March 2024

ಚುನಾವಣೆ ಘೋಷಣೆ ಆಗ್ತಿದಂತೆ ಝಣಝಣ ಕಾಂಚಾಣ| ದಾಖಲೆ ಇಲ್ಲದೆ ಸಾಗಿಸ್ತಿದ್ದ 20 ಲಕ್ಷ ಹಣ ಸೀಜ್

ಸಮಗ್ರ ನ್ಯೂಸ್: ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲೆ ಕಾಂಚಾಣದ ಸದ್ದು ಕೇಳಿಬರುತ್ತಿದೆ. ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಹಣ, ಹೆಂಡ ಮತ್ತು ವಸ್ತುಗಳ ಆಮಿಷ ಒಡ್ಡಿ ಮತದಾರರನ್ನು ಸೆಳೆಯುವುದಕ್ಕೆ ಬ್ರೇಕ್​​ ಬೀಳುತ್ತದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಮತ್ತು ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ […]

ಚುನಾವಣೆ ಘೋಷಣೆ ಆಗ್ತಿದಂತೆ ಝಣಝಣ ಕಾಂಚಾಣ| ದಾಖಲೆ ಇಲ್ಲದೆ ಸಾಗಿಸ್ತಿದ್ದ 20 ಲಕ್ಷ ಹಣ ಸೀಜ್ Read More »

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ

ಸಮಗ್ರ ನ್ಯೂಸ್: ಇಂದು ಅಗಲಿದ ತಾರೆ ಪುನೀತ್ ರಾಜ್​ಕುಮಾರ್ ಅವರ 49ನೇ ಹುಟ್ಟುಹಬ್ಬ ಸಂಭ್ರಮ. ಮುಂಜಾನೆಯಿಂದಲೇ ಕಂಠೀರವ ಸ್ಟುಡಿಯೋದ ಅವರ ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಅಸಲಿಗೆ ಕಳೆದ ಎರಡು ದಿನಗಳಿಂದಲೂ ಸ್ಮಾರಕಕ್ಕೆ ಭೇಟಿ ನೀಡುತ್ತಿರುವ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ಇಂದು ಹುಟ್ಟುಹಬ್ಬವಾದ್ದರಿಂದ ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ. ರಾತ್ರಿಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಂದಹಾಗೆ ಅಪ್ಪುವಿನ ಈ ಹುಟ್ಟುಹಬ್ಬವನ್ನು ‘ಸ್ಪೂರ್ತಿಯ ಹಬ್ಬ’ವನ್ನಾಗಿ ಆಚರಿಸುತ್ತಿರುವುದು

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ Read More »

ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ

ಸಮಗ್ರ ನ್ಯೂಸ್: ಮಹಿಳಾ ಪ್ರೀಮಿಯರ್ ಲೀಗ್‍ನ ಎರಡನೇ ಆವೃತ್ತಿಯ ಫೈನಲ್ ಹಣಾಹಣಿ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಮೊದಲ ಬಾರಿಗೆ ಫೈನಲ್ ತಲುಪಿದೆ. ಈ ಎರಡು ತಂಡದಲ್ಲಿ ಯಾರೇ ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಸತತ ಎರಡನೇ ಬಾರಿಗೆ ಫೈನಲ್ ತಲುಪಿದ್ದರೆ, ಬೆಂಗಳೂರು ಮೊದಲ ಬಾರಿಗೆ ಅಂತಿಮ ಹಂತ

ಮಹಿಳಾ ಪ್ರೀಮಿಯರ್ ಲೀಗ್/ ಇಂದು ದೆಹಲಿಯಲ್ಲಿ ಫೈನಲ್ ಹಣಾಹಣಿ Read More »

ಬೆಳ್ಳಾರೆ : ಸುಲಿದು ಇಟ್ಟಿದ್ದ 5 ಗೋಣಿ ಅಡಿಕೆ ಕಳವು

ಸಮಗ್ರ ನ್ಯೂಸ್ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಲಿದು ದಾಸ್ತಾನು ಇಟ್ಟಿದ್ದ 5 ಗೋಣಿ ಅಡಿಕೆ ಕಳವಾಗಿರುವ ಘಟನೆ ಸುಳ್ಯದ ಕುಳ್ಳಂಪಾಡಿ ಎಂಬಲ್ಲಿ ನಡೆದಿದೆ. ಕುಳ್ಳಂಪಾಡಿ ಗ್ರಾಮ ನಿವಾಸಿ ಹಿರಿಯಣ್ಣ ಗೌಡ (54) ಎಂಬವರು ಮಾರ್ಚ್ 14 ರಂದು ಸಂಜೆ ತನ್ನ ಕುಟುಂಬ ಸಮೇತ ಪುತ್ತೂರು ತಾಲೂಕು ಮಾಡಾವಿನಲ್ಲಿರುವ ತನ್ನ ಅಕ್ಕನ ಮನೆಗೆ ಹೋದವರು ರಾತ್ರಿ ವಾಪಾಸು ಮನೆಗೆ ಬಂದಿದ್ದು, ಮರುದಿನ ಬೆಳಿಗ್ಗೆ ಎದ್ದು, ಕೊಟ್ಟಿಗೆಗೆ ಹೋಗಿ ನೋಡಿದಾಗ ಕೊಟ್ಟಿಗೆಯಲ್ಲಿ ಸುಮಾರು ಒಂದು ವಾರಗಳಿಂದ ಸುಲಿದು

