತೊಳಲಿ ಏಳುಸುಟ್ಟು ಎಂಬ ಸ್ಥಳಕ್ಕೆ ಬೆಂಕಿ ವ್ಯಾಪಿಸಿದೆ. ಬಿಸಿಲಿನ ತಾಪ ಹಾಗೂ ಗಾಳಿಯ ರಭಸಕ್ಕೆ ಹಲವು ಗಿಡಗಳು ಒಣಗಿ ಬೆಂಕಿ ವ್ಯಾಪಿಸಿದ್ದು ನಿಯಂತ್ರಣಕ್ಕೂ ಕಷ್ಟವಾಗಿದೆ. ನಾವೂರು ಮುಖ್ಯರಸ್ತೆಯಿಂದ ಸುಮಾರು 10 ಕಿ.ಮೀ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಕಾಡ್ಗಿಚ್ಚು Read More »

ಸಿಎಂ ಮೀಟಿಂಗ್ ಗೆ ತಟ್ಟಿದ ನೀತಿ ಸಂಹಿತೆ ಬಿಸಿ..!

ಸಮಗ್ರ ನ್ಯೂಸ್: ಇಂದು ಕುಡಿಯುವ ನೀರಿನ ಸಮಸ್ಯೆ ಸಂಬಂಧ ಮಧ್ಯಾಹ್ನ 12 ಗಂಟೆಗೆ ಸಿಎಂ ಕರೆದಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ. ಸಭೆ ನಡೆಸಲು ಚುನಾವಣಾ ಆಯೋಗದಿಂದ ನಿರ್ಬಂಧ ಹೇರಲಾಗಿದೆ. ಸಭೆ ನಡೆಸದೆ ಕೇವಲ ಅಧಿಕಾರಿಗಳಿಂದ ಮಾಹಿತಿ ಪಡೆಯುವಂತೆ ಸೂಚಿಸಲಾಗಿದೆ. ಬಿಬಿಎಂಪಿ, BWSSB, ಬಿಡಿಎ ಅಧಿಕಾರಿಗಳಿಂದ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಮಾಹಿತಿ ಪಡೆಯಲಿದ್ದಾರೆ.

ಸಿಎಂ ಮೀಟಿಂಗ್ ಗೆ ತಟ್ಟಿದ ನೀತಿ ಸಂಹಿತೆ ಬಿಸಿ..! Read More »

ಬದಲಾದ ಕಾಶ್ಮೀರ/ ಕಣಿವೆ ರಾಜ್ಯದಲ್ಲೀಗ ಫಾರ್ಮುಲಾ 4 ಕಾರುಗಳ ಘರ್ಜನೆ

ಸಮಗ್ರ ನ್ಯೂಸ್: ಕಲ್ಲೆಸೆತಕ್ಕೆ ಸುದ್ದಿಯಾಗುತ್ತಿದ್ದ ಕಾಶ್ಮೀರದ ಬೀದಿಗಳಲ್ಲಿ ಇದೇ ಮೊದಲ ಬಾರಿಗೆ ಫಾರ್ಮುಲಾ 4 ಕಾರು ರೇಸ್ ಆಯೋಜಿಸಲಾಗಿದ್ದು, ಕಣಿವೆ ರಾಜ್ಯ ಕಾಶ್ಮೀರದ ಶ್ರೀನಗರ ದಾಲ್ ಸರೋವರದ ದಡದಲ್ಲಿ ಫಾರ್ಮುಲಾ 4 ಕಾರುಗಳ ಘರ್ಜನೆ ಜಗತ್ತಿನ ಗಮನಸೆಳೆದಿದೆ. ದಾಲ್ ಸರೋವರದ ದಡದಲ್ಲಿರುವ ಲಲಿತ್ ಘಾಟ್‍ನಿಂದ ನೆಹರೂ ಪಾರ್ಕ್‍ವರೆಗಿನ 1.7 ಕಿಮೀ ಟ್ರ್ಯಾಕ್‍ನಲ್ಲಿ ಸ್ಟೀಕ್ ರೇಸಿಂಗ್ ಕಾರುಗಳು ಭರ್ಜರಿ ಸದ್ದು ಮಾಡಿದವು. ಪ್ರಧಾನಿ ನರೇಂದ್ರ ಮೋದಿ ಖುದ್ದು ಈ ಕುರಿತು ಸಂತಸ ವ್ಯಕ್ತಪಡಿಸಿದ್ದು, ತುಂಬಾ ಸಂತೋಷವಾಗಿದೆ. ಇದು ಜಮ್ಮು

