March 2024

ಕರ್ನಾಟಕದಲ್ಲಿ ಸಿಎಎ ಜಾರಿ/ ಇಂದು ಸಂಪುಟ ಸಭೆಯಲ್ಲಿ ಚರ್ಚೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಸಿಎಎ ಜಾರಿ ಕುರಿತು ಇಂದು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು. ಈ ಕಾನೂನಿನ ನಿಯಮಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗೆ ಬಿಜೆಪಿ ಸಿಎಎ ಜಾರಿಗೆ ತಂದಿದೆ. ಇದನ್ನು ಮೊದಲೇ ಏಕೆ ಜಾರಿಗೆ ತರಲಿಲ್ಲ? ಇಷ್ಟು ವರ್ಷಗಳ ಕಾಲ ಸುಮ್ಮನಿದ್ದದ್ದು ಏಕೆ? ಸೋಲಿನ ಭಯದಿಂದ ಸಿಎಎ ತರಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಸಿಎಎ ಜಾರಿ/ ಇಂದು ಸಂಪುಟ ಸಭೆಯಲ್ಲಿ ಚರ್ಚೆ Read More »

ದೆಹಲಿಯಲ್ಲಿ ಇಂದು ಕಿಸಾನ್ ಮದ್ದೂರ್ ಮಹಾಪಂಚಾಯತ್/ 30,000 ಕ್ಕೂ ಹೆಚ್ಚು ರೈತರು ಭಾಗವಹಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಪಂಜಾಬ್ ಮತ್ತು ಹರಿಯಾಣದಲ್ಲಿ, ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಜಾರಿಗಾಗಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತ ಸಂಘಟನೆಗಳು ಆಯೋಜಿಸಿರುವ ಕಿಸಾನ್ ಮದ್ದೂರ್ ಮಹಾಪಂಚಾಯತ್ ನಲ್ಲಿ 30,000 ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಪಂಜಾಬ್ ಮತ್ತು ಹರಿಯಾಣದ ರೈತರು ಬುಧವಾರದಿಂದ ದೆಹಲಿಗೆ ಆಗಮಿಸುತ್ತಿದ್ದು, ಸುಮಾರು 800 ಟ್ರಕ್‍ಗಳು, ಬಸ್‍ಗಳು ಮತ್ತು ರೈಲುಗಳ ಮೂಲಕ ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಇಂದು ಕಿಸಾನ್ ಮದ್ದೂರ್ ಮಹಾಪಂಚಾಯತ್/ 30,000 ಕ್ಕೂ ಹೆಚ್ಚು ರೈತರು ಭಾಗವಹಿಸುವ ಸಾಧ್ಯತೆ Read More »

ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ

ಸಮಗ್ರ ನ್ಯೂಸ್: ದೇಶಾದ್ಯಂತ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಪರಿಹಾರ ಕ್ರಮವಾಗಿ ಕೇಂದ್ರ ಸರ್ಕಾರವು 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸಲಾಗಿದೆ. ಪಿಟ್‍ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್ ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅಜೆರ್ಂಟಿನೋ, ಅಮೇರಿಕನ್ ಬುಲ್‍ಡಾಗ್, ಬೋರ್‍ಬೋಲ್, ಕಂಗಲ್, ಸೆಂಟ್ರಲ್ ಏಷ್ಯನ್ ಶೆಫರ್ಡ್ ಡಾಗ್, ಕಕೇಶಿಯನ್ ಶೆಫರ್ಡ್ ಡಾಗ್, ಸೌತ್ ರಷ್ಯನ್ ಶೆಫರ್ಡ್, ಟೊರ್ನ್‍ಜಾಕ್, ಟೊಸಪ್ಲಾನಿನಾಕ್, ಮಾಸ್ಟಿಫ್ಟ್, ರೊಟ್‍ವೀಲರ್, ಟೆರಿಯರ್‍ಗಳು, ರೊಡೇಸಿಯನ್ ರಿಡ್ಜ್ ಬ್ಯಾಕ್, ವುಲ್ಫ್ ಡಾಗ್ಸ್,

ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ Read More »

ಬೆಂಗಳೂರಿನಲ್ಲಿ ಇಂದಿನಿಂದ ಟೀನ್ ಇಂಡೀ ಫಿಲ್ಡ್ ಅವಾಡ್ರ್ಸ್ ಚಿತ್ರೋತ್ಸವ

ಸಮಗ್ರ ನ್ಯೂಸ್: ಟೀನ್ ಇಂಡೀ ಫಿಲ್ಡ್ ಅವಾಡ್ರ್ಸ್ ಚಿತ್ರೋತ್ಸವ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಇಂದಿನಿಂದ ಮೂರು ದಿನಗಳು ಜಯನಗರದ ಆರ್ ವಿ ವಿವಿ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳಿಗಾಗಿ ಆರ್ ವಿ ವಿಶ್ವವಿದ್ಯಾಲಯವು ಆಯೋಜಿಸುವ ಚಿತ್ರೋತ್ಸವ ಇದಾಗಿದೆ. ಒಟ್ಟಾರೆ 30 ದೇಶಗಳ 300 ಸಿನಿಮಾಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ. 13-17ವರ್ಷದೊಳಗಿನ ವಿದ್ಯಾರ್ಥಿಗಳು ನಿರ್ಮಿಸಿ ನಿರ್ದೇಶಿಸಿದ ಸಿನಿಮಾಗಳು ಇವಾಗಲಿವೆ.

