March 2024

ಪುತ್ತೂರು: ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್| ಬಿಜೆಪಿ ಜಾಲತಾಣ ಪ್ರಮುಖ್ ಮನೆಗೆ ತೆರಳಿ ಶಾಸಕ ರೈ ಬೆಂಬಲಿಗರ ದಾಂಧಲೆ!?

ಸಮಗ್ರ ನ್ಯೂಸ್: ಕ್ಷೇತ್ರಕ್ಕೆ ಅತೀ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕಾರ್ಯ ನಡೆಸಿರುವುದಾಗಿ ಜಾಲತಾಣಗಳಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗರು‌ ಹಾಕಿರುವ ಪೋಸ್ಟ್ ಗಳ ಬಗ್ಗೆ ಅನುದಾನ ಬಳಕೆ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಕೇಳಿಕೊಂಡಿದ್ದು, ಇದೇ ವಿಚಾರವಾಗಿ ಶಾಸಕ ಅಶೋಕ್ ರೈ ಬೆಂಬಲಿಗರೆನ್ನಲಾದ ತಂಡ ದಾಂಧಲೆ ನಡೆಸಿರುವ ಘಟನೆ ಪುತ್ತೂರಿನಿಂದ ವರದಿಯಾಗಿದೆ. ದಕ್ಷಿಣ ಕನ್ನಡ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಬಂಗೇರ ಮನೆಗೆ ತೆರಳಿ ಕಾಂಗ್ರೆಸ್ ಕಾರ್ಯಕರ್ತರು ಕಿರಿಕ್ ಮಾಡಿದ್ದು, ಚುನಾವಣಾ […]

ಪುತ್ತೂರು: ಅನುದಾನ ಹಂಚಿಕೆ ವಿಚಾರದಲ್ಲಿ ಕಿರಿಕ್| ಬಿಜೆಪಿ ಜಾಲತಾಣ ಪ್ರಮುಖ್ ಮನೆಗೆ ತೆರಳಿ ಶಾಸಕ ರೈ ಬೆಂಬಲಿಗರ ದಾಂಧಲೆ!? Read More »

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ

ಸಮಗ್ರ ನ್ಯೂಸ್ : ಸರಕಾರಿ ಬಸ್ ಮತ್ತು ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಬಾಂಬಿಲ ಎಂಬಲ್ಲಿ ಸಂಭವಿಸಿದೆ. ಕಾರು ಚಾಲಕ, ಕಾವಳಪಡೂರು ಗ್ರಾಮದ ಮಧ್ವಪಲ್ಕೆ ನಿವಾಸಿ ಸಿರಿಲ್ ಡಿಸೋಜ ಅವರು ಗಾಯಾಳುವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ ಬಸ್, ವಗ್ಗ ಕಡೆಗೆ ಸಾಗುತ್ತಿದ್ದ ಕಾರ್‌ಗೆ ಬಾಂಬಿಲ ಸೇತುವೆ ಬಳಿಯ ತಿರುವಿನಲ್ಲಿ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಯಲ್ಲಿ ಕಾರಿನ ಮುಂಭಾಗ ಬಸ್‌ನ

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಢಿಕ್ಕಿ Read More »

ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ

ಸಮಗ್ರ ನ್ಯೂಸ್: ಕೇಂದ್ರದ ಸಚಿವ ಸಂಪುಟ ಚುನಾವಣಾ ಆಯೋಗದ ಶಿಫಾರಸನ್ನು ರಾಷ್ಟ್ರಪತಿಯವರಿಗೆ ರವಾನಿಸಿದ್ದು, ಈ ಲೋಕಸಭಾ ಚುನಾವಣೆಯ ಪ್ರಕ್ರಿಯೆ ಭಾನುವಾರ ಆರಂಭಗೊಂಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಏಳು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣಾ ಸಂಬಂಧ ಅಧಿಸೂಚನೆ ಹೊರಡಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ. ಅಧಿಸೂಚನೆ ನಂತರದಲ್ಲಿ ನಿರ್ದಿಷ್ಟ ಕಾಲಮಿತಿಯಲ್ಲಿ ನಾಮನಿರ್ದೇಶನ ಪ್ರಕ್ರಿಯೆ ನಡೆಯುತ್ತದೆ. ಲೋಕಸಭಾ ಚುನಾವಣೆಯು ಮೊದಲ ಹಂತದಲ್ಲಿ ಏ.19ರಂದು 102 ಕ್ಷೇತ್ರಗಳಿಗೆ ನಡೆಯಲಿದ್ದು, ಮಾ.20ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಪ್ರಜಾಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 14(2)ರ

