March 2024

ತಲಪಾಡಿ: ಪಾದಚಾರಿಗೆ ಬೈಕ್ ಢಿಕ್ಕಿ|ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆಯೊಂದು ತಲಪಾಡಿಯಲ್ಲಿ ನಡೆದಿದೆ. ರಾಜೇಶ್ ಶೆಟ್ಟಿ (49) ಮೃತಪಟ್ಟ ವ್ಯಕ್ತಿ. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ ತಂಗುದಾಣದ ಬಳಿ ಬೇಕರಿ ಇದೆ. ಎದುರು ಭಾಗದಲ್ಲೇ ಹೆದ್ದಾರಿ ಸಮೀಪ ಮನೆ ಕೂಡಾ ಇದೆ. ಭಾನುವಾರ ತಲಪಾಡಿ ದೇವಿಪುರದಲ್ಲಿ ರಥೋತ್ಸವ ಇದ್ದ ಕಾರಣ ರಾಜೇಶ್ ಅವರು ತಮ್ಮ ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿದ್ದು, ಮಧ್ಯಾಹ್ನದ ಸಮಯದಲ್ಲಿ […]

ತಲಪಾಡಿ: ಪಾದಚಾರಿಗೆ ಬೈಕ್ ಢಿಕ್ಕಿ|ವ್ಯಕ್ತಿ ಮೃತ್ಯು Read More »

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆಗೆ ಯತ್ನ| ಹೋಟೆಲ್‌ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಹೈಡ್ರಾಮ..!

ಸಮಗ್ರ ನ್ಯೂಸ್: ಪ್ರೀತಿ ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಬಿಹಾರ ಮೂಲದ ನಾಸಿಂ ಬೇಗಂ(31) ಖಾಸಗಿ ಹೋಟೆಲ್‌ನ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಮದುವೆ ಆಗದಿದ್ದರೆ ಬಿಲ್ಡಿಂಗ್ ಮೇಲಿಂದ ಬಿದ್ದು ಸಾಯುವುದಾಗಿ ಹೇಳಿ ರಂಪಾಟ ಮಾಡಿದ್ದಾಳೆ. ಈಗಾಗಲೇ ಮದುವೆ ಆಗಿದ್ದ ಬಿಹಾರ ಮೂಲದ ನಾಸಿಂ ಬೇಗಂ, ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಆಸಿಬೂರ್ ರೆಹಮಾನ್ ಎಂಬಾತನನ್ನು ಪ್ರೀತಿಸಿದ್ದಳು. ನಂಜನಗೂಡಿನ ಹಿಮ್ಮಾವು ಗ್ರಾಮದಲ್ಲಿ ವಾಸವಾಗಿದ್ದ ಆಸಿಬೂರ್ ರೆಹಮಾನ್ ಏಷಿಯನ್ ಪೈಂಟ್ಸ್‌ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆಗೆ ಯತ್ನ| ಹೋಟೆಲ್‌ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಹೈಡ್ರಾಮ..! Read More »

ಬೆಂಗಳೂರಿನಲ್ಲಿ ಜಲಕ್ಷಾಮ| ಇಂದು ಅಧಿಕಾರಿಗಳ ಜೊತೆ ಸಿಎಂ ಸಭೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹುಮಟ್ಟದಲ್ಲಿ ಇದ್ದು, ಇಂದು ಈ ವಿಚಾರವಾಗಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ನಗರ ಡಿಸಿ, ಬಿಬಿಎಂಪಿ, ಬೆಂಗಳೂರು ಜಲಮಂಡಳಿ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ಹಿಂದೆ ಅಂದರೆ ಮಾ.5ರಂದು ರಾಜ್ಯದ ನೀರಿನ ಸಮಸ್ಯೆ ಕುರಿತು

ಬೆಂಗಳೂರಿನಲ್ಲಿ ಜಲಕ್ಷಾಮ| ಇಂದು ಅಧಿಕಾರಿಗಳ ಜೊತೆ ಸಿಎಂ ಸಭೆ Read More »

ಗೋದಾಮಿನಲ್ಲಿ ಅಗ್ನಿ ಅವಘಡ| ಬೆಂಕಿ ನಂದಿಸಲು ನೀರಿಲ್ಲದೆ ಅಗ್ನಿಶಾಮಕ ಸಿಬ್ಬಂದಿ ಪರದಾಟ

ಸಮಗ್ರ ನ್ಯೂಸ್: ಬೆಂಗಳೂರಿನ ಭೈರತಿ ಬಳಿ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗೋದಾಮಿನಲ್ಲಿ ಡಿ ಮಾರ್ಟ್ ಸೇರಿದಂತೆ ಪ್ರತಿಷ್ಠಿತ ಸೂಪರ್

ಗೋದಾಮಿನಲ್ಲಿ ಅಗ್ನಿ ಅವಘಡ| ಬೆಂಕಿ ನಂದಿಸಲು ನೀರಿಲ್ಲದೆ ಅಗ್ನಿಶಾಮಕ ಸಿಬ್ಬಂದಿ ಪರದಾಟ Read More »