ಬೆಳ್ಳಾರೆ : ಸುಲಿದು ಇಟ್ಟಿದ್ದ 5 ಗೋಣಿ ಅಡಿಕೆ ಕಳವು Read More »

ಬೆಳ್ತಂಗಡಿ: ರಸ್ತೆಗೆ ಓಡಿಬಂದ ಮಗುವಿಗೆ ರಿಕ್ಷಾ ಢಿಕ್ಕಿಯಾಗಿ ಮೃತ್ಯು

ಸಮಗ್ರ ನ್ಯೂಸ್ : ಆಟೋ ರಿಕ್ಷಾ ಢಿಕ್ಕಿಯಾಗಿ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು. ಮುಂಡಾಡಿಯಲ್ಲಿ ಚಂದ್ರಶೇಖರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ. ಈ ವೇಳೆ ಅದೇ ಸಮಯಕ್ಕೆ ಬಂದ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ

ಬೆಳ್ತಂಗಡಿ: ರಸ್ತೆಗೆ ಓಡಿಬಂದ ಮಗುವಿಗೆ ರಿಕ್ಷಾ ಢಿಕ್ಕಿಯಾಗಿ ಮೃತ್ಯು Read More »

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ಪುರುಷೋತ್ತ ಬಿಳಿ ಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಜೊತೆಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಉಳಿದ ಪ್ರಾಧಿಕಾರದ ಅಧ್ಯಕ್ಷ ಹಾಗೂ ಸದಸ್ಯರು

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ Read More »

ಲೋಕ ಸಮರಕ್ಕೆ ಡೇಟ್ ಫಿಕ್ಸ್| ನಗರದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ನಿನ್ನೆ ಡೆಟ್ ಫಿಕ್ಸ್ ಮಾಡಿದ್ದು, ಈ ಹಿನ್ನೆಲೆ ಬೆಂಗಳೂರು ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ

ಲೋಕ ಸಮರಕ್ಕೆ ಡೇಟ್ ಫಿಕ್ಸ್| ನಗರದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ Read More »

ಉಡುಪಿ: ಈಶ್ವರಪ್ಪನವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ; ಯಶ್ ಪಾಲ್ ಸುವರ್ಣ

ಸಮಗ್ರ ನ್ಯೂಸ್ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು. ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪನವರು ಬೇಸರಗೊಂಡಿರಬಹುದು. ಆದರೆ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಈಶ್ವರಪ್ಪ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಬೇಸರ ಶಮನಗೊಂಡು 28 ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಈಶ್ವರಪ್ಪ ಕೆಲಸ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ

ಉಡುಪಿ: ಈಶ್ವರಪ್ಪನವರಿಗೆ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ; ಯಶ್ ಪಾಲ್ ಸುವರ್ಣ Read More »

ಮಂಗಳೂರು: ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ;ರಮಾನಾಥ ರೈ

ಸಮಗ್ರ ನ್ಯೂಸ್: ರಾಜ್ಯದಲ್ಲಿ 18 ರಿಂದ 20 ಸ್ಥಾನಗಳು ಗೆಲ್ಲುವ ವಿಶ್ವಾಸ ಇದೆ, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ. ಕರಾವಳಿಯಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಇದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ಕೆಲಸ ಮಾಡಿಲ್ಲ ಅಂತ ಅಭ್ಯರ್ಥಿ ಬದಲಾವಣೆ ಮಾಡಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅನೇಕ ಹಗರಣಗಳು ನಡೆಸಿದೆ. ಪಾಕಿಸ್ತಾನದ ಮೂಲದ ಕಂಪೆನಿಯಿಂದಲೂ ಬಿಜೆಪಿ ದೇಣಿಗೆ ಪಡೆದಿದೆ.

ಮಂಗಳೂರು: ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತದೆ;ರಮಾನಾಥ ರೈ Read More »

ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ|ಸಿಸಿಟಿವಿಯಲ್ಲಿ ಸೆರೆ

ಸಮಗ್ರ ನ್ಯೂಸ್ : ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾಗಿದ್ದಾನೆ. ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಉಡುಪಿ: ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ|ಸಿಸಿಟಿವಿಯಲ್ಲಿ ಸೆರೆ Read More »