ರಾಷ್ಟ್ರಪತಿಯವರಿಗೆ ಆಯೋಗದ ಶಿಫಾರಸು/ ಆರಂಭಗೊಂಡಿತು ಚುನಾವಣಾ ಪ್ರಕ್ರಿಯೆ Read More »

ಲೋಕಸಭಾ ಚುನಾವಣೆ/ ಮಾ. 20ಕ್ಕೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.20ರಂದು ಅಂತಿಮವಾಗುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಇಂದು ಮುಂಬೈನಲ್ಲಿ ನಡೆಯಲಿರುವ ಭಾರತ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ನಾವು ತೆರಳುತ್ತಿದ್ದೇವೆ. ಮಾ. 19ರಂದು ಸಿಇಸಿ ಸಭೆ ನಡೆಯಲಿದ್ದು, ಮಾ. 20ರಂದು ಪಟ್ಟಿ ಅಂತಿಮವಾಗಬಹುದು ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ರಾಜ್ಯದಲ್ಲಿ ತಾಲೂಕು, ಜಿಲ್ಲಾ

ಲೋಕಸಭಾ ಚುನಾವಣೆ/ ಮಾ. 20ಕ್ಕೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆ ಸಾಧ್ಯತೆ Read More »

ಫ್ರೀ ಕರೆಂಟ್ ನಿಂದ ಭಾರೀ ಹೊಡೆತ|ಬ್ಯಾಂಕ್‌ನಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಟ್ಟು ಸಾವಿರಾರು ಕೋಟಿ ಸಾಲ…!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಅದರಲ್ಲಿ ಗೃಹ ಜ್ಯೋತಿ ಯೋಜನೆ ಮೂಲಕ ಪ್ರತಿ ಮನೆ ಮನೆಗೆ 200 ಯೂನಿಟ್‌ವರೆಗೆ ಬಳಕೆಗೆ ಅವಕಾಶವನ್ನು ಕೊಡಲಾಗುತ್ತಿದೆ. ಆದರೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಭಾರಿ ನಷ್ಟದಲ್ಲಿದೆ ಎಂಬ ಸಂಗತಿ ಹೊರಬಿದ್ದಿದೆ. ಅಷ್ಟೇ ಅಲ್ಲದೆ, ತನ್ನ ಯಂತ್ರೋಪಕರಣಗಳನ್ನೇ ಅಡವಿಟ್ಟು ಈವರೆಗೆ ಕೋಟಿ ಕೋಟಿ ಹಣವನ್ನು ಪಡೆಯಲಾಗಿದೆ. ಈ ವರ್ಷವೊಂದರಲ್ಲಿಯೇ ಬರೋಬ್ಬರಿ 33 ಸಾವಿರ ಕೋಟಿ ರೂಪಾಯಿ ಸಾಲವನ್ನು ಪಡೆಯಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಬ್ಯಾಂಕ್‌ನಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಟ್ಟು

ಫ್ರೀ ಕರೆಂಟ್ ನಿಂದ ಭಾರೀ ಹೊಡೆತ|ಬ್ಯಾಂಕ್‌ನಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಟ್ಟು ಸಾವಿರಾರು ಕೋಟಿ ಸಾಲ…! Read More »

ಮಂಗಳೂರು: ಮೊಹಮ್ಮದ್ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು

ಸಮಗ್ರ ನ್ಯೂಸ್ : ಮಂಗಲಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಜೈಲಿನಲ್ಲಿದ್ದ ಮೂವರು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುರತ್ಕಲ್ ಪೊಲೀಸರು ಈ ಮೂವರನ್ನು ಎ1, ಎ2, ಎ3 ಆರೋಪಿಗಳೆಂದು ಗುರುತಿಸಿ ಮಂಗಳೂರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಪ್ರಮುಖ ಆರೋಪಿಗಳಾದ ಬಂಟ್ವಾಳ ತಾಲೂಕಿನ ಕಾವಳಮಾಡೂರು ಗ್ರಾಮದ ಸುಹೇಲ್ ಶೆಟ್ಟಿ ಅಲಿಯಾಸ್ ಸುಭಾಷ್, ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಭಿಫೀಕ್ ಯಾನೆ ಮತ್ತು ಕುಳಾಯಿ ನಿವಾಸಿ ಮೋಹನ್ ಸಿಂಗ್