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ – ಲಾರಿ ಢಿಕ್ಕಿ

ಸಮಗ್ರ ನ್ಯೂಸ್ : ಬಿ.ಸಿ.ರೋಡಿನ ಕೈಕಂಬದಲ್ಲಿ ಇತ್ತೀಚೆಗೆ ಕೆಎಸ್ಸಾರ್ಟಿಸಿ ಬಸ್ ಹಾಗೂ ಲಾರಿ ಢಿಕ್ಕಿ ಹೊಡೆದುಕೊಂಡ ಪರಿಣಾಮ ಬಸ್ ಪ್ರಯಾಣಿಕ ತೆಲಂಗಾಣದ ಸಿಕಂದರ್‌ಬಾದ್ ಮಲ್ಕಜ್‌ಗಿರಿ ನಿವಾಸಿ ಆರ್. ದೇದೀಪ್ ಶರ್ಮಾ ಗಾಯಗೊಂಡಿದ್ದು, ಅವರನ್ನು ಬಿ.ಸಿ. ರೋಡ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಬಸ್ಸನ್ನು ಚಾಲಕ ಅಂಬರೀಷ್ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಹೋಗಿ ಕೈಕಂಬದಲ್ಲಿ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ನೀಡಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ: ಕೆಎಸ್ಸಾರ್ಟಿಸಿ ಬಸ್ – ಲಾರಿ ಢಿಕ್ಕಿ Read More »

ಕಾರ್ಕಳ: ಆನ್‌ಲೈನ್ ವಂಚನೆ- ಲಕ್ಷಾಂತರ ರೂ ಕಳೆದಕೊಂಡ ಯುವಕ

ಸಮಗ್ರ ನ್ಯೂಸ್ : ಬೈಕ್ ಖರೀದಿಯ ಕನಸು ಕಂಡ ಕಾರ್ಕಳದ ಯುವಕನೊಬ್ಬ ಓಎಲ್‌ಎಕ್ಸ್ ನಲ್ಲಿ ಇದ್ದ ಮೊಬೈಲ್ ನಂಬರ್‌ಗೆ ಕರೆ ಮಾಡಿ ಮೋಸದ ಜಾಲಕ್ಕೆ ಬರೋಬರಿ ರೂ. 1,18,139 ಕಳೆದುಕೊಂಡು ನ್ಯಾಯ ಕೋರಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ಮೆಟ್ಟಲೇರಿದ ಘಟನೆ ನಡೆದಿದೆ. ಇರ್ಫಾನ್ (27) ಎಂಬಾತ ಮೋಸ ಹೋದ ವ್ಯಕ್ತಿ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಗೆ ದೂರು ದಾಖಲಿಸಿದ್ದಾರೆ. ಇವರು ಬೈಕ್ ಖರೀದಿ ಮಾಡಲು ಸಾಮಾಜಿಕ ಜಾಲತಾಣವಾದ olx ನಲ್ಲಿ ಹುಡುಕಾಟ ನಡೆಸುತ್ತಿರುವ ಸಮಯ

ಕಾರ್ಕಳ: ಆನ್‌ಲೈನ್ ವಂಚನೆ- ಲಕ್ಷಾಂತರ ರೂ ಕಳೆದಕೊಂಡ ಯುವಕ Read More »

ಬಿಸಿಲ ಬೇಗೆಗೆ ತಂಪೆರೆದ ವರುಣ| ಮಲೆನಾಡು ಸೇರಿ ಹಲವೆಡೆ ಮಳೆ ಸಿಂಚನ

ಸಮಗ್ರ ನ್ಯೂಸ್: ಬರ ಮತ್ತು ಬಿಸಿಲಿನ ಬೇಗೆಯಿಂದ ತತ್ತರಿಸಿದ ರಾಜ್ಯದ ಕೆಲವು ಭಾಗದಲ್ಲಿ ಮಾರ್ಚ್ ನಲ್ಲಿಯೇ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಬಸವನಹಳ್ಳಿ, ಐದಳ್ಳಿ, ಮಾಕೋಡು, ಹುಣಸೆಹಳ್ಳಿ ಮೊದಲಾದ ಕಡೆ ಮಳೆಯಾಗಿದೆ. ಬೀದರ್ ಜಿಲ್ಲೆಯ ಔರಾದ, ಬಾಲ್ಕಿ ತಾಲೂಕಿನ ಹಲವು ಕಡೆ ಭಾನುವಾರ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ಹಲವು ಕಡೆ ಇನ್ನೊಂದು ವಾರ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಬೀದರ್, ಧಾರವಾಡ, ವಿಜಯಪುರ, ಕಲಬುರಗಿ ಸೇರಿದಂತೆ ವಿವಿಧೆಡೆ ಮಳೆ

ಬಿಸಿಲ ಬೇಗೆಗೆ ತಂಪೆರೆದ ವರುಣ| ಮಲೆನಾಡು ಸೇರಿ ಹಲವೆಡೆ ಮಳೆ ಸಿಂಚನ Read More »

ಚುನಾವಣಾ ಬಾಂಡ್ ಗಳ ಅಂಕಿಅಂಶ ಬಹಿರಂಗ| ಬಿಜೆಪಿಯದ್ದೇ ಸಿಂಹಪಾಲು!!