ಬದಲಾದ ಕಾಶ್ಮೀರ/ ಕಣಿವೆ ರಾಜ್ಯದಲ್ಲೀಗ ಫಾರ್ಮುಲಾ 4 ಕಾರುಗಳ ಘರ್ಜನೆ Read More »

ಇನ್ಮುಂದೆ ಭಾನುವಾರವೂ ಅಂಚೆ ಕಚೇರಿಗಳು ಓಪನ್

ಸಮಗ್ರ ನ್ಯೂಸ್ : ಇತ್ತೀಚೆಗೆ ಪೋಸ್ಟ್ ಆಫೀಸ್ ಕೆಲಸಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಗ್ರಾಹಕರ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಅಂಚೆ ಇಲಾಖೆ ಭಾನುವಾರದಂದು ರಾಜ್ಯದಾದ್ಯಂತ ಆಯ್ದ ಕೆಲವು ಅಂಚೆ ಕಚೇರಿಗಳನ್ನು ತೆರೆಯಲು ಚಿಂತನೆ ನಡೆಸುತ್ತಿದೆ. ವಾರದ ನಿಯಮಿತ ಕೆಲಸದ ದಿನದಂದು ಅವುಗಳನ್ನು ಮುಚ್ಚಲಾಗುತ್ತದೆ, ಇದರಿಂದಾಗಿ ಸಾರ್ವಜನಿಕರಿಗೆ ವಾರದ ಎಲ್ಲಾ ದಿನಗಳಲ್ಲೂ ಕನಿಷ್ಠ ತಮ್ಮ ನಗರಗಳಲ್ಲಿ ಕೆಲವು ಸ್ಥಳಗಳಲ್ಲಿ ಅಂಚೆ ಸೇವೆಗಳು ಲಭ್ಯವಿರುತ್ತವೆ. ಭಾನುವಾರ ಕಾರ್ಯನಿರ್ವಹಿಸುವ ಅಂಚೆ ಕಚೇರಿಗಳಲ್ಲಿ ಹಣಕಾಸಿನ ಸೇವೆಗಳ ಅಗತ್ಯತೆಯನ್ನು ಸಾರ್ವಜನಿಕರು ಬಯಸುತ್ತಿದ್ದಾರೆ. ಆದ್ದರಿಂದ ನಾವು ಈಗ

ಇನ್ಮುಂದೆ ಭಾನುವಾರವೂ ಅಂಚೆ ಕಚೇರಿಗಳು ಓಪನ್ Read More »

ದ.ಕ – ಕೊಡಗು ಗಡಿಭಾಗದಲ್ಲಿ ನಕ್ಸಲ್ ಶಂಕೆ ಹಿನ್ನಲೆ| ಕೂಂಬಿಂಗ್ ಆರಂಭಿಸಿದ ಎಎನ್ಎಫ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಕೊಡಗು ಗಡಿ ಪ್ರದೇಶವಾದ ಕೂಜಿಮಲೆ ಭಾಗದಲ್ಲಿ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಶಂಕೆಯ ಹಿನ್ನಲೆಯಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ‌. ಕಾರ್ಕಳದಿಂದ ಆಗಮಿಸಿದ ಎಎನ್ಎಫ್ ತಂಡ ಕೂಜಿಮಲೆ ಸಮೀಪದ ಮೂರು ಕಡೆಗಳಾದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಪ್ರದೇಶಕ್ಕೆ ತೆರಳಿ ಕೂಂಬಿಂಗ್ ನಡೆಸಲು ತಯಾರಿ ನಡೆಸಿದ್ದಾರೆ. ಕೂಜಿಮಲೆಯಿಂದ ಎಎನ್ಎಫ್ ತಂಡ ಕೂಂಬಿಂಗ್ ಆರಂಭಿಸಿದರು. ಕೂಜಿಮಲೆಯ ಅಂಗಡಿಯೊಂದರಿಂದ ತಂಡ ಭೇಟಿ ನೀಡಿ ದಿನಸಿ ಸಾಮಗ್ರಿ ಪಡೆದುಕೊಂಡಿದ್ದು, ನಕ್ಸಲರೆಂಬ