ಬೆಂಗಳೂರಿನಲ್ಲಿ ಇಂದಿನಿಂದ ಟೀನ್ ಇಂಡೀ ಫಿಲ್ಡ್ ಅವಾಡ್ರ್ಸ್ ಚಿತ್ರೋತ್ಸವ Read More »

ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ: ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 2 ರೂ ಇಳಿಕೆ ಮಾಡಿದೆ. ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿಯಾಗಲಿದೆ. ಇಂದು ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 101.94 ಹಾಗೆ ಡಿಸೇಲ್ ಬೆಲೆ 87.89 ಆಗಿದೆ. ನಾಳೆಯಿಂದ ತಲಾ 2 ರೂಪಾಯಿ ಇಳಿಕೆಯಾಗಲಿದೆ.

ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ: ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿ Read More »

ದೊಡ್ಡಬಳ್ಳಾಪುರ:ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಹಾಸ್ಟೆಲ್ ನ ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಹಾಸ್ಟೆಲ್ ನಲ್ಲಿ ನಡೆದಿದೆ. ಆಂಧ್ರದ ಕರ್ನೂಲ್ ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ಎಂಬ ವಿದ್ಯಾರ್ಥಿ ರಾತ್ರಿ ಊಟ ಮಾಡಿದ ಬಳಿಕ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ವಿದ್ಯಾರ್ಥಿಯ ಸಾವಿನ ನಂತರ ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪದ ಮೇಲೆ ಐಪಿಸಿ 304 ಎ ದಾಖಲಿಸಲಾಗಿದೆ. ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ದಾಸರಿ ಬ್ರಹ್ಮಸಾಯಿ ರೆಡ್ಡಿ ಮಂಗಳವಾರ

ದೊಡ್ಡಬಳ್ಳಾಪುರ:ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು Read More »

ಟಿಕೆಟ್​ ಸಿಕ್ಕ ಖುಷಿಯಲ್ಲಿ ಯದುವೀರ್ ಒಡೆಯರ್: ಮೈಸೂರು ಕೊಡಗು ಕ್ಷೇತ್ರದ ಜನರಿಗೆ ಯದುವೀರ್ ಪತ್ರ

ಸಮಗ್ರ ನ್ಯೂಸ್: ಬಿಜೆಪಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿನ್ನೆ ಬಿಡುಗಡೆಗೊಳಿಸಿದೆ. ಅದರಲ್ಲಿ ಮೈಸೂರು-ಕೊಡಗು ಕ್ಷೇತ್ರ ನೂತನ ಅಭ್ಯರ್ಥಿಯಾಗಿ ಯದುವೀರ್​ಗೆ ಟಿಕೆಟ್​ ಘೋಷಣೆ ಮಾಡಲಾಗಿದೆ. ಟಿಕೆಟ್​ ಸಿಕ್ಕ ಸಂತೋಷದಲ್ಲಿ ಮೈಸೂರು ಕೊಡಗು ಕ್ಷೇತ್ರದ ಜನರಿಗೆ ಯದುವೀರ್ ಪತ್ರ ಬರೆದಿದ್ದಾರೆ. “ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರಗಳು. ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ

ಟಿಕೆಟ್​ ಸಿಕ್ಕ ಖುಷಿಯಲ್ಲಿ ಯದುವೀರ್ ಒಡೆಯರ್: ಮೈಸೂರು ಕೊಡಗು ಕ್ಷೇತ್ರದ ಜನರಿಗೆ ಯದುವೀರ್ ಪತ್ರ Read More »

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಸಹಕಾರಿ ಸಂಘದಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ ಕಾರ್ಯ ಪ್ರಗತಿಯಲ್ಲಿದೆ. ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಸಂಘದ ಸದಸ್ಯರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ. 31 ರವರೆಗೆ ಕಾಲವಕಾಶವನ್ನು ನೀಡಲಾಗಿದೆ.

ಸಂಪಾಜೆ:ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ಯಶಸ್ವಿನಿ ಕಾರ್ಡ್ ನೀಡಲು ನೋಂದಾವಣೆ| ಮಾ. 31 ಕೊನೆಯ ದಿನಾಂಕ Read More »

ಪಿಯುಸಿ ಪಾಸ್ ಆಗಿದ್ಯಾ? ಹಾಗಾದ್ರೆ ಈಗಲೇ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Uttara Kannada Gram Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಮಾರ್ಚ್​ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಕನ್ನಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಉತ್ತರ ಕನ್ನಡ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

ಪಿಯುಸಿ ಪಾಸ್ ಆಗಿದ್ಯಾ? ಹಾಗಾದ್ರೆ ಈಗಲೇ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ Read More »

ರಾಮನಗರದಲ್ಲಿದೆ ಉದ್ಯೋಗ ಮಾಡಲು ನಿಮಗೆ ಆಫರ್! ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: National Institute of Mental Health and Neuro Sciences ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರೋಗ್ರಾಮ್​ ಕೋ-ಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾರ್ಚ್​ 15, 2024 ಅಂದರೆ ನಾಳೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರಾಮನಗರದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-

ರಾಮನಗರದಲ್ಲಿದೆ ಉದ್ಯೋಗ ಮಾಡಲು ನಿಮಗೆ ಆಫರ್! ಈಗಲೇ ಅರ್ಜಿ ಸಲ್ಲಿಸಿ Read More »