ಸಮಗ್ರ ನ್ಯೂಸ್: ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಹೊಸ ಅಂಕಿಅಂಶಗಳನ್ನು ಚುನಾವಣಾ ಆಯೋಗ ಭಾನುವಾರ ಬಹಿರಂಗಪಡಿಸಿದೆ. ಚುನಾವಣಾ ಆಯೋಗವು ಈ ವಿವರಗಳನ್ನು ಮುಚ್ಚಿದ ಲಕೋಟೆಗಳಲ್ಲಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು ಮತ್ತು ನಂತರ ಡೇಟಾವನ್ನು ಸಾರ್ವಜನಿಕಗೊಳಿಸುವಂತೆ ಕೇಳಲಾಯಿತು. ಏಪ್ರಿಲ್ 12, 2019 ರ ಮೊದಲು ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಚುನಾವಣಾ ಬಾಂಡ್ಗಳ ಮೂಲಕ 656.5 ಕೋಟಿ ರೂ.ಗಳನ್ನು ಸ್ವೀಕರಿಸಿದೆ. ಚುನಾವಣಾ ಬಾಂಡ್ಗಳ ಬಹಿರಂಗಪಡಿಸುವಿಕೆಯ ಪ್ರಮುಖ ಅಂಶಗಳು ಇಲ್ಲಿವೆ ಮಾಹಿತಿಯ ಪ್ರಕಾರ, 1)ತಮಿಳುನಾಡಿನ ಆಡಳಿತ ಪಕ್ಷವು ಮಾರ್ಟಿನ್ ಕಂಪನಿಯಿಂದ 509

ಚುನಾವಣಾ ಬಾಂಡ್ ಗಳ ಅಂಕಿಅಂಶ ಬಹಿರಂಗ| ಬಿಜೆಪಿಯದ್ದೇ ಸಿಂಹಪಾಲು!! Read More »

ಪುತ್ತೂರು: ಶಾಸಕ ಅಶೋಕ್ ರೈ ಬೆಂಬಲಿಗರಿಂದ ದಾಂಧಲೆ ಪ್ರಕರಣ| 15ಮಂದಿ ವಿರುದ್ಧ ಕೇಸು ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಕೆ. ಅವರ ಮನೆಗೆ ಶಾಸಕ ಅಶೋಕ್ ರೈ ಬೆಂಬಲಿಗರು ನುಗ್ಗಿ ಪುಂಡಾಟ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿರುವ ಜಯಾನಂದ ಮನೆಗೆ ರೌಡಿಶೀಟರ್ ಪ್ರಜ್ವಲ್ ರೈ ಮತ್ತು ಕಾಂಗ್ರೆಸ್ ಬೆಂಬಲಿಗರು ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ. ಘಟನೆ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಮೊಕದ್ದಮೆ‌ ದಾಖಲಾಗಿದೆ. ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್ ನಡೆದಿದ್ದು ಪುತ್ತೂರು ಶಾಸಕರು ಅತೀ ಹೆಚ್ಚು

ಪುತ್ತೂರು: ಶಾಸಕ ಅಶೋಕ್ ರೈ ಬೆಂಬಲಿಗರಿಂದ ದಾಂಧಲೆ ಪ್ರಕರಣ| 15ಮಂದಿ ವಿರುದ್ಧ ಕೇಸು ದಾಖಲು Read More »

ಮಲೆನಾಡಿನಲ್ಲಿಂದು ಮೋದಿ ಅಬ್ಭರ| ಶಿವಮೊಗ್ಗದಲ್ಲಿ ಕೇಸರಿ ರಣಕಹಳೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಇಂದು(ಮಾ18) ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತವರು ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಬಳಿಕ ರಾಜ್ಯದಲ್ಲಿ ಮೋದಿಯವರ ಮೊದಲ ಪ್ರಚಾರ ಸಭೆ ಇದಾಗಿದೆ. ಶನಿವಾರದ ಕಲಬುರಗಿ ಸಮಾವೇಶದ ಬೆನ್ನಹಿಂದೆಯೇ ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬಿಜೆಪಿ ಪ್ರಚಾರಕ್ಕೆ ಭರ್ಜರಿ ಚಾಲನೆ ನೀಡಲಿದ್ದಾರೆ. ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಧ್ಯಾಹ್ನ 1.15ಕ್ಕೆ

ಮಲೆನಾಡಿನಲ್ಲಿಂದು ಮೋದಿ ಅಬ್ಭರ| ಶಿವಮೊಗ್ಗದಲ್ಲಿ ಕೇಸರಿ ರಣಕಹಳೆ Read More »