ದ.ಕ – ಕೊಡಗು ಗಡಿಭಾಗದಲ್ಲಿ ನಕ್ಸಲ್ ಶಂಕೆ ಹಿನ್ನಲೆ| ಕೂಂಬಿಂಗ್ ಆರಂಭಿಸಿದ ಎಎನ್ಎಫ್ Read More »

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ/ ವರದಿ ಕೇಳಿದ ಸರ್ಕಾರ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಪೆÇೀಷಕ ವಲಯದಲ್ಲಿ ಭಾರೀ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್) ಆರಂಭಿಸಲು ಮುಂದಾಗಿದ್ದು, ಈ ಸಂಬಂಧ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಾನುಸಾರ ಮೂಲಸೌಲಭ್ಯ, ತರಗತಿ ಕೊಠಡಿಗಳು ಮತ್ತು ಬೋಧಕ ವರ್ಗದ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಿದೆ. ಮೊದಲ ಹಂತದಲ್ಲಿ 2000 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಎಲ್ಲ ಜಿಲ್ಲೆಗಳ ಉಪ

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ/ ವರದಿ ಕೇಳಿದ ಸರ್ಕಾರ Read More »

ವಿಫಲಗೊಂಡ ಸಂಧಾನ/ ಈಶ್ವರಪ್ಪ ಸ್ಪರ್ಧೆ ಖಚಿತ

ಸಮಗ್ರ ನ್ಯೂಸ್: ಬಂಡಾಯದ ಬಾವುಟ ಹಾರಿಸಿರುವ ಈಶ್ವರಪ್ಪ ಅವರ ಕೋಪ ಶಮನಕ್ಕೆ ಬಿಜೆಪಿ ವರಿಷ್ಠರು ನಡೆಸಿದ ಸಂಧಾನ ಮಾತುಕತೆ ಮುರಿದು ಬಿದ್ದಿದೆ. ಪುತ್ರ ಕೆ.ಇ.ಕಾಂತೇಶ್‍ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ ಮನೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಧಾಮೋಹನ್ ಅಗರ್‍ವಾಲ್ ಮಾಜಿ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ತು ಸದಸ್ಯ ರವಿಕುಮಾರ್, ಡಿ.ಎಸ್.ಅರಣ್ ಹಾಗೂ ಇತರೆ ನಾಯಕರು ಭೇಟಿ ನೀಡಿ ಮನವೊಲಿಕೆಗೆ ಯತ್ನಿಸಿದರಾದರೂ, ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ತಮ್ಮ ಪಟ್ಟು ಸಡಿಲಿಸಲಿಲ್ಲ.

ವಿಫಲಗೊಂಡ ಸಂಧಾನ/ ಈಶ್ವರಪ್ಪ ಸ್ಪರ್ಧೆ ಖಚಿತ Read More »

ಖ್ಯಾತ ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ

ಸಮಗ್ರ ನ್ಯೂಸ್: ಗಾಯಕಿ ಮಂಗ್ಲಿ ಅವರು ಕಾರು ಅಪಘಾತಕ್ಕೆ ಒಳಗಾಗಿದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭಿಸಿದೆ. ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳನ್ನು ನೀಡುತ್ತಿರುವ ಮಂಗ್ಲಿ ಈಗ ಕಾರ್ಯಕ್ರಮ ಮುಗಿಸಿ ಬರುವಾಗ ಈ ಘಟನೆ ನಡೆದಿದೆ. ಮಂಗ್ಲಿ ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ನಿನ್ನೆ ಹೈದರಾಬಾದ್​ಗೆ

ಖ್ಯಾತ ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ Read More »