ಮಂಗಳೂರು: ಮೊಹಮ್ಮದ್ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು Read More »

ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ| ಬೈಕ್ ಸವಾರ ಗಂಭೀರ

ಸಮಗ್ರ ನ್ಯೂಸ್ : ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಬದನಾಜೆಯಲ್ಲಿ ನಡೆದಿದೆ. ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ಎಬ್ಸಿ ಬೈಕ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಕಾರಿನಲ್ಲಿ ಪ್ರಯಾಣಿಕರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತೀ ವೇಗದ ಚಾಲನೆಯಿಂದ ಈ ಅಪಘಾತ

ವಿಟ್ಲ: ಬೈಕ್ ಮತ್ತು ಕಾರು ನಡುವೆ ಅಪಘಾತ| ಬೈಕ್ ಸವಾರ ಗಂಭೀರ Read More »

ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್ : ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ ಅವರ ಮೃತದೇಹ ಶನಿವಾರ ಬೆಳಿಗ್ಗೆ ಮನೆ ಎದುರಿನ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು. ರಾತ್ರಿ ನಿದ್ದೆಯಿಂದ ಎದ್ದು ಮನೆ ಹೊರಗಡೆ ಬಂದ ಸದಾನಂದರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ. ಬೆAಗಳೂರಿನಲ್ಲಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಸಿಬ್ಬಂದಿಯಾಗಿದ್ದ ಸದಾನಂದ ಅವರು

ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…!

ಸಮಗ್ರ ನ್ಯೂಸ್: ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರಾಗಿದೆ. ಮತದಾರರನ್ನು ಸೆಳೆಯಲು ಈಗಾಗಲೇ ಕಾಂಗ್ರೆಸ್ ಪ್ಲಾನ್ ಮಾಡಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದ್ದು, ಕುಕ್ಕರ್, ತವಾ, ಊಟದ ಬಾಕ್ಸ್ ಇನ್ನೀತರ ವಸ್ತುಗಳ ಹಂಚಿಕೆ ಮಾಡಲಾಗುತ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಹೆಸರು ಈ ಗಿಫ್ಟ್ ಬಾಕ್ಸ್ ನಲ್ಲಿ ಇದೆ. ಹೊಸ ವರ್ಷ ಮುಗಿದರು ಅದರ ನೆಪದಲ್ಲಿ ಗಿಫ್ಟ್ ಪಾಲಿಟಿಕ್ಸ್ ನಡೆಯುತ್ತಿದೆ. ಇನ್ನೂ ರಾಮನಗರ ಮಾತ್ರವಲ್ಲದೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲೂ

ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…! Read More »

KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್| ಕಣ್ಣೀರು ಹಾಕಿದ ಸಿಬ್ಬಂದಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದೆ.ಈ ಶಕ್ತಿ‌ ಯೋಜನೆಗಾಗಿ ಕೆಎಸ್​ಆರ್​ಟಿಸಿಯಲ್ಲಿ ಮಹಿಳಾ ಕಂಡಕ್ಟರ್​ಗಳಿಗೆ ಹಗಲು ರಾತ್ರಿ ಶ್ರಮಿಸುವಂತೆ ಅಧಿಕಾರಿಗಳು ಟಾರ್ಚರ್ ನೀಡುತ್ತಿದ್ದಾರೆ ಎಂಬ ಆರೋಪ ಇದೀಗ ಕೇಳಿ ಬಂದಿದೆ. ತಿಂಗಳ ಋತುಚಕ್ರದ ಸಮಸ್ಯೆ ಇದ್ದರೂ ಡ್ಯೂಟಿ ಮಾಡಿ ಅಂತಾರೇ ಎಂದು ದೀಪಾಂಜಲಿ ನಗರದ KSRTC ಡಿಪೋ 5ರ ಕಂಡಕ್ಟರ್ ಮಂಜಮ್ಮ ವಿಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ. ಅಧಿಕಾರಿಗಳ ಕಿರುಕುಳದ ಬಗ್ಗೆ ಸಿಟಿಎಂ ಅಂತೋಣಿ ಜಾರ್ಜ್ ಅವರ ಗಮನಕ್ಕೆ ತಂದರೆ ಅವರು ದರ್ಪದ ಮಾತುಗಳನ್ನಾಡುತ್ತಾರೆ ಎಂದು

KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್| ಕಣ್ಣೀರು ಹಾಕಿದ ಸಿಬ್ಬಂದಿ